Home> Crime
Advertisement

ಬೆಂಗಳೂರಿಗೆ ಸಪ್ಲೈ ಆಗುತ್ತಿದೆಯಾ.. ಬೌ.. ಬೌ.. ಮಟನ್‌..!? ನೀವು ಹೊಟೇಲ್‌ನಲ್ಲಿ ತಿನ್ನುತ್ತಿರುವುದು ನಾಯಿಮಾಂಸನಾ..?

ಕಳೆದ ಜೂನ್‌ ತಿಂಗಳಲ್ಲಿ ನಾಯಿ ಮಾಂಸ ಸಾಗಾಟದ ಬಗ್ಗೆ ಆರೋಗ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರಂತೆ. ಆದರೆ ಅವರು ಯಾವುದೇ ಕ್ರಮ ಕೈಗೊಂಡಿಲ್ಲವಂತೆ.. ಅದಕ್ಕಾಗಿ ಹಿಂದೂಪರ ಮುಖಂಡ ಪುನೀತ್ ಕೆರೆಹಳ್ಳಿ ನೇತೃತ್ವದ ಕಾರ್ಯಕರ್ತರು ಅವರು ಕಾಂತ್ರಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣದಲ್ಲಿ ದಾಳಿ ನಡೆಸಿ ಪ್ರತಿಭಟಿಸಿದರು. 

ಬೆಂಗಳೂರಿಗೆ ಸಪ್ಲೈ ಆಗುತ್ತಿದೆಯಾ.. ಬೌ.. ಬೌ.. ಮಟನ್‌..!? ನೀವು ಹೊಟೇಲ್‌ನಲ್ಲಿ ತಿನ್ನುತ್ತಿರುವುದು ನಾಯಿಮಾಂಸನಾ..?

ಬೆಂಗಳೂರು : ಸಿಲಿಕಾನ್‌ ಸಿಟಿಗೆ ರಾಜಸ್ತಾನದಿಂದ ದಿನನಿತ್ಯ ರೈಲಿನ ಮುಖಾಂತರ ಸಾವಿರಾರು ಕೆಜಿ ನಾಯಿ ಮಾಂಸ ತಂದು ಮಾರಾಟ ಮಾಡಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಕುರಿ ಮಾಂಸವಾದರೂ ಕ್ರಮಬದ್ಧವಾಗಿ ಸಾಗಾಟ ಮಾಡುತ್ತಿಲ್ಲ ಎಂಬ ಆಪಾದನೆ ಕೇಳಿಬಂದಿದ್ದು, ಇದನ್ನೇ ನಗರದ ಹೊಟೇಲ್ ರೆಸ್ಟೋರೆಂಟ್ ಗಳಿಗೆ ಮಾರಾಟ ಮಾಡಿ ಅವ್ಯವಹಾತವಾಗಿ ದಂಧೆ ನಡೆಸಲಾಗುತ್ತಿದೆ ಎಂದು ಸಾರ್ವಜನಿಕರು ದೂರಿದ್ದಾರೆ.

ಸಾಮಾಜಿಕ ಕಾರ್ಯಕರ್ತ ಶಶಿಕುಮಾರ್ ಎಂಬುವರು ಕಳೆದ ಜೂನ್‌ ತಿಂಗಳಲ್ಲಿ ನಾಯಿ ಮಾಂಸ ಸಾಗಾಟದ ಬಗ್ಗೆ ಆರೋಗ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರಂತೆ. ಆದರೆ ಅವರು ಯಾವುದೇ ಕ್ರಮ ಕೈಗೊಂಡಿಲ್ಲವಂತೆ.. ಅದಕ್ಕಾಗಿ ಹಿಂದೂಪರ ಮುಖಂಡ ಪುನೀತ್ ಕೆರೆಹಳ್ಳಿ ನೇತೃತ್ವದ ಕಾರ್ಯಕರ್ತರು ಅವರು ಕಾಂತ್ರಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣದಲ್ಲಿ ದಾಳಿ ನಡೆಸಿ ಪ್ರತಿಭಟಿಸಿದರು. 

