Home> Entertainment
Advertisement

ತಮಿಳು ಚಿತ್ರದಲ್ಲಿಯೂ ನಟಿಸ್ತೀನಿ, ನಿಮ್ಮ ಪ್ರೀತಿ ನೋಡಿ ಖುಷಿಯಾಗಿದೆ ಎಂದ ಕಿಸ್ ನಟಿ

ಕಿಸ್ ಸಿನಿಮಾ ಮೂಲಕ ಚಿತ್ರರಂಗಕ್ಕೆ ಪಪಾದಾರ್ಪಣೆ ಮಾಡಿದ್ದ ಶ್ರೀಲೀಲಾ, ತೆಲುಗು ಸಿನಿಮಾದಲ್ಲಿಯೂ ನಟಿಸಿದ್ದಾರೆ ಇದೀಗ ತಮಿಳು ಸಿನಿಮಾದಲ್ಲಿಯೂ ನಟಿಸುತ್ತೇನೆದೆಂದು ತಮ್ಮ ಆಸೆಯನ್ನು ವ್ಯಕ್ತಪಡಿಸಿದ್ದಾರೆ. 

ತಮಿಳು ಚಿತ್ರದಲ್ಲಿಯೂ ನಟಿಸ್ತೀನಿ, ನಿಮ್ಮ ಪ್ರೀತಿ ನೋಡಿ ಖುಷಿಯಾಗಿದೆ ಎಂದ ಕಿಸ್ ನಟಿ

ಈಗಾಗಲೇ ತೆಲುಗು ಸಿನಿಮಾಗಳಲ್ಲಿ ನಟಿಸಿ ಮೋಡಿ ಮಾಡಿದ ಶ್ರೀಲೀಲಾ ತಮಿಳುನಾಡಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ತಮಿಳು ಸಿನಿಮಾಗಳಲ್ಲಿ ನಟಿಸುವ ಆಸೆ ಇದೆ ಎಂದು ತಿಳಿಸಿದ್ದಾರೆ. 

ತಮಿಳುನಾಡಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ತಮಿಳು ಜನರಿಗೆ ತಮ್ಮ ಮೇಲಿರುವ ಕ್ರೇಜ್ ಅನ್ನು ನೋಡಿ ಶ್ರೀಲೀಲಾ ಫಿದಾ ಆಗಿದ್ದಾರೆ. 

ಇದನ್ನು ಓದಿ :  Aadujeevitham : ಎರಡೇ ದಿನದಲ್ಲಿ ಆಡು ಜೀವಿತಂ ಚಿತ್ರದ ಕಲೆಕ್ಷನ್ ಎಷ್ಟು ಗೊತ್ತೇ ?

ಕನ್ನಡದ 'ಕಿಸ್' ಸಿನಿಮಾ ಮೂಲಕ ಬಣ್ಣದಲೋಕಕ್ಕೆ ಬಂದ ಚೆಲುವೆ ಶ್ರೀಲೀಲಾ. ಸ್ಯಾಂಡಲ್‌ವುಡ್‌ನಲ್ಲಿ ನಟಿಸಿದ ಬಳಿಕ ತೆಲುಗು ಸಿನಿಮಾಗಳಲ್ಲಿ ಕೂಡ ನಟಿಸಲು ಪ್ರಾರಂಭಿಸಿದರು. ಅಲ್ಲಿ ಒಳ್ಳೆಯ ಅವಕಾಶಗಳೇ ಸಿಕ್ಕವು

ಬಾಲಕೃಷ್ಣ, ಮಹೇಶ್ ಬಾಬು, ರವಿತೇಜರಂತಹ ಸೂಪರ್‌ ಸ್ಟಾರ್‌ಗಳ ಜೊತೆ ಶ್ರೀಲೀಲಾ ಅವರಿಗೆ ಮಿಂಚುವ ಅವಕಾಶವು ಸಿಕ್ಕಿತ್ತು. ಅವರ ಮೇಲೆ ಟಾಲಿವುಡ್‌ನಲ್ಲಿ ಒಳ್ಳೆ ಕ್ರೇಜ್ ಇದೆ ಆದರೆ ದೊಡ್ಡ ಹಿಟ್ ಸಿನಿಮಾ ಕಂಡುಬರಲಿಲ್ಲ. 

ಇತ್ತೀಚೆಗೆ ಮಹೇಶ್ ಬಾಬು ನಟನೆಯ 'ಗುಂಟೂರು ಖಾರಂ' ಚಿತ್ರದಲ್ಲಿ ಶ್ರೀಲೀಲಾ ಕಾಣಿಸಿಕೊಂಡಿದ್ದರು. 2 ಹಾಡು 4 ಸನ್ನಿವೇಶಗಳಿಗೆ ಆಕೆಯ ಪಾತ್ರ ಸೀಮಿತವಾಗಿತ್ತು. ಚಿತ್ರದ ಹಾಡೊಂದರಲ್ಲಿ ಬಿಂದಾಸ್ ಹೆಜ್ಜೆ ಹಾಕಿ ಶ್ರೀಲೀಲಾ ಕಮಾಲ್ ಮಾಡಿದ್ದಾರೆ. ಈ ಹಾಡು ತಮಿಳುನಾಡಿನಲ್ಲೂ ಹಿಟ್ ಆಗಿದೆ.

