Home> Business
Advertisement

Good News: ದೇಶದ ಕೋಟ್ಯಾಂತರ ರೈತರಿಗೆ ಮೋದಿ ಸರ್ಕಾರದ ಭರ್ಜರಿ ಉಡುಗೊರೆ, 24 ಸಾವಿರ ರೂ.ಗಳ ಸಬ್ಸಿಡಿಗೆ ಅನುಮೋದನೆ!

Fertilizer Subsidy Released: ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಖಾರಿಫ್ ಹಂಗಾಮಿಗೆ 24 ಸಾವಿರ ಕೋಟಿ ರೂ.ಗಳ ರಸಗೊಬ್ಬರ ಸಬ್ಸಿಡಿಗೆ ಅನುಮೋದನೆ ನೀಡಲಾಗಿದೆ. (Business News In Kannada)
 

Good News: ದೇಶದ ಕೋಟ್ಯಾಂತರ ರೈತರಿಗೆ ಮೋದಿ ಸರ್ಕಾರದ ಭರ್ಜರಿ ಉಡುಗೊರೆ, 24 ಸಾವಿರ ರೂ.ಗಳ ಸಬ್ಸಿಡಿಗೆ ಅನುಮೋದನೆ!

Fertilizer Subsidy Approved: ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪೂಡ್ತಾ ಸಭೆಯಲ್ಲಿ ಖಾರಿಫ್ ಹಂಗಾಮಿಗೆ ರಸಗೊಬ್ಬರ ಸಬ್ಸಿಡಿಗೆ ಅನುಮೋದನೆಯನ್ನು ನೀಡಲಾಗಿದೆ.  ಖಾರಿಫ್ ಹಂಗಾಮಿಗೆ 24 ಸಾವಿರ ಕೋಟಿ ರೂ.ಗಳ ರಸಗೊಬ್ಬರ ಸಬ್ಸಿಡಿಗೆ ಅನುಮೋದನೆ ಸಿಕ್ಕಿದೆ. ಇದಲ್ಲದೇ ಅಸ್ಸಾಂನಲ್ಲಿ ಟಾಟಾ ಕಂಪನಿಯ ಪ್ಯಾಕೇಜಿಂಗ್ ಪ್ಲಾಂಟ್‌ಗೆ ಕ್ಯಾಬಿನೆಟ್ ಅನುಮೋದನೆ ನೀಡಿದೆ. ಮೂಲಗಳ ಪ್ರಕಾರ, ಧೋಲೆರಾದಲ್ಲಿ ಟಾಟಾ ಗ್ರೂಪ್‌ನ ಸೆಮಿಕಂಡಕ್ಟರ್ ಸ್ಥಾವರಕ್ಕೆ ಅನುಮೋದನೆ ನೀಡಲಾಗಿದೆ. ಸಿಜಿ ಪವರ್ ನ ಒಸ್ಯಾಟ್ ಸ್ಥಾವರಕ್ಕೂ ಕ್ಯಾಬಿನೆಟ್ ಅನುಮೋದನೆ ನೀಡಿದೆ. (Business News In Kannada)

ಸಂಪುಟದ ನಿರ್ಧಾರದ ಬಗ್ಗೆ ಮಾಹಿತಿ ನೀಡಿದ ಕೇಂದ್ರ ಮಾಹಿತಿ ಮತ್ತು ಪ್ರಸಾರ  ಖಾತೆ ಸಚಿವ ಅನುರಾಗ್ ಠಾಕೂರ್, ಎನ್‌ಬಿಎಸ್ ಯೋಜನೆಯಡಿ 3 ಹೊಸ ರಸಗೊಬ್ಬರ ಶ್ರೇಣಿಗಳನ್ನು ಶಾಮೀಲುಗೊಳಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಮಾಹಿತಿ ನೀಡಿದ್ದಾರೆ. ಇದೇ ವೇಳೆ 2024 ರ ಖಾರಿಫ್ ಋತುವಿಗೆ (01.04.2024 ರಿಂದ 30.09.2024 ರವರೆಗೆ) ಫಾಸ್ಫೇಟಿಕ್ ಮತ್ತು ಪೊಟ್ಯಾಶ್ (ಪಿ ಮತ್ತು ಕೆ) ರಸಗೊಬ್ಬರಗಳ ಮೇಲೆ 24,420 ಕೋಟಿ ರೂ.ಗಳ ಪೋಷಕಾಂಶ ಆಧಾರಿತ ಸಬ್ಸಿಡಿಯನ್ನು ಅನುಮೋದಿಸಲಾಗಿದೆ ಎಂದು ಅವರು ಹೇಳಿದ್ದಾರೆ. ವಿಶ್ವಾದ್ಯಂತ ಯುರಿಯಾ ರಸಗೊಬ್ಬರದ ಬೆಲೆ ಹೆಚ್ಚಾಗಿದೆ, ಆದರೆ ಮೋದಿ ಸರ್ಕಾರ ಅವುಗಳ ಬೆಲೆ ಏರಿಕೆಗೆ ಅವಕಾಶ ನೀಡಿಲ್ಲ ಎಂದು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.

