Home> Entertainment
Advertisement

ವರದಕ್ಷಿಣೆ ಪಡೆದಿದ್ರಾ ದಕ್ಷಿಣ ಭಾರತದ ಈ ಖ್ಯಾತ ನಟ: ಅಳಿಯನ ಬಗ್ಗೆ ಮಾವ ಹೇಳಿದ್ದೇನು?

ವರದಕ್ಷಿಣೆ ಪಡೆದಿದ್ರಾ ದಕ್ಷಿಣ ಭಾರತದ ಈ ಖ್ಯಾತ ನಟ: ಅಳಿಯನ ಬಗ್ಗೆ ಮಾವ ಹೇಳಿದ್ದೇನು?

ವರದಕ್ಷಿಣೆ ಸಾಮಾಜಿಕ ಪಿಡುಗು ಎಂಬುದು ಎಲ್ಲರಿಗೂ ತಿಳಿದ ವಿಚಾರ. ವರದಕ್ಷಿಣೆಯನ್ನು ಪಡೆಯುವುದು ಮತ್ತು ಕೊಡುವುದು ಎರಡೂ ಅಪರಾಧವೇ. ಆದರೆ ಇತ್ತೀಚಿನ ದಿನಗಳಲ್ಲಿ ಈ ಸಮಸ್ಯೆ ಕೊಂಚ ಮಟ್ಟಿಗೆ ಕಡಿಮೆಯಾಗಿದೆ ಎನ್ನಬಹುದು. ಅಷ್ಟೇ ಅಲ್ಲದೆ, ಈ ಸಂಬಂಧ ಸಾಮಾಜಿಕ ಕಳಕಳಿಯನ್ನೂ ಸಹ ಮೂಡಿಸಲಾಗುತ್ತಿದೆ. ಆದರೆ ದಕ್ಷಿಣ ಭಾರತದ ಖ್ಯಾತ ನಟ ತಮ್ಮ ಮದುವೆಯ ಸಂದರ್ಭದಲ್ಲಿ ವರದಕ್ಷಿಣೆ ಪಡೆದಿದ್ದಾರೆಯೇ ಎಂಬ ಪ್ರಶ್ನೆ ಇದೀಗ ಎಲ್ಲೆಡೆ ಚರ್ಚೆಯಾಗುತ್ತಿದೆ.  

ಇದನ್ನು ಓದಿ: ಎಷ್ಟು ಬಾರಿ ಪ್ಲೇ ಆಫ್‌ ಪ್ರವೇಶಿಸಿದೆ ಗೊತ್ತಾ RCB: ʼಈ ಸಲ ಕಪ್‌ ನಮ್ದೇʼ ಆಗುತ್ತಾ?

ಟಾಲಿವುಡ್‌ನ ಸ್ಟೈಲಿಶ್‌ ಸ್ಟಾರ್‌ ಅಲ್ಲು ಅರ್ಜುನ್‌ ತಮ್ಮ ಮದುವೆ ಸಂದರ್ಭದಲ್ಲಿ ವರದಕ್ಷಿಣೆ ಪಡೆದಿದ್ದಾರೆಯೇ ಎಂಬ ಪ್ರಶ್ನೆಯನ್ನು ಅವರ ಮಾವ ಕಂಚರಾಲ ಚಂದ್ರಶೇಖರ್​ ರೆಡ್ಡಿ ಬಳಿ ಸಂದರ್ಶನವೊಂದರಲ್ಲಿ ಕೇಳಲಾಗಿದೆ. ಅದಕ್ಕೆ ಅವರು, "ನನ್ನ ಅಳಿಯ ಅಲ್ಲು ಅರ್ಜುನ್‌ ವರದಕ್ಷಿಣೆ ಪಡೆದುಕೊಂಡಿಲ್ಲ. ಅಲ್ಲು ಕುಟುಂಬ ವರದಕ್ಷಿಣೆಗೆ ವಿರುದ್ಧವಾಗಿದೆ" ಎಂದು ಹೇಳಿದ್ದಾರೆ. 

ಅಲ್ಲು ಅರ್ಜುನ್‌ಗೆ ತೆಲುಗು ಭಾಷೆ ಮಾತ್ರವಲ್ಲ ದೇಶದೆಲ್ಲೆಡೆ ಅನೇಕ ಅಭಿಮಾನಿಗಳಿದ್ದಾರೆ. ಅಂತಹ ನಾಯಕ ವರದಕ್ಷಿಣೆ ಪಡೆದಿದ್ದಾರೆಯೇ ಎಂಬ ಮಾತುಗಳು ಕೇಳಿಬಂದಿದ್ದವು. ಅದಕ್ಕೆ ಈಗ ಉತ್ತರ ಸಿಕ್ಕಿದಂತಾಗಿದೆ. ಅಲ್ಲು ಅರ್ಜುನ್‌ ಅವರು 2011ರಲ್ಲಿ ಸ್ನೇಹಾ ರೆಡ್ಡಿಯನ್ನು ವರಿಸಿದ್ದಾರೆ. ಪ್ರೀತಿಸಿ ಮದುವೆಯಾದ ಈ ಜೋಡಿ ಟಾಲಿವುಡ್‌ನಲ್ಲಿ ಸಖತ್‌ ಫೇಮಸ್‌ ಆಗಿದ್ದಾರೆ. 

ಇದನ್ನು ಓದಿ: ಎಸ್ ಬಿ ಐ ಗ್ರಾಹಕರಿಗೆ ಸರ್ಕಾರದ ಎಚ್ಚರಿಕೆ, ಈ ಸಂದೇಶ ತಕ್ಷಣ ಡಿಲೀಟ್ ಮಾಡಿ

​ಇತ್ತೀಚೆಗೆ ಅಲ್ಲು ಅರ್ಜುನ್‌ ಅಭಿನಯದ ಪುಷ್ಟ ಸಿನಿಮಾ ರಿಲೀಸ್‌ ಆಗಿ ಸಖತ್‌ ಸೌಂಡ್‌ ಮಾಡಿತ್ತು. ಇದೀಗ ಕೊಂಚ ಬ್ರೇಕ್‌ ಪಡೆದ ನಟ ತಮ್ಮ ಕುಟುಂಬದ ಜೊತೆಗೆ ಸಮಯ ಕಳೆಯುತ್ತಿದ್ದಾರೆ. 

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Read More