Home> Crime
Advertisement

ಮುರುಘಾ ಶ್ರೀ ಅರೆಸ್ಟ್.. ಚಿತ್ರದುರ್ಗದಲ್ಲಿ ಹೈ ಅಲರ್ಟ್..!

ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಸ್ಟ್‌ 26ರಂದು ಶ್ರೀಗಳು ಸೇರಿದಂತೆ ಐವರ ವಿರುದ್ಧ ಮೈಸೂರಿನ ನಜರ್‌ಬಾದ್‌ ಪೊಲೀಸ್ ಠಾಣೆಯಲ್ಲಿ  FIR ದಾಖಲಾಗಿತ್ತು.

ಮುರುಘಾ ಶ್ರೀ ಅರೆಸ್ಟ್.. ಚಿತ್ರದುರ್ಗದಲ್ಲಿ ಹೈ ಅಲರ್ಟ್..!

ಬೆಂಗಳೂರು: ಚಿತ್ರದುರ್ಗದ ಪ್ರತಿಷ್ಠಿತ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿಯ ಬಂಧನವಾಗಿದೆ. ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಗುರುವಾರ ರಾತ್ರಿ ಮಠದಲ್ಲಿದ್ದ ಶ್ರೀಗಳನ್ನು ಚಿತ್ರದುರ್ಗದ ಪೊಲೀಸರು ಬಂಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಸ್ಟ್‌ 26ರಂದು ಶ್ರೀಗಳು ಸೇರಿದಂತೆ ಐವರ ವಿರುದ್ಧ ಮೈಸೂರಿನ ನಜರ್‌ಬಾದ್‌ ಪೊಲೀಸ್ ಠಾಣೆಯಲ್ಲಿ  FIR ದಾಖಲಾಗಿತ್ತು. ಸಂತ್ರಸ್ತ ಬಾಲಕಿಯರು ಒಡನಾಡಿ ಸಂಸ್ಥೆಯ ನೆರವು ಪಡೆದು ಶ್ರೀಗಳ ವಿರುದ್ಧ ಕೇಸ್ ದಾಖಲಿಸಿದ್ದರು. ಈ ಹಿನ್ನೆಲೆ ಇಂದು ಶ್ರೀಗಳನ್ನು ಬಂಧನವಾಗಿದೆ.

ಶ್ರೀಗಳ ವಿರುದ್ಧ ಕೇಸ್ ದಾಖಲಾದ 6 ದಿನಗಳ ಬಳಿಕ ಬಂಧಿಸಲಾಗಿದೆ. ಪೋಕ್ಸೋ ಪ್ರಕರಣ ದಾಖಲಾದ 160 ಗಂಟೆಗಳ ಬಳಿಕ ಶ್ರೀಗಳು ಅರೆಸ್ಟ್ ಆಗಿದ್ದಾರೆ. ಮಠದ ಹಿಂಬಾಲಿನಿಂದ ಶ್ರೀಗಳನ್ನು ಚಿತ್ರದುರ್ಗದ ಪೊಲೀಸರು ಬಂಧಿಸಿ ಠಾಣೆಗೆ ಕರೆದೊಯ್ದಿದ್ದಾರೆ. ಬಿಳಿ ಶಾಲು ಹೊದ್ದು ಪೊಲೀಸರ ಕಾರಿನಲ್ಲಿ ಸ್ವಾಮೀಜಿ ಕುಳಿತುಕೊಂಡಿದ್ದರು. ಕೆಲವೇ ಕ್ಷಣಗಳಲ್ಲಿ ಶ್ರೀಗಳಿಗೆ ವೈದ್ಯಕೀಯ ಪರೀಕ್ಷೆ ನಡೆಯಲಿದೆ. ಇಂದು ರಾತ್ರಿಯೇ ಸ್ವಾಮೀಜಿ ಜಡ್ಜ್ ಎದುರು ಹಾಜರಾಗುವ ಸಾಧ‍್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇನ್ನು ಮುರಾಘಾ ಶ್ರೀಗಳ ಬಂಧನದ ಹಿನ್ನೆಲೆ ಚಿತ್ರದುರ್ಗದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಡಿಸಿ ಸರ್ಕಲ್ ಸೇರಿ ಅನೇಕ ಕಡೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಚಿತ್ರದುರ್ಗದ ಪೊಲೀಸರು ಮುಂಜಾಗೃತಾ ಕ್ರಮವಾಗಿ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Read More