ಶ್ರೀಲೀಲಾ ಆದಷ್ಟು ಬೇಗ ತಮಿಳು ಸಿನಿಮಾದಲ್ಲಿ ನಟಿಸ್ತಾರೆ ಎನ್ನುವ ಮಾತುಗಳು ಕೇಳಿಬಂದಿತ್ತು. ಇದೀಗ ಈ ಬಗ್ಗೆ ಆಕೆ ಮಾತನಾಡಿದ್ದಾರೆ. ತಮಿಳುನಾಡಿನಲ್ಲಿ ನಡೆದ ಮೆಡಿಕಲ್ ಕಾಲೇಜ್‌ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಶ್ರೀಲೀಲಾ ಹೋಗಿದ್ದರು. ಅಲ್ಲಿನ ಜನರ ರೆಸ್ಪಾನ್ಸ್ ನೋಡಿ ಶಾಕ್ ಆಗಿದ್ದಾರೆ.

'ಕಿಸ್‌' ಬೆಡಗಿ ಮಾತನಾಡಿ "ನನಗೆ ತುಂಬಾ ಖುಷಿಯಾಗಿದೆ. ನನಗೆ ಇಷ್ಟುದಿನ ಅನುಮಾನವಿತ್ತು. ನನಗೆ ತಮಿಳು ಬರುವುದಿಲ್ಲ, ತಮಿಳಿನಲ್ಲಿ ಸಿನಿಮಾ ಮಾಡಿಲ್ಲ. ಇಲ್ಲಿನವರಿಗೆ ನನ್ನ ಪರಿಚಯ ಇರಲ್ಲ ಎಂದುಕೊಂಡಿದ್ದೆ. ನನ್ನನ್ನು ಅತಿಥಿ ಆಗಿ ಕರೆದಾಗ, ನಾನು ಹೇಗೆ ಬರುತ್ತೇನೆ ಎಂದುಕೊಂಡಿದ್ದೆ. ಆದರೆ ಇಲ್ಲಿ ನಿಮ್ಮ ಪ್ರೀತಿಯನ್ನು ನೋಡಿ ನನಗೆ ತುಂಬಾ ಸಂತೋಷವಾಗಿದೆ. ನಿಮ್ಮನ್ನು ನೋಡಿದ ಮೇಲೆ ಒಂದು ತಮಿಳು ಚಿತ್ರ ಮಾಡಬೇಕು ಅನ್ನಿಸುತ್ತಿದೆ ಎಂದಿದ್ದಾರೆ.

ಇದನ್ನು ಓದಿ :  ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಮತ್ತೇ ಬೆಂಕಿ : ಕಿಡಿಗೇಡಿಗಳ ಕೃತ್ಯ ಶಂಕೆ

ಮೆಡಿಕಲ್ ಕಾಲೇಜಿನಲ್ಲಿ ಇಷ್ಟು ಎನರ್ಜಿ ಇರುತ್ತದೆ ಎಂದು ನನಗೆ ಗೊತ್ತಿರಲಿಲ್ಲ? ನಾನು ಕೂಡ ಮೆಡಿಕಲ್ ವಿದ್ಯಾರ್ಥಿ. ನಿಮ್ಮನ್ನು ನೋಡಿ ನನಗೆ ಆಶ್ಚರ್ಯವಾಗಿದೆ. ಸದ್ಯ ಶ್ರೀಲೀಲಾ ಮಾತುಗಳು ವೈರಲ್ ಆಗಿವೆ.

ಸದ್ಯ ಶ್ರೀಲೀಲಾ ಕೈಯಲ್ಲಿ ಯಾವುದೇ ಸಿನಿಮಾ ಇಲ್ಲ. ಪವನ್ ಕಲ್ಯಾಣ್ ಜೊತೆ 'ಉಸ್ತಾದ್ ಭಗತ್ ಸಿಂಗ್' ಚಿತ್ರದಲ್ಲಿ ನಟಿಸುತ್ತಿದ್ದಾರೆ. ಆದರೆ ಪವನ್ ಪಾಲಿಟಿಕ್ಸ್ ಕಡೆ ಮುಖ ಮಾಡಿರುವುದರಿಂದ ಸಿನಿಮಾ ಚಿತ್ರೀಕರಣ ಅರ್ಧಕ್ಕೆ ನಿಂತಿದೆ. ಇನ್ನುಳಿದಂತೆ ಯಾವುದೇ ಸಿನಿಮಾ ಆಕೆ ಒಪ್ಪಿಕೊಂಡಿಲ್ಲ ಎಂದು ತಿಳಿಸಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Read More