Home> Entertainment
Advertisement

Bhairathi Ranagal: ‘ಭೈರತಿ ರಣಗಲ್​’ ಚಿತ್ರದ ನಾಯಕಿ ರುಕ್ಮಿಣಿ ವಸಂತ್ ಯಾರು ಗೊತ್ತಾ?

Rukmini Vasanth In Bhairathi Ranagal: ನಟ ಶಿವರಾಜಕುಮಾರ್‌ ಅಭಿನಯದ ಬಹು ನಿರೀಕ್ಷಿತ ಚಿತ್ರ ಭೈರತಿ ರಣಗಲ್‌ ಸಿನಿಮಾದ ನಾಯಕಿ ಯಾರೆಂಬ ಕುತೂಹಲ ಎಲ್ಲರನ್ನೂ ಕಾಡುತ್ತಿತ್ತು. ಹಲವು ದಿನಗಳಿಂದ ಚಿತ್ರದ ನಾಯಕಿಗಾಗಿ ಹುಡುಕಾಟ ನಡೆಸಿದ್ದರು. ಇದಕ್ಕೆ ಕೊನೆಗೂ ಉತ್ತರ ದೊರೆತಿದೆ. 
 

Bhairathi Ranagal: ‘ಭೈರತಿ ರಣಗಲ್​’ ಚಿತ್ರದ ನಾಯಕಿ ರುಕ್ಮಿಣಿ ವಸಂತ್ ಯಾರು ಗೊತ್ತಾ?

Bhairathi Ranagal: ನಟ ಶಿವರಾಜಕುಮಾರ್‌ ಅಭಿನಯದ ಭೈರತಿ ರಣಗಲ್ ಸಿನಿಮಾಗಾಗಿ ಜನರು ಕಾದು ಕುಳಿತಿದ್ದಾರೆ. ಬಹು ನಿರೀಕ್ಷಿತ ಚಿತ್ರ ಭೈರತಿ ರಣಗಲ್‌ ಸಿನಿಮಾವನ್ನು ಗೀತಾ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಗೀತಾ ಶಿವರಾಜಕುಮಾರ್ ನಿರ್ಮಾಣ ಮಾಡುತ್ತಿದ್ದಾರೆ. ನರ್ತನ್ ನಿರ್ದೇಶನದ ಭೈರತಿ ರಣಗಲ್‌ ಸಿನಿಮಾ ನಿರ್ಮಾಪಕರ 2017 ರ ಮಫ್ತಿಗೆ ಸಿನಿಮಾದ ಪ್ರಿಕ್ವೆಲ್‌ ಆಗಿದೆ. ಹಲವು ದಿನಗಳಿಂದ ಚಿತ್ರದ ನಾಯಕಿಗಾಗಿ ಹುಡುಕಾಟ ನಡೆಸಿದ್ದರು. 

ಭೈರತಿ ರಣಗಲ್‌ ಚಿತ್ರದಲ್ಲಿ ಶಿವರಾಜಕುಮಾರ್‌ ಜೊತೆ ನಾಯಕಿಯಾಗಿ ರುಕ್ಮಿಣಿ ವಸಂತ್ ಆಯ್ಕೆಯಾಗಿದ್ದಾರೆ. ಭೈರತಿ ರಣಗಲ್‌ ಚಿತ್ರದಲ್ಲಿ ಶಿವರಾಜಕುಮಾರ್‌ ಜೊತೆ ನಟಿಸಿದ್ದಕ್ಕೆ ರುಕ್ಮಿಣಿ ಹರ್ಷ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಶಾರುಖ್, ಸಲ್ಮಾನ್ ಅಲ್ಲ.. ಭಾರತದಲ್ಲೇ ಅತಿ ಹೆಚ್ಚು ಸಂಭಾವನೆ ಪಡೆಯುವ ನಟ ಇವರೇ

ಭೈರತಿ ರಣಗಲ್ ಚಿತ್ರದ ಶೂಟಿಂಗ್ ಜೂನ್ 10 ರಂದು ಪ್ರಾರಂಭವಾಗುವ ನಿರೀಕ್ಷೆಯಿದೆ. ಶಿವರಾಜಕುಮಾರ್ ಮತ್ತು ರುಕ್ಮಿಣಿ ಅವರಲ್ಲದೆ, ಚಿತ್ರದಲ್ಲಿ ರಾಹುಲ್ ಬೋಸ್ ಕೂಡ ನಟಿಸಿದ್ದಾರೆ. ಭೈರತಿ ರಣಗಲ್ ಚಿತ್ರದಲ್ಲಿ ಸಂಗೀತ ಸಂಯೋಜಕ ರವಿ ಬಸ್ರೂರ್ ಅವರ ಹಾಡುಗಳು ಕಮಾಲ್‌ ಮಾಡಲಿವೆ. ನವೀನ್ ಕುಮಾರ್ ಅವರ ಛಾಯಾಗ್ರಹಣ ಈ ಸಿನಿಮಾಗಿದೆ. 

