Home> Career
Advertisement

ಕೌಟುಂಬಿಕ ಕಲಹ ಬಗೆಹರಿಸಲು ಬಂದ  ತಮಿಳುನಾಡಿನ ಸ್ವಾಮಿಯಿಂದ ಮಾಂಗಲ್ಯ ಕಳ್ಳತನ..!

ಕೌಟುಂಬಿಕ ಕಲಹ ಸರಿ ಮಾಡಲು ಪೂಜೆ ಮಾಡಬೇಕು ಎಂದು ತಮಿಳುನಾಡಿನಿಂದ ಬಂದ ಕಳ್ಳ ಸ್ವಾಮಿಯೊಬ್ಬ 2.40 ಲಕ್ಷ ಮೌಲ್ಯದ ಮಾಂಗಲ್ಯ ಸರ ಕದ್ದು ಎಸ್ಕೇಪ್ ಆಗಿರುವ ಘಟನೆ ಇಂದಿರಾನಗರ ಠಾಣಾ ವ್ಯಾಪ್ತಿಯ ಕದಿರಯ್ಯನಪಾಳ್ಯದಲ್ಲಿ ನಡೆದಿದೆ.

ಕೌಟುಂಬಿಕ ಕಲಹ ಬಗೆಹರಿಸಲು ಬಂದ  ತಮಿಳುನಾಡಿನ ಸ್ವಾಮಿಯಿಂದ ಮಾಂಗಲ್ಯ ಕಳ್ಳತನ..!

ಬೆಂಗಳೂರು : ಕೌಟುಂಬಿಕ ಕಲಹ ಸರಿ ಮಾಡಲು ಪೂಜೆ ಮಾಡಬೇಕು ಎಂದು ತಮಿಳುನಾಡಿನಿಂದ ಬಂದ ಕಳ್ಳ ಸ್ವಾಮಿಯೊಬ್ಬ 2.40 ಲಕ್ಷ ಮೌಲ್ಯದ ಮಾಂಗಲ್ಯ ಸರ ಕದ್ದು ಎಸ್ಕೇಪ್ ಆಗಿರುವ ಘಟನೆ ಇಂದಿರಾನಗರ ಠಾಣಾ ವ್ಯಾಪ್ತಿಯ ಕದಿರಯ್ಯನಪಾಳ್ಯದಲ್ಲಿ ನಡೆದಿದೆ.

ಮಾಂಗಲ್ಯ ಸರ ಕಳೆದುಕೊಂಡ ಸುಗುಣಾ ಎಂಬಾಕೆ ನೀಡಿರುವ ದೂರಿನನ್ವಯ ಇಂದಿರಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೌಟುಂಬಿಕ ಕಲಹದಿಂದ ಬೇಸತ್ತಿದ್ದ ಸುಗುಣ, ತಮಿಳುನಾಡು ಮೂಲದ ರಾಜ ಎಂಬ ಸ್ವಾಮೀಜಿಯನ್ನ ಫೋನ್ ಮೂಲಕ ಸಂಪರ್ಕಿಸಿ ಸಮಸ್ಯೆಗೆ ಪರಿಹಾರ ಕೇಳಿದ್ದರು.

ಇದನ್ನೂ ಓದಿ: Priya Varrier : ನೋಟದಲ್ಲೇ ಪಡ್ಡೆ ಹುಡುಗರಿಗೆ ಮತ್ತೇರಿಸುವ ಕಣ್ಸನ್ನೆ ಬೆಡಗಿ..ಪೋಟೋಸ್‌ ನೋಡಿ

ಇದನ್ನೇ ಬಂಡವಾಳ ಮಾಡಿಕೊಂಡ ಕಳ್ಳ ಸ್ವಾಮಿ ಮನೆಗೆ ಬಂದು ಪೂಜೆ ಮಾಡಿ ಸಮಸ್ಯೆ ಬಗೆಹರಿಸುತ್ತೇನೆ ಎಂದಿದ್ದ ಆರೋಪಿ, ಆಗಸ್ಟ್ 13ರಂದು ಸುಗುಣಾರ ಮನೆಗೆ ಬಂದಿದ್ದ. ಸಂಜೆ 4ರಿಂದ 4:45ರವರೆಗೂ ಮನೆಯೊಳಗೆ ಪೂಜೆ ಮಾಡಿ ಬಳಿಕ ಪೂಜೆ ಸಲ್ಲಿಸಿದ್ದ ಸ್ಥಳದಲ್ಲಿ ಮಾಂಗಲ್ಯ ಸರವನ್ನ ಬಿಚ್ಚಿಡುವಂತೆ ಮಹಿಳೆಗೆ ಸೂಚಿಸಿದ್ದ.

ಇದನ್ನೂ ಓದಿ: ಹರ್ಷಿಕಾ - ಭುವನ್ ಜೀವನದ ಮಧುರ ಕ್ಷಣವಿದು, ಇಲ್ಲಿವೆ ವೆಡ್ಡಿಂಗ್‌ ಫೋಟೋಸ್‌

ಅದರಂತೆ ಸುಗುಣಾ ತಮ್ಮ ಸರವನ್ನ ಬಿಚ್ಚಿಟ್ಟು ಮನೆಯ ಹೊರಗಡೆ ಪೂಜೆ ಸಲ್ಲಿಸಲು ಹೋದಾಗ ಆರೋಪಿ ಕಳ್ಳ ಸ್ವಾಮಿ ಸರದ ಸಮೇತ ಪರಾರಿಯಾಗಿದ್ದಾನೆ. ಸದ್ಯ ಇಂದಿರಾನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್.

 

 

Read More