Home> Crime
Advertisement

ಪಿಯು ಪರೀಕ್ಷೆಯಲ್ಲಿ ಫೇಲಾಗಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ

ಇಂದು ಪ್ರಕಟಗೊಂಡ ಫಲಿತಾಂಶದಲ್ಲಿ ನಾಲ್ಕು ವಿಷಯಗಳು ಫೇಲಾಗಿದ್ದರಿಂದ ತೀವ್ರವಾಗಿ ಮನನೊಂದು ಹಾಸ್ಟೆಲ್ ನಲ್ಲೇ ನೇಣು ಬಿಗಿದುಕೊಂಡು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಪಿಯು ಪರೀಕ್ಷೆಯಲ್ಲಿ ಫೇಲಾಗಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ

ಚಾಮರಾಜನಗರ: ಇಂದು ಪ್ರಕಟಗೊಂಡ ದ್ವಿತೀಯ ಪಿಯು ಫಲಿತಾಂಶದಲ್ಲಿ ಫೇಲಾಗಿದ್ದರಿಂದ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರದ ಹಾಸ್ಟೆಲ್ ವೊಂದರಲ್ಲಿ ನಡೆದಿದೆ.

ಗುಂಡ್ಲುಪೇಟೆ ಮೂಲದ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದ ವಿಜಯಲಕ್ಷ್ಮಿ ಎಂಬಾಕೆ ಮೃತ ದುರ್ದೈವಿ. ಇಂದು ಪ್ರಕಟಗೊಂಡ ಫಲಿತಾಂಶದಲ್ಲಿ ನಾಲ್ಕು ವಿಷಯಗಳು ಫೇಲಾಗಿದ್ದರಿಂದ ತೀವ್ರ ಮನನೊಂದು ಹಾಸ್ಟೆಲ್ ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಇದನ್ನೂ ಓದಿ- ಹುಡುಗಿಯರ ಜೊತೆ ಮಜಾ ಮಾಡಿ ಕದ್ದ ಚಿನ್ನ ಟಿಪ್ಸ್ ಕೊಡುತ್ತಿದ್ದ ಕುಖ್ಯಾತ ಕಳ್ಳನ ಬಂಧನ

ಚಾಮರಾಜನಗರ ಪಟ್ಟಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸದ್ಯ ಪೊಲೀಸರು ಸ್ಥಳಕ್ಕೆ ತೆರಳಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇದನ್ನೂ ಓದಿ- Crime News: ಗರ್ಭಿಣಿಯನ್ನು ಬಲಿ ಪಡೆದ ಆಟೋ ರಿಕ್ಷಾ 

ವಿದ್ಯಾರ್ಥಿಗಳೇ ಗಮನಿಸಿ: ಶಾಲಾ-ಕಾಲೇಜು ಪರೀಕ್ಷೆಗಳು ಜೀವನದ ಅಂತಿಮ ಘಟ್ಟವಲ್ಲ. ಯಾವುದೇ ರೀತಿಯ ದುಡುಕಿನ ನಿರ್ಧಾರವನ್ನು ಕೈಗೊಳ್ಳುವ ಮೊದಲು ನಿಮ್ಮ ಹೆತ್ತವರ ಬಗ್ಗೆ ಸ್ವಲ್ಪವಾದರೂ ಯೋಚಿಸಿ.  

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Read More