Home> Crime
Advertisement

Shivamogga: ಮಕ್ಕಳಾಗಿಲ್ಲವೆಂದು ಮನನೊಂದು ಮಹಿಳೆ ನೇಣಿಗೆ ಶರಣು..!

ಮದುವೆಯಾಗಿ 5 ವರ್ಷ ಕಳೆದರೂ ಅಶ್ವನಿ ಅವರಿಗೆ ಮಕ್ಕಳು ಆಗಿರಲಿಲ್ಲ. ಮಕ್ಕಳಾಗದ ಕಾರಣ ಪತಿ ಅಭಿಷೇಕ್ ಹಾಗೂ ಮನೆಯವರಿಂದ ಕಿರುಕುಳ ನೀಡುತ್ತಿದ್ದರೆಂಬ ಆರೋಪ ಕೇಳಿಬಂದಿದೆ. 

Shivamogga: ಮಕ್ಕಳಾಗಿಲ್ಲವೆಂದು ಮನನೊಂದು ಮಹಿಳೆ ನೇಣಿಗೆ ಶರಣು..!

ಶಿವಮೊಗ್ಗ: ಮದುವೆಯಾಗಿ ಹಲವಾರು ವರ್ಷಗಳಾಗಿದ್ದರು ಮಕ್ಕಳು ಆಗಿಲ್ಲವೆಂದು ಮನನೊಂದು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಗಾಡಿಕೊಪ್ಪದಲ್ಲಿಯೇ ಈ ಹೃದಯ ವಿದ್ರಾವಕ ಘಟನೆ ನಡೆದಿದೆ. 

ಮಕ್ಕಳು ಆಗದ ಕಾರಣ ಪತಿ ಹಾಗೂ ಆತನ ಮನೆಯವರು ಕಿರುಕುಳ ನೀಡಿದ್ದರಿಂದ ಮನನೊಂದ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.   

ಇದನ್ನೂ ಓದಿ: ಮಂಡ್ಯ ಅಭ್ಯರ್ಥಿಯಾಗಿ HDK ಹೆಸರು ಅಧಿಕೃತ ಘೋಷಣೆ ಹಿನ್ನೆಲೆ

ಗಾಡಿಕೊಪ್ಪದ ಮನೆಯಲ್ಲಿ ಅಶ್ವಿನಿ (31) ಎಂಬುವರೇ ನೇಣಿಗೆ ಶರಣಾಗಿದ್ದಾರೆ. ಮದುವೆಯಾಗಿ 5 ವರ್ಷ ಕಳೆದರೂ ಅಶ್ವನಿ ಅವರಿಗೆ ಮಕ್ಕಳು ಆಗಿರಲಿಲ್ಲ. ಮಕ್ಕಳಾಗದ ಕಾರಣ ಪತಿ ಅಭಿಷೇಕ್ ಹಾಗೂ ಮನೆಯವರಿಂದ ಕಿರುಕುಳ ನೀಡುತ್ತಿದ್ದರೆಂಬ ಆರೋಪ ಕೇಳಿಬಂದಿದೆ. 

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಕಂಪ್ಲಿ ಕೋಟೆ ಚೆಕ್‍ಪೋಸ್ಟ್ ನಲ್ಲಿ 8.23 ಲಕ್ಷ ನಗದು ವಶ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Read More