Home> Crime
Advertisement

Bus Fire : ಭೀಕರ ಬಸ್ ದುರಂತ : 8 ರಿಂದ 9 ಜನ ಸಜೀವ ದಹನ ಶಂಕೆ

ಘಟನೆಯಲ್ಲಿ 12 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ, ಸಧ್ಯ ಗಾಯಾಳುಗಳನ್ನ ಕಲಬುರಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ದುರಂತದಲ್ಲಿ ಚಾಲಕ ಸೇರಿ ಎಂಟರಿಂದ ಒಂಬತ್ತು ಜನ ಸಜೀವ ದಹನವಾಗಿರುವ ಶಂಕೆ ವ್ಯಕ್ತವಾಗಿದೆ.

Bus Fire : ಭೀಕರ ಬಸ್ ದುರಂತ : 8 ರಿಂದ 9 ಜನ ಸಜೀವ ದಹನ ಶಂಕೆ

ಕಲಬುರಗಿ : ಗೋವಾದಿಂದ ಹೈದರಾಬಾದ್‌ಗೆ ತೆರಳುತ್ತಿದ್ದ ಆರೆಂಜ್ ಬಸ್ ಹೊತ್ತಿ ಉರಿದ ಘಟನೆ  ಜಿಲ್ಲೆಯ ಕಮಲಾಪುರ ಪಟ್ಟಣ ಮಾರ್ಗದಲ್ಲಿ ನಡೆದಿದೆ. 

ಜಿಲ್ಲೆಯ ಕಮಲಾಪುರ ಪಟ್ಟಣ ಮಾರ್ಗವಾಗಿ ಹೈದರಾಬಾದ್‌ಗೆ ಹೋಗುತ್ತಿದ್ದ ಬಸ್ ಅನ್ನು ಚಾಲಕ ಅತ್ಯಂತ ವೇಗವಾಗಿ ಚಾಲನೆ ಮಾಡುತ್ತಿದ್ದ ಎಂದು ಹೇಳಲಾಗುತ್ತಿದೆ. 

fallbacks

ಇದನ್ನೂ ಓದಿ : Chandrashekhar Kambar : ಚಂದ್ರಶೇಖರ ಕಂಬಾರ ಹೆಸರಿನಲ್ಲಿ ಸೈಬರ್ ಖದೀಮರು ವಂಚನೆಗೆ ಯತ್ನ, ಪ್ರಕರಣ ದಾಖಲು

ಒಂದೇ ಕುಟುಂಬದ 30 ಕ್ಕೂ ಅಧಿಕ ಜನ ಹೈದರಾಬಾದ್‌‌ನಿಂದ ಗೋವಾ ಪ್ರವಾಸಕ್ಕೆ ತೆರಳಿದ್ದರು. ಗೋವಾದಿಂದ ಹೈದರಾಬಾದ್‌ಗೆ ವಾಪಸ್ ಆಗುವಾಗ ಎದುರಿಗೆ ಬಂದ ಟೆಂಪೋಗೆ ಡಿಕ್ಕಿ ಹೊಡೆದ  ರಭಸಕ್ಕೆ ಸೇತುವೆ ಮೇಲಿಂದ ಬಸ್ ಕೆಳಗೆ ಉರಳುಬಿದ್ದ ಪರಿಣಾಮ ಡೀಸೆಲ್‌ ಟ್ಯಾಂಕರ್‌ ಡ್ಯಾಮೇಜ್‌ ಆಗಿ ಬಸ್ ಹೊತ್ತಿ ಉರಿದಿದೆ ಎಂದು ಹೇಳಲಾಗುತ್ತಿದೆ. 

ಘಟನೆಯಲ್ಲಿ 12 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ, ಸಧ್ಯ ಗಾಯಾಳುಗಳನ್ನ ಕಲಬುರಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ದುರಂತದಲ್ಲಿ ಚಾಲಕ ಸೇರಿ ಎಂಟರಿಂದ ಒಂಬತ್ತು ಜನ ಸಜೀವ ದಹನವಾಗಿರುವ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ : ಬಾಯ್ ಫ್ರೆಂಡ್ ಜೊತೆ ಸೇರಿ ಯುವತಿಯಿಂದ ರಾಬರಿ ಯತ್ನ‌.!

 ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Read More