Home> Business
Advertisement

ಸರ್ಕಾರದ ಹೊಸ ಪ್ಲಾನ್: ಪೆಟ್ರೋಲ್-ಡೀಸೆಲ್‌ನಿಂದ ಎಲ್‌ಪಿಜಿ ಸಿಲಿಂಡರ್‌ಗಳವರೆಗೆ ಎಲ್ಲವೂ ಅಗ್ಗ!

Cooking Gas Price:  ಏರುತ್ತಿರುವ ಹಣದುಬ್ಬರದಿಂದ ಸಾರ್ವಜನಿಕರಿಗೆ ಪರಿಹಾರ ನೀಡಲು ಸರ್ಕಾರ ಹೊಸ ಯೋಜನೆಯನ್ನು ರೂಪಿಸುತ್ತಿದೆ. ಇತ್ತೀಚೆಗೆ, ತೈಲ ಕಂಪನಿಗಳು ಗ್ಯಾಸ್ ಸಿಲಿಂಡರ್ ಮತ್ತು ಪೆಟ್ರೋಲ್‌ನಲ್ಲಿ ನಷ್ಟವನ್ನು ಅನುಭವಿಸುತ್ತಿಲ್ಲ ಎಂಬ ಮಾಹಿತಿಯು ವರದಿಯಿಂದ ಬಹಿರಂಗವಾಗಿದೆ.

ಸರ್ಕಾರದ ಹೊಸ ಪ್ಲಾನ್: ಪೆಟ್ರೋಲ್-ಡೀಸೆಲ್‌ನಿಂದ ಎಲ್‌ಪಿಜಿ ಸಿಲಿಂಡರ್‌ಗಳವರೆಗೆ ಎಲ್ಲವೂ ಅಗ್ಗ!

ಸರ್ಕಾರದ ಹೊಸ ಪ್ಲಾನ್:  ಸತತ ಮೂರು ತಿಂಗಳಿನಿಂದ ಚಿಲ್ಲರೆ ಹಣದುಬ್ಬರ ಕುಸಿತದ ನಂತರ, ದೇಶದಲ್ಲಿ ಚಿಲ್ಲರೆ ಹಣದುಬ್ಬರ ದರ ಮತ್ತೊಮ್ಮೆ ಜಿಗಿದಿದೆ. ಜುಲೈನಲ್ಲಿ 6.71%  ರಷ್ಟಿದ್ದ ಚಿಲ್ಲರೆ ಹಣದುಬ್ಬರವು  ಆಗಸ್ಟ್ನಲ್ಲಿ 7% ಕ್ಕೆ ಏರಿದೆ. ಏರುತ್ತಿರುವ ಹಣದುಬ್ಬರದಿಂದ ಸಾರ್ವಜನಿಕರಿಗೆ ಪರಿಹಾರ ನೀಡಲು ಮೋದಿ ಸರ್ಕಾರ ಹೊಸ ಯೋಜನೆಯನ್ನು ರೂಪಿಸುತ್ತಿದೆ. ಇತ್ತೀಚೆಗೆ, ತೈಲ ಕಂಪನಿಗಳು ಗ್ಯಾಸ್ ಸಿಲಿಂಡರ್ ಮತ್ತು ಪೆಟ್ರೋಲ್‌ನಲ್ಲಿ ನಷ್ಟವನ್ನು ಅನುಭವಿಸುತ್ತಿಲ್ಲ. ಆದರೆ, ಈಗ ಡೀಸೆಲ್ ನಿಂದ ನಷ್ಟವಾಗುತ್ತಿದೆ ಎಂಬ ಮಾಹಿತಿ ಬಹಿರಂಗವಾಗಿದೆ. ಈ ಮಧ್ಯೆ, ಸರ್ಕಾರವು ಪೆಟ್ರೋಲ್-ಡೀಸೆಲ್‌ನಿಂದ ಎಲ್‌ಪಿಜಿ ಸಿಲಿಂಡರ್‌ಗಳವರೆಗೆ ದರವನ್ನು ಕಡಿಮೆ ಮಾಡಲು ಯೋಜನೆ ರೂಪಿಸುತ್ತಿದೆ ಎಂದು ಹೇಳಲಾಗುತ್ತಿದೆ. ಏನಿದು ಸರ್ಕಾರದ ಪೂರ್ಣ ಯೋಜನೆ ಇಲ್ಲಿದೆ ಮಾಹಿತಿ. 

