Home> Entertainment
Advertisement

ದುನಿಯಾ ವಿಜಯ್ ಪತ್ನಿಗೆ ರಿಲೀಫ್; ಸಿಕ್ತು ಮಧ್ಯಂತರ ನಿರೀಕ್ಷಣಾ ಜಾಮೀನು

ನಗರ ಸಿವಿಲ್ ಕೋರ್ಟ್ ನ್ಯಾಯಾಧೀಶ ಜಕಾತಿ ಅವರು ನಾಗರತ್ನಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿದ್ದಾರೆ. 

ದುನಿಯಾ ವಿಜಯ್ ಪತ್ನಿಗೆ ರಿಲೀಫ್; ಸಿಕ್ತು ಮಧ್ಯಂತರ ನಿರೀಕ್ಷಣಾ ಜಾಮೀನು

ಬೆಂಗಳೂರು: ದುನಿಯಾ ವಿಜಯ್ ಎರಡನೇ ಪತ್ನಿ ಕೀರ್ತಿಗೌಡ ಮೇಲೆ ಹಲ್ಲೆ ಎಸಗಿದ ಪ್ರಕರಣದ ಆರೋಪಿ ನಾಗರತ್ನ ಅವರಿಗೆ ಸದ್ಯಕ್ಕೆ ರಿಲೀಫ್ ಸಿಕ್ಕಂತಾಗಿದೆ. 

ದುನಿಯಾ ವಿಜಯ್ ಮೊದಲ ಪತ್ನಿ ನಾಗರತ್ನ ಪ್ರಕರಣದ ವಿಚಾರಣೆ ನಡೆಸಿದ ನಗರ ಸಿವಿಲ್ ಕೋರ್ಟ್ ನ್ಯಾಯಾಧೀಶ ಜಕಾತಿ ಅವರು ನಾಗರತ್ನಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿದ್ದಾರೆ. ಅಲ್ಲದೆ, 50 ಸಾವಿರ ಬಾಂಡ್ ಹಾಗೂ ಒಬ್ಬರ ಶ್ಯೂರಿಟಿಯೊಂದಿಗೆ ಷರತ್ತಿನ ಮೇಲೆ ಜಾಮೀನು ಕೊಡಲಾಗಿದ್ದು, ಅಗತ್ಯವಿದ್ದಾಗ ವಿಚಾರಣೆಗೆ ಬರಲು ಸೂಚನೆ ನೀಡಿದ್ದಾರೆ.

ಕೀರ್ತಿಗೌಡ ಅವರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆ ನೀಡಿದ ದೂರಿನ ಆಧಾರದ ಮೇರೆಗೆ ಗಿರಿನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ ​392(ರಾಬರಿ), 279(ಕಳ್ಳತನ), 307(ಕೊಲೆ ಯತ್ನ), 355(ಚಪ್ಪಲಿ ಏಟು) ಹಾಗೂ 201(ಸಾಕ್ಷಿ ನಾಶ) ಅಡಿಯಲ್ಲಿ ನಾಗರತ್ನ ವಿರುದ್ಧ ದೂರು ದಾಖಲಿಸಲಾಗಿತ್ತು. ಆದರೀಗ ಐಪಿಸಿ ಸೆಕ್ಷನ್ 326ರ ಅಡಿಯಲ್ಲಿ ಮತ್ತೊಂದು ಎಫ್‍ಐಆರ್ ದಾಖಲಾಗಿದೆ. ಹಲ್ಲೆ ಮತ್ತು ಅಂಗಾಂಗ ಊನಗೊಳಿಸಿದ ಆರೋಪದಡಿ ಎಫ್‍ಐಆರ್ ದಾಖಲು ಮಾಡಲಾಗಿತ್ತು.
 

Read More