ಇದನ್ನೂ ಓದಿ-PM Surya Ghar Yojana 2024: ತಿಂಗಳಿಗೆ 300 ಯೂನಿಟ್ ಉಚಿತ ವಿದ್ಯುತ್, ಸಬ್ಸಿಡಿ ಸೇರಿದಂತೆ ರೂ.15000 ಆದಾಯ, ಒಂದೇ ಯೋಜನೆ, ಲಾಭ ಹಲವು!
 
ಸಾರಜನಕ, ರಂಜಕ ಮತ್ತು ಪೊಟ್ಯಾಶ್ ರಸಗೊಬ್ಬರಗಳ ಸಬ್ಸಿಡಿ ದರಗಳುಕೆಳೆಗಿನಂತಿವೆ
ಎನ್ಬಿಎಸ್ ನೀತಿಯ ಅಡಿಯಲ್ಲಿ ಪೌಷ್ಟಿಕಾಂಶದ ಸಬ್ಸಿಡಿ ದರಗಳನ್ನು ವಾರ್ಷಿಕ ಅಥವಾ ದ್ವೈವಾರ್ಷಿಕ ಆಧಾರದ ಮೇಲೆ ನಿರ್ಧರಿಸಲಾಗುತ್ತದೆ. ಅವುಗಳ ಆಧಾರದ ಮೇಲೆ 25 P&K ರಸಗೊಬ್ಬರಗಳಿಗೆ ಅಂದಾಜು ಸಬ್ಸಿಡಿಯನ್ನು ಲೆಕ್ಕಹಾಕಲಾಗುತ್ತದೆ. ಮುಂಬರುವ ಖಾರಿಫ್ 2024 ಋತುವಿನಲ್ಲಿ ಸಾರಜನಕಕ್ಕೆ ಪ್ರತಿ ಕೆಜಿಗೆ ರೂ 47.02; ರಂಜಕಕ್ಕೆ ಕೆಜಿಗೆ 28.72 ರೂ; ಪ್ರತಿ ಕೆಜಿ ಪೊಟ್ಯಾಷ್ ಗೆ 2.38 ರೂ., ಗಂಧಕಕ್ಕೆ 1.89 ರೂ. ಸಹಾಯಧನ ನಿಗದಿಪಡಿಸಲಾಗಿದೆ.

ಇದನ್ನೂ ಓದಿ-Investment Tips: ಅತಿ ಕಡಿಮೆ ಸಮಯದಲ್ಲಿ ಕೋಟ್ಯಾಧೀಶರಾಗುವ ಈ ಸಿಂಪಲ್ ರೂಲ್ ನಿಮಗೆ ತಿಳಿದಿರಲಿ!

ಪ್ರತಿ ಬ್ಯಾಂಕ್‌ ನಲ್ಲಿ 1,350 ರೂ.ಗಳ ಹಳೆಯ ದರದಲ್ಲಿ ರೈತರಿಗೆ ಡಿಎಪಿ ಲಭ್ಯವಿರುತ್ತದೆ. ಅದೇ ರೀತಿ, ಎನ್ಪಿಕೆ ಪ್ರತಿ ಚೀಲಕ್ಕೆ ರೂ 1,470 ಮತ್ತು ಎಮೋಪಿ ರೂ 1,677 ರ ಹಳೆಯ ದರಗಳಲ್ಲಿ ಲಭ್ಯವಿರುತ್ತದೆ. ದೇಶದಲ್ಲಿ ಉತ್ಪಾದನೆಯಾಗುವ ಮತ್ತು ಡಿಎಪಿಗೆ ಪರ್ಯಾಯವಾಗಿರುವ ಸಿಂಗಲ್ ಸೂಪರ್ ಫಾಸ್ಫೇಟ್ ಬಳಕೆಯನ್ನು ಹೆಚ್ಚಿಸಲು, ಎಸ್‌ಎಸ್‌ಪಿ ಮೇಲಿನ ಸರಕು ಸಾಗಣೆ ಸಬ್ಸಿಡಿಯನ್ನು ಮುಂದುವರಿಸಲಾಗುತ್ತಿದೆ. ಇದು ಮುಂಬರುವ ಖಾರಿಫ್ ಋತುವಿನಲ್ಲಿ ರೈತರಿಗೆ ಕೈಗೆಟುಕುವ ದರದಲ್ಲಿ ರಸಗೊಬ್ಬರಗಳ ಲಭ್ಯತೆಯನ್ನು ಖಚಿತಪಡಿಸುತ್ತದೆ.

ಇದನ್ನೂ ನೋಡಿ-

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Read More