ತೈಲ ಕಂಪನಿಗಳ ನಷ್ಟವನ್ನು ಸರಿದೂಗಿಸಲು ಮತ್ತು ಹಣದುಬ್ಬರದಿಂದ ದೇಶವಾಸಿಗಳಿಗೆ ಪರಿಹಾರವನ್ನು ನೀಡಲು, ಇಂಡಿಯನ್ ಆಯಿಲ್ ಕಾರ್ಪೊರೇಷನ್ ನಂತಹ ಸರ್ಕಾರಿ ಇಂಧನ ಚಿಲ್ಲರೆ ವ್ಯಾಪಾರಿಗಳಿಗೆ 20,000 ಕೋಟಿ ರೂಪಾಯಿಗಳನ್ನು ನೀಡಲು ಸರ್ಕಾರವು ಚಿಂತಿಸುತ್ತಿದೆ. ಇದರೊಂದಿಗೆ ಇಂಧನ ಚಿಲ್ಲರೆ ವ್ಯಾಪಾರಿಗಳಿಗೆ ಆಗಿರುವ ನಷ್ಟವನ್ನು ಸರಿದೂಗಿಸಲು ಸರ್ಕಾರ ಪ್ರಯತ್ನಿಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇದರಿಂದಾಗಿ ಮುಂದಿನ ದಿನಗಳಲ್ಲಿ ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆಯಾಗುವ ಸಾಧ್ಯತೆ ಇದ್ದು, ಇದರಿಂದ ಸಾರ್ವಕಾಲಿಕ ಗರಿಷ್ಠ ರೂ.1053 ತಲುಪಿರುವ  ಎಲ್‌ಪಿಜಿ ಸಿಲಿಂಡರ್ ಬೆಲೆಯಿಂದ  ಜನಸಾಮಾನ್ಯರಿಗೆ ಪರಿಹಾರ ದೊರೆಯಲಿದೆ  ಎಂದು ಹೇಳಲಾಗುತ್ತಿದೆ. 

ಇದನ್ನೂ ಓದಿ- ಎಸ್‌ಬಿಐ ಖಾತೆಯೊಂದಿಗೆ ನಿಮ್ಮ ಆಧಾರ್ ಕಾರ್ಡ್ ಅನ್ನು ಹೇಗೆ ಲಿಂಕ್ ಮಾಡುವುದು ಹೇಗೆ? ಇಲ್ಲಿದೆ ಸುಲಭ ವಿಧಾನ

ವಾಸ್ತವವಾಗಿ, ದೇಶೀಯ ಅನಿಲದ ಜೊತೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ನಿಯಂತ್ರಿಸಲು ಮೋದಿ  ಸರ್ಕಾರ ಪ್ರಯತ್ನಿಸುತ್ತಿದೆ. ಇದಕ್ಕಾಗಿ, ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಅಂತಾರಾಷ್ಟ್ರೀಯ ಬೆಲೆಗೆ ಕಚ್ಚಾ ತೈಲವನ್ನು ಖರೀದಿಸಿ ಬೆಲೆ ಸಂವೇದನಾಶೀಲ ಮಾರುಕಟ್ಟೆಗಳಲ್ಲಿ ಮಾರಾಟ ಮಾಡಬೇಕಾಗಿದೆ. ಮತ್ತೊಂದೆಡೆ, ಖಾಸಗಿ ಕಂಪನಿಗಳು ಬಲವಾದ ಇಂಧನ ರಫ್ತು ಮಾರುಕಟ್ಟೆಯನ್ನು ಟ್ಯಾಪ್ ಮಾಡಲು ನಮ್ಯತೆಯನ್ನು ಹೊಂದಿವೆ ಎಂದು ಹೇಳಲಾಗುತ್ತಿದೆ.

ಮೂರು ದೊಡ್ಡ ಸರ್ಕಾರಿ ಇಂಧನ ಚಿಲ್ಲರೆ ವ್ಯಾಪಾರಿಗಳು ಒಟ್ಟಾಗಿ ದೇಶದ ಪೆಟ್ರೋಲಿಯಂ ಇಂಧನದ 90 ಪ್ರತಿಶತಕ್ಕಿಂತ ಹೆಚ್ಚಿನದನ್ನು ಪೂರೈಸುತ್ತಾರೆ. ಮಾಧ್ಯಮ ವರದಿಯ ಪ್ರಕಾರ, ತೈಲ ಸಚಿವಾಲಯವು ಕಂಪನಿಗಳ ನಷ್ಟವನ್ನು ಸರಿದೂಗಿಸಲು 28,000 ಕೋಟಿ ರೂಪಾಯಿಗಳ ಪರಿಹಾರವನ್ನು ಕೇಳಿದೆ. ಆದರೆ, ಹಣಕಾಸು ಸಚಿವಾಲಯವು 20000 ಕೋಟಿ ರೂ.ಗಳ ನಗದು ಪಾವತಿಗೆ ಮುಂದಾಗಿದೆ. ಈ ವಿಚಾರದಲ್ಲಿ ಇನ್ನೂ ಅಂತಿಮ ನಿರ್ಧಾರ ಕೈಗೊಂಡಿಲ್ಲ. 

ಇದನ್ನೂ ಓದಿ- Nitin Gadkari: ವಾಹನ ಸವಾರರಿಗೆ ಭಾರಿ ಸಂತಸದ ಸುದ್ದಿ ಪ್ರಕಟಿಸಿದ ನಿತೀನ್ ಗಡ್ಕರಿ ಹೇಳಿದ್ದೇನು?

ಪ್ರಸ್ತುತ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಳೆದ 7 ತಿಂಗಳಿನಿಂದ ಕಡಿಮೆ ಮಟ್ಟದಲ್ಲಿದೆ. WTI ಕಚ್ಚಾ ತೈಲವು ಬ್ಯಾರೆಲ್‌ಗೆ $ 87.58 ಮತ್ತು ಬ್ರೆಂಟ್ ಕಚ್ಚಾ $ 93.78 ಗೆ ಇಳಿದಿದೆ. ಕಚ್ಚಾತೈಲ ಬೆಲೆ ಇಳಿಕೆಯಿಂದ ತೈಲ ಕಂಪನಿಗಳಿಗೆ ಆಗುತ್ತಿರುವ ನಷ್ಟವೂ ತಗ್ಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Read More