Home> Crime
Advertisement

ಬಸವಕಲ್ಯಾಣ: ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆ

ಬಸವಕಲ್ಯಾಣ ತಾಲ್ಲೂಕಿನ ದಾಸರವಾಡಿಯ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ 10 ನೇ ತರಗತಿ ವಿದ್ಯಾರ್ಥಿ ಪವನ ನಾಗಪ್ಪ ಹಣಮಂತವಾಡಿ (16) ಅವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. 

ಬಸವಕಲ್ಯಾಣ: ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆ

ಬಸವಕಲ್ಯಾಣ: ತಾಲ್ಲೂಕಿನ ದಾಸರವಾಡಿಯ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ 10 ನೇ ತರಗತಿ ವಿದ್ಯಾರ್ಥಿ ಪವನ ನಾಗಪ್ಪ ಹಣಮಂತವಾಡಿ (16) ಅವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸಂಜೆ 5 ಗಂಟೆಗೆ ವಿದ್ಯಾರ್ಥಿಗಳು ಕೊಠಡಿಗಳ ಹೊರಗೆ ಬಂದು ಅಧ್ಯಯನದಲ್ಲಿ‌ ನಿರತರಾಗಿದ್ದಾಗ ಪವನ ಅಲ್ಲಿಂದ ಬಾರದೆ ಕಿಟಕಿಯ ಸರಳುಗಳಿಗೆ ಬಟ್ಟೆಯನ್ನು ಕಟ್ಟಿ ನೇಣು ಹಾಕಿಕೊಂಡಿದ್ದಾನೆ' ಎನ್ನಲಾಗಿದೆ.

ಇದನ್ನೂ ಓದಿ :  Karnataka Congress : ಕೈ ಟಿಕೇಟ್ ಹಂಚಿಕೆ ವಿಚಾರ : ಕೊನೆಗೂ ಸ್ಕ್ರೀನಿಂಗ್ ಕಮಿಟಿ ರಚಿಸಿದ ಎಐಸಿಸಿ

ನಂತರ ಈ ಬಗ್ಗೆ ತಿಳಿದ ವಸತಿ ಶಾಲೆಯ ಸಿಬ್ಬಂದಿ ತಾಲ್ಲೂಕಿನ ಹಣಮಂತವಾಡಿಯಲ್ಲಿರುವ ಪಾಲಕರಿಗೆ ಈ ವಿಷಯ ತಿಳಿಸಿದ್ದಾರೆ. ಆಗ ತಾಯಿ ಮಹಾದೇವಿ ಹಾಗೂ ಅಣ್ಣ ಗುಂಡಪ್ಪ ಹಾಗೂ ಗ್ರಾಮದ ಹತ್ತಾರು ಜನರು ಸ್ಥಳಕ್ಕೆ ಬಂದು ನೋಡಿದ್ದಾರೆ.

'ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಳ್ಳುವಂಥ ಪರಿಸ್ಥಿತಿ ಇರಲಿಲ್ಲ. ಅಲ್ಲದೆ ಕೊರಳಿಗೆ ಬಟ್ಟೆ ಸುತ್ತಿಕೊಂಡು ನೆಲಕ್ಕೆ ಕುಳಿತಂತಿದ್ದಾನೆ. ಇದು ಆತ್ಮಹತ್ಯೆ ಅಲ್ಲ, ಕೊಲೆ ಆಗಿದ್ದು ಈ ಬಗ್ಗೆ ತನಿಖೆ ಆಗಬೇಕು' ಎಂದು ಪಾಲಕರು ರಾತ್ರಿ 9.30 ಗಂಟೆಯವರೆಗೂ ಪಟ್ಟು ಹಿಡಿದು ಕುಳಿತಿದ್ದರು. ಮುಡಬಿ ಪೊಲೀಸ್ ಠಾಣೆಯ ಪಿಎಸ್‌ಐ ವಿಜಯಕುಮಾರ ಹಾಗೂ ಇತರೆ ಸಿಬ್ಬಂದಿ ಕೂಡ ಸ್ಥಳಕ್ಕೆ ಬಂದಿದ್ದರು. ಆದರೆ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಬಂದಿರಲಿಲ್ಲ.

ಇದನ್ನೂ ಓದಿ :  ರಸ್ತೆ ಗುಂಡಿ ಮುಚ್ಚಲು 7 ಸಾವಿರ ಕೋಟಿ ಖರ್ಚು ಎಂಬುದು ಸುಳ್ಳು: ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸ್ಪಷ್ಟನೆ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Read More