Home> Business
Advertisement

Gruha Lakshmi Scheme: ʼಗೃಹಲಕ್ಷ್ಮಿʼ ಹಣ ಬರದಿದ್ರೆ ಇಂದೇ ಈ ಕೆಲಸಗಳನ್ನು ಮಾಡಿ!

Gruha Lakshmi Scheme: ಕೆಲವು ಕಾರಣಗಳಿಂದ ನೂರಾರು ಮಹಿಳೆಯರಗೆ ಹಣ ಬಂದಿಲ್ಲ. ಹೀಗಾಗಿ ಅನೇಕರು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದುವರೆಗೂ ಗ್ಯಾರಂಟಿ ಹಣ ಬಾರದಿರುವ ಗೃಹಲಕ್ಷ್ಮಿ ಫಲಾನುಭವಿಗಳು ತಪ್ಪದೆ ಕೆಲವು ಕೆಲಸಗಳನ್ನು ಮಾಡಿದ್ರೆ ಗೃಹಲಕ್ಷ್ಮಿ ಹಣ ಬರುತ್ತದೆ.

Gruha Lakshmi Scheme: ʼಗೃಹಲಕ್ಷ್ಮಿʼ ಹಣ ಬರದಿದ್ರೆ ಇಂದೇ ಈ ಕೆಲಸಗಳನ್ನು ಮಾಡಿ!

Gruha Lakshmi Scheme: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ʼಗೃಹಲಕ್ಷ್ಮಿ ಯೋಜನೆʼಯಡಿ ಮನೆಯ ಯಜಮಾನಿಯರಿಗೆ 2,000 ರೂ. ನೀಡಲಾಗುತ್ತಿದೆ. ಈ ಯೋಜನೆಯ ಫಲಾನುಭವಿಗಳಿಗೆ ಮೇ ತಿಂಗಳವರೆಗೆ ಸರಿಯಾಗಿ  ಹಣ ಜಮಾ ಆಗುತ್ತಿತ್ತು. ಆದರೆ ಮೇ ತಿಂಗಳ ಬಳಿಕ ಗೃಹಲಕ್ಷ್ಮಿ ಹಣ ಫಲಾನುಭವಿಗಳಿಗೆ ತಲುಪಿಲ್ಲವೆಂಬ ಆರೋಪಗಳು ಕೇಳಿಬಂದಿವೆ. ಈ ಆರೋಪಕ್ಕೆ ಸ್ಪಷ್ಟನೆ ನೀಡಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ʼಜೂನ್​ ಹಾಗೂ ಜುಲೈ ತಿಂಗಳ ಕಂತುಗಳು ಇನ್ನೂ ಜಮಾ ಮಾಡಿಲ್ಲ. ಎರಡ್ಮೂರು ದಿನಗಳಲ್ಲಿ ಮಹಿಳೆಯರ ಖಾತೆ ಜಮಾ ಮಾಡಲಾಗುತ್ತದೆʼ ಅಂತಾ ಹೇಳಿದ್ದರು.

ಕೆಲವು ಕಾರಣಗಳಿಂದ ನೂರಾರು ಮಹಿಳೆಯರಗೆ ಹಣ ಬಂದಿಲ್ಲ. ಹೀಗಾಗಿ ಅನೇಕರು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದುವರೆಗೂ ಗ್ಯಾರಂಟಿ ಹಣ ಬಾರದಿರುವ ಗೃಹಲಕ್ಷ್ಮಿ ಫಲಾನುಭವಿಗಳು ತಪ್ಪದೆ ಕೆಲವು ಕೆಲಸಗಳನ್ನು ಮಾಡಿದ್ರೆ ಗೃಹಲಕ್ಷ್ಮಿ ಹಣ ಬರುತ್ತದೆ. ಗೃಹಲಕ್ಷ್ಮಿ ಹಣ ಬರಬೇಕಾದರೆ ಏನು ಮಾಡಬೇಕು ಅನ್ನೋದರ ಮಾಹಿತಿ ಇಲ್ಲಿದೆ...