ಕನ್ನಡ ನಟಿ ರುಕ್ಮಿಣಿ ವಸಂತ್ ಭೈರತಿ ರಣಗಲ್‌ನಲ್ಲಿ ಶಿವರಾಜಕುಮಾರ್ ಜೊತೆಗೆ ನಟಿಸುತ್ತಿರುವ ಸುದ್ದಿಯನ್ನು ತಮ್ಮ ಇನ್‌ಸ್ಟಾಗ್ರಾಮ್ ಪುಟದಲ್ಲಿ ಪೋಸ್ಟರ್‌ನೊಂದಿಗೆ ಹಂಚಿಕೊಂಡಿದ್ದಾರೆ. ರುಕ್ಮಿಣಿ, "ಭೈರತಿ ರಣಗಲ್ ಅವರ ಐಕಾನಿಕ್ ತಂಡವನ್ನು ಸೇರಲು ಅತೀವ ಸಂತೋಷವಾಗಿದೆ. ಇಡೀ ತಂಡಕ್ಕೆ ತುಂಬಾ ಧನ್ಯವಾದಗಳು" ಎಂದು ಬರೆದಿದ್ದಾರೆ.

ಇದನ್ನೂ ಓದಿ:  ಮಹಾಭಾರತದ ಶಕುನಿ ಮಾಮಾ ಎಂದೇ ಖ್ಯಾತರಾದ ಗುಫಿ ಪೈಂಟಲ್ ನಿಧನ

ಇತ್ತೀಚೆಗೆ ಬೆಂಗಳೂರಿನ ದೇವಸ್ಥಾನವೊಂದರಲ್ಲಿ ಚಿತ್ರದ ಮುಹೂರ್ತ ನೆರವೇರಿತು. ಈ ಯೋಜನೆಯಲ್ಲಿ ರುಕ್ಮಿಣಿ ವಸಂತ್ ಅವರು ತಮ್ಮ ವೃತ್ತಿಜೀವನದಲ್ಲಿ ಮೊದಲ ಬಾರಿಗೆ ಶಿವರಾಜಕುಮಾರ್ ಅವರೊಂದಿಗೆ ನಟಿಸುತ್ತಿರುವುದಾಗಿ ಸಂತಸಪಟ್ಟಿದ್ದರು.

 

 

ಕಾಲಿವುಡ್‌ಗೆ ಕಾಲಿಟ್ಟಿರುವ ರುಕ್ಮಿಣಿ ಪ್ರಸ್ತುತ ಮಲೇಷ್ಯಾದಲ್ಲಿ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ವಿಜಯ್ ಸೇತುಪತಿ ಮುಖ್ಯ ಭೂಮಿಕೆಯಲ್ಲಿರುವ ಇನ್ನೂ ಟೈಟಲ್‌ ರಿವೀಲ್‌ ಮಾಡದ ಸಿನಿಮಾದಲ್ಲಿ ರುಕ್ಮಿಣಿ ನಟಿಸುತ್ತಿದ್ದಾರೆ. ಸಪ್ತ ಸಾಗರದಾಚೆ ಯೆಲ್ಲೋ ಚಿತ್ರದ ಮೂಲಕ ನಾಯಕಿಯಾಗಿ ರುಕ್ಮಿಣಿ ಸಿನಿರಂಗಕ್ಕೆ ಪದಾರ್ಪಣೆ ಮಾಡಿದರು. ನಟ ಗಣೇಶ್ ಅಭಿನಯದ ಬಾನದಾರಿ ಸಿನಿಮಾದಲ್ಲಿ ರುಕ್ಮಿಣಿ ನಟಿಸಿದ್ದಾರೆ. ಶ್ರೀಮುರಳಿ ಅವರ ಮುಂದಿನ ಬಘೀರಾದಲ್ಲಿಯೂ ರುಕ್ಮಿಣಿಯೇ ನಾಯಕಿ ಎಂಬ ಮಾತುಗಳಿ ಕೇಳಿಬರುತ್ತಿವೆ.

ಇದನ್ನೂ ಓದಿ: ಅಭಿಷೇಕ್ ಅಂಬರೀಷ್​ ಅವಿವಾ ಅದ್ದೂರಿ ವಿವಾಹ: ಸಿನಿ ತಾರೆಯರ ಸಮಾಗಮ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Read More