ಇದನ್ನೂ ಓದಿ:ಸಂಸತ್ʼನಲ್ಲಿ ವಾಲ್ಮೀಕಿ, ಮುಡಾ ಹಗರಣ ಚರ್ಚೆಗೆ ಕಾಂಗ್ರೆಸ್ ಅಡ್ಡಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ

90 ಬಾಕ್ಸ್ ನಲ್ಲಿರುವ 4500 ಕೆ.ಜಿ.ಮಾಂಸವನ್ನ ತೆರೆದು ಅಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಸ್ಥಳಕ್ಕೆ ಬಂದ ಹಿಂದೂ ಮುಖಂಡ ಅಬ್ದುಲ್ ರಜಾಕ್ ಪರಿಶೀಲಿಸಿ ಇದು ನಾಯಿ ಮಾಂಸವಲ್ಲ ಕುರಿಮಾಂಸ ಅಂತ ಸಮಜಾಯಿಷಿ ನೀಡಿದರು‌. ಈ ಸಂಬಂಧ ಬಿಬಿಎಂಪಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ‌. 90 ಬಾಕ್ಸ್ ನಲ್ಲಿ 4500 ಕೆ.ಜಿ.ಮಾಂಸ ಸಾಗಾಟ ಹಿನ್ನೆಲೆಯಲ್ಲಿ ಕೆಲವರನ್ನ ಪೊಲೀಸರನ್ನ ವಶಕ್ಕೆ ಪಡೆದುಕೊಂಡಿದ್ದಾರೆ.

ರಾಜಸ್ಥಾನ ಮತ್ತು ಗುಜರಾತ್‌ನಿಂದ ಸಾವಿರಾರು ಕೇಜಿ ಮಾಂಸವನ್ನು ಥರ್ಮಾಕೋಲ್ ಬಾಕ್ಸ್‌ನಲ್ಲಿ ತುಂಬಿ ರೈಲಿನಲ್ಲಿ ಬೆಂಗಳೂರಿಗೆ ಕಳುಹಿಸುತ್ತಿದ್ದಾರೆ. ಅಲ್ಲಿಂದ ನಗರಕ್ಕೆ ತಲುಪಲು ನಾಲ್ಕೈದು ದಿನಗಳೇ ಬೇಕಾಗುತ್ತದೆ. ಕೇವಲ ಥರ್ಮಾಕೋಲ್‌ನಲ್ಲಿ ಐಸ್ ಗಡ್ಡೆಯೊಂದಿಗೆ ಮಾಂಸ ತುಂಬಿ ಕಳುಹಿಸುತ್ತಿದ್ದು, ಹಾಳಾಗಿರುವ ಸಾಧ್ಯತೆಗಳಿವೆ. 

ಇದನ್ನೂ ಓದಿ:ರಾಮನಗರ ಹೆಸರು ತೆಗೆದವರು ಸರ್ವನಾಶ ಆಗುತ್ತಾರೆ; ಹೆಚ್.ಡಿ.ಕುಮಾರಸ್ವಾಮಿ ಕಿಡಿ

ಈ ಬಾಕ್ಸ್‌ಗಳನ್ನು ಶಿವಾಜಿನಗರಕ್ಕೆ ಗೂಡ್ಸ್ ವಾಹನಗಳಲ್ಲಿ ತೆಗೆದುಕೊಂಡು ಹೋಗಿ ಗೋದಾಮಿನಲ್ಲಿ ಇರಿಸುತ್ತಾರೆ. ಅಲ್ಲಿ ಬಾಕ್ಸ್ ತೆಗೆದು ಕೆಮಿಕಲ್‌ನಲ್ಲಿ ಮಾಂಸವನ್ನು ತೊಳೆದು ಮತ್ತೆ ಹೊಸದಾಗಿ ಪ್ಯಾಕ್ ಮಾಡಿ ಸ್ಟಾರ್ ಹೋಟೆಲ್, ಕ್ಯಾಟರಿಂಗ್ ಸರ್ವಿಸ್‌ಗಳಿಗೆ ಮಾಂಸ ಮಾರಾಟ ಮಾಡುತ್ತಿದ್ದಾರೆ. ಇದರಿಂದ ಜನರ ಅರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಸಾರ್ವಜನಿಕರು ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Read More