ಇದನ್ನೂ ಓದಿ: ದಿವಾಳಿ ಎಂದು ಘೋಷಿಸಿಕೊಂಡಿರುವ ಅನಿಲ್ ಅಂಬಾನಿ ವಾಸವಿರುವುದು 17 ಅಂತಸ್ತಿನ ಅರಮನೆಯಲ್ಲಿ ! 5000 ಕೋಟಿ ವೆಚ್ಚದ ಈ ಐಶಾರಾಮಿ ಮನೆಯ ಫೋಟೋ ಇಲ್ಲಿವೆ

ಗೃಹಲಕ್ಷ್ಮಿ ಹಣ ಬಾರದಿದ್ರೆ ಈ ಕೆಲಸ ಮಾಡಿ

* ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಮಹಿಳೆಯರು ತಪ್ಪದೇ ತಮ್ಮ ಖಾತೆಗೆ ಇ-ಕೆವೈಸಿ ಮಾಡಿಸಬೇಕು.
* ಗೃಹಲಕ್ಷ್ಮಿ ಯೋಜನೆಯ ಹಣ ಪಡೆಯಬೇಕಾದರೆ ರೇಷನ್ ಕಾರ್ಡ್‌ನಲ್ಲಿರುವ ಪ್ರತಿಯೊಬ್ಬ ಸದಸ್ಯರೂ ಕೂಡ ಇ-ಕೆವೈಸಿ ಮಾಡಿಸಬೇಕು.
* ಗೃಹಲಕ್ಷ್ಮಿ ಯೋಜನೆಯಡಿ ಖಾತೆಗೆ ಹಣ ಬಾರದಿರುವವರು ರೇಷನ್ ಕಾರ್ಡ್ ಜೊತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯ. ಹೀಗಾಗಿ ರೇಷನ್ ಕಾರ್ಡ್‌ಗೆ ಆಧಾರ್ ಲಿಂಕ್ ಮಾಡಿಸಿಕೊಳ್ಳಿ.
* ಗೃಹಲಕ್ಷ್ಮಿ ಫಲಾನುಭವಿಗಳಿಗೆ NPCI ಕಡ್ಡಾಯಗೊಳಿಸಿದೆ. ಗೃಹಲಕ್ಷ್ಮಿ ಫಲಾನುಭವಿಗಳು ಕಡ್ಡಾಯವಾಗಿ E-KYC ಆಧಾರ್ ಸೀಡಿಂಗ್ ಮಾಡಿಸಬೇಕು.
* ಕೆಲವೊಮ್ಮೆ ಖಾತೆಗೆ ಹಣ ಜಮೆಯಾಗಿದ್ದರ ಬಗ್ಗೆ ಮೊಬೈಲ್ SMS ಬರುತ್ತದೆ. ಹಲವು ಬಾರಿ SMS ಬರುವುದಿಲ್ಲ. ಇಂತಹ ಸಮಯದಲ್ಲಿ ನೀವು ಬ್ಯಾಂಕ್‌ನಲ್ಲಿ ಹೋಗಿ ಪಾಸ್‌ಬುಕ್ ಚೆಕ್ ಮಾಡಿಸಬೇಕು.
* ಗೃಹಲಕ್ಷ್ಮಿ ಯೋಜನೆಯಡಿ ನೋಂದಣಿ ಮಾಡಿಸಿ ಹಣ ಬಾರದ ಫಲಾನುಭವಿಗಳು ಕೂಡಲೇ ಅರ್ಜಿಯೊಂದಿಗೆ ಇ-ಕೆವೈಸಿ ಸಂಬಂಧಿತ ಸಮಸ್ಯೆಗಳನ್ನು ಬ್ಯಾಂಕ್‌ಗಳಲ್ಲಿ ಪರಿಹರಿಸಿಕೊಳ್ಳಬೇಕು. 

ಇದನ್ನೂ ಓದಿ: ಸಾಮೂಹಿಕ ವಿವಾಹದಲ್ಲಿ ಭಾಗಿಯಾದ ಪ್ರತಿ ಜೋಡಿಗೂ ಅಂಬಾನಿ ಕುಟುಂಬ ನೀಡಿದ ಉಡುಗೊರೆ ಅಷ್ಟಿಷ್ಟಲ್ಲ !ಚಿನ್ನ, ಬೆಳ್ಳಿ, ನಗದು ಎಲ್ಲವೂ ಅಲ್ಲಿತ್ತು !

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Read More