Home> Crime
Advertisement

Bengaluru: ವಿಧವೆ ಬಾಳಲ್ಲಿ ಚೆಲ್ಲಾಟ, ಉಂಡು ಹೋದ.. ‘ಚಿನ್ನ’ ಕದ್ದು ಹೋದ..!

ಖತರ್ನಾಕ್ ಖದೀಮನ ಬಣ್ಣ ಬಣ್ಣದ ಮಾತುಗಳಿಗೆ ಮನಸೋತಿದ್ದ ನೊಂದ ಮಹಿಳೆ ತನಗೆ ಆಗಿರುವ ಅನ್ಯಾಯಕ್ಕೆ ನ್ಯಾಯ ಕೊಡಿಸಬೇಕೆಂದು ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

Bengaluru: ವಿಧವೆ ಬಾಳಲ್ಲಿ ಚೆಲ್ಲಾಟ, ಉಂಡು ಹೋದ.. ‘ಚಿನ್ನ’ ಕದ್ದು ಹೋದ..!

ಬೆಂಗಳೂರು: ವಿಧವೆಯ ಬಾಳಲ್ಲಿ ಖತರ್ನಾಕ್ ಖದೀಮನೊಬ್ಬ ಚೆಲ್ಲಾಟವಾಡಿದ್ದಾನೆ. ‘ಉಂಡು ಹೋದ ಕೊಂಡು ಹೋದ’ ಅನ್ನೋ ಗಾದೆ ಮಾತಿನಂತೆ ಬಾಳು ನೀಡುತ್ತೇನೆಂದು ಬಣ್ಣ ಬಣ್ಣದ ಮಾತುಗಳನ್ನಾಡಿ ಮೋಸ ಮಾಡಿ ಎಸ್ಕೇಪ್ ಆಗಿದ್ದಾನೆ.

 ಹೌದು, ಮದುವೆ ಆಗುತ್ತೇನೆ ಅಂತಾ ನಂಬಿಸಿ ಬಂದ ಕಳ್ಳನೊಬ್ಬ ವಿಧವೆ ಬಾಳಲ್ಲಿ ಚೆಲ್ಲಾಟವಾಡಿದ್ದಾನೆ. ‘ಉಂಡು ಹೋದ… ಚಿನ್ನದ ಒಡೆವೆ ಕದ್ದುಕೊಂಡು ಹೋದ’ ಅನ್ನೋ ರೀತಿ ಮೋಸ ಮಾಡಿ ಪರಾರಿಯಾಗಿದ್ದಾನೆ. ಬೆಂಗಳೂರಿನ ಬಸವೇಶ್ವರ ನಗರದಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ: Gang Rape: ಬೆಂಗಳೂರಿನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ!

ಪ್ರದೀಪ್ ಎಂಬಾತನಿಂದ ಪ್ರಿಯತಮೆ ಮಹಿಳೆ ಮನೆಯಲ್ಲಿ ಕಳ್ಳತನವಾಗಿದೆ. ವಿಧವೆಗೆ ಬಾಳು ಕೊಡುತ್ತೇನೆಂದು ಹೇಳಿದ್ದ ಈತ 15 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕದ್ದು ಪರಾರಿಯಾಗಿದ್ದಾನೆ.

ಮಹಿಳೆಯ ಪತಿ ತೀರಿಹೋಗಿದ್ದು, ಹೆಣ್ಣು ಮಗು ಜೊತೆಗೆ ವಾಸವಿದ್ದಳು. ಆಗ ಪರಿಚಯ ಆಗಿ ವಿವಾಹಿತ ಪ್ರದೀಪ್ ಆಕೆಯ ಮನೆ ಸೇರಿಕೊಂಡಿದ್ದ. ‘ನನಗೆ ಮದುವೆ ಆಗಿಲ್ಲ..ನಿನ್ನೇ ಪ್ರೀತಿಸುವೆ’ ಎಂದು ಆಕೆಯ ಮನೆಯಲ್ಲೇ ಉಳಿದುಕೊಂಡಿದ್ದ. ನಿನ್ನನ್ನೇ ಮದುವೆ ಆಗುತ್ತೇನೆಂದು ಮಹಿಳೆಯನ್ನು ಆರೋಪಿ ನಂಬಿಸಿದ್ದ.

ಇದನ್ನೂ ಓದಿ: ರಕ್ಷಣಾ ಇಲಾಖೆ ವಶದಲ್ಲಿರುವ ಬೆಳಗಾವಿಯಲ್ಲಿನ 732.24 ಎಕರೆ ಪ್ರದೇಶವನ್ನು ರಾಜ್ಯಕ್ಕೆ ಹಸ್ತಾಂತರಿಸಲು ಮನವಿ

ನಂತರ ಮಹಿಳೆಯ ಮನೆಯಲ್ಲಿದ್ದ ಚಿನ್ನಾಭರಣ ಕದ್ದು ಪರಾರಿಯಾಗಿದ್ದಾನೆ. ಖತರ್ನಾಕ್ ಖದೀಮನ ಬಣ್ಣ ಬಣ್ಣದ ಮಾತುಗಳಿಗೆ ಮನಸೋತಿದ್ದ ನೊಂದ ಮಹಿಳೆ ತನಗೆ ಆಗಿರುವ ಅನ್ಯಾಯಕ್ಕೆ ನ್ಯಾಯ ಕೊಡಿಸಬೇಕೆಂದು ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಸದ್ಯ ಪೊಲೀಸರು ಆರೋಪಿ ಪ್ರದೀಪ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Read More