Home> Entertainment
Advertisement

ಧಾರಾವಾಹಿ ಶೂಟಿಂಗ್ ಸೆಟ್‌ನಲ್ಲಿ ನಟ ಚಂದನ್‌ಗೆ ಕಪಾಳ ಮೋಕ್ಷ..!

‘ಸಾವಿತ್ರಮ್ಮಗಾರು ಅಬ್ಬಾಯಿ’ ತೆಲುಗು ಧಾರಾವಾಹಿ ಸೆಟ್‍ನಲ್ಲಿ ಕ್ಯಾಮೆರಾ ಅಸಿಸ್ಟೆಂಟ್‍ಗೆ ಹಲ್ಲೆ ಮಾಡಿದ ಕನ್ನಡ ಕಿರುತೆರೆ ನಟ ಚಂದನ್ ಕುಮಾರ್‍ಗೆ ತಂತ್ರಜ್ಞರಿಂದ ಕಪಾಳಮೋಕ್ಷ!

ಧಾರಾವಾಹಿ ಶೂಟಿಂಗ್ ಸೆಟ್‌ನಲ್ಲಿ ನಟ ಚಂದನ್‌ಗೆ ಕಪಾಳ ಮೋಕ್ಷ..!

ಬೆಂಗಳೂರು: ತೆಲುಗು ಧಾರಾವಾಹಿ ಶೂಟಿಂಗ್ ಸೆಟ್‍ನಲ್ಲಿ ಸ್ಯಾಂಡಲ್‍ವುಡ್ ನಟ ಚಂದನ್‍ ಕುಮಾರ್‍ಗೆ ಕಪಾಳ ಮೋಕ್ಷ ಮಾಡಲಾಗಿದೆ. ತೆಲುಗು ಸೀರಿಯಲ್  ‘ಸಾವಿತ್ರಮ್ಮಗಾರು ಅಬ್ಬಾಯಿ’ ಸೆಟ್‍ನಲ್ಲಿ ಚಂದನ್‍ಗೆ ತಂತ್ರಜ್ಞನೊಬ್ಬ ಹೊಡೆದಿದ್ದಾನೆ.

ಇದನ್ನೂ ಓದಿ: ‘ಕಿಚ್ಚ’ನಿಗೆ ಥ್ಯಾಂಕ್ಸ್ ಹೇಳಿ ಗುಡ್ಡಿ ಫ್ರೆಂಡ್ ಭಾಸ್ಕರ್ ಬಗ್ಗೆ ರಾಜಮೌಳಿ ಟ್ವೀಟ್

ತೆಲುಗಿನ ‘ಸಾವಿತ್ರಮ್ಮಗಾರು ಅಬ್ಬಾಯಿ’ ಈಗಾಗಲೇ ಜನಮನ ಸೆಳೆದಿದ್ದು, ಚಂದನ್ ಲೀಡ್ ರೋಲ್‍ನಲ್ಲಿ ಕಾಣಿಸಿಕೊಂಡಿದ್ದಾರೆ. ಶೂಟಿಂಗ್ ವೇಳೆ ಕ್ಯಾಮೆರಾ ಅಸಿಸ್ಟೆಂಟ್‍ಗೆ ಚಂದನ್ ಮೊದಲು ಹಲ್ಲೆ ಮಾಡಿದ್ದಾರೆ ಎಂಬ ಅರೋಪ ಹಿನ್ನೆಲೆ ಧಾರವಾಹಿ ತಂತ್ರಜ್ಞರ ಜೊತೆ ಮಾತಿಗೆ ಮಾತು ಬೆಳೆದು ಕನ್ನಡದ ಕಿರುತೆರೆ ನಟನಿಗೆ ಕಪಾಳಮೋಕ್ಷ ಮಾಡಲಾಗಿದೆ.

ಇದನ್ನೂ ಓದಿ: Kareena Kapoor: 'ನಾನು ಮಕ್ಕಳನ್ನು ಹುಟ್ಟಿಸುವ ಯಂತ್ರವಾಗಿದ್ದೆನೆಯೇ?'

ಇನ್ನು ಈ ಗಲಾಟೆ ಕೆಲವು ದಿನಗಳ ಹಿಂದೆಯೇ ಆಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಚಂದನ್‍ಗೆ ಹೊಡೆದಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಈಗ ವೈರಲ್ ಆಗ್ತಿದೆ. ನಟ ಚಂದನ್ ಈ ಹಿಂದೆ ‘ಲಕ್ಷ್ಮೀ ಬಾರಮ್ಮ’,’ರಾಧಾ ಕಲ್ಯಾಣ’, ಮತ್ತು ‘ಸರ್ವ ಮಂಗಳ ಮಾಂಗಲ್ಯೇ’ ಮುಂತಾದ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಸದ್ಯ ಅವರು ‘ಮರಳಿ ಮನಸ್ಸಾಗಿದೆ’ ಎಂಬ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಧಾರಾವಾಹಿ ಅಲ್ಲದೆ ಕನ್ನಡದ ಕೆಲವು ಸಿನಿಮಾಗಳಲ್ಲೂ ಚಂದನ್ ನಟಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Read More