Home> Entertainment
Advertisement

#RajinikanthPoliticalEntry : ಪ್ರವೇಶಕ್ಕೂ ಮುನ್ನವೇ ರಾಜಕೀಯಕ್ಕೆ ವಿದಾಯ ಘೋಷಿಸಿದ Rajinikanth

ಸುದೀರ್ಘವಾದ ಪತ್ರ ಬರೆದು ಟ್ವೀಟರ್ ನಲ್ಲಿ ಹಂಚಿಕೊಂಡಿರುವ ರಜನಿಕಾಂತ್, ಅನಾರೋಗ್ಯದ ಕಾರಣಕ್ಕೆ ಸಕ್ರೀಯ ರಾಜಕಾರಣ ಮಾಡಲು ಸಾಧ್ಯವಾಗುತ್ತಿಲ್ಲ ಎಂಬ ಅಸಹಾಯಕತೆಯನ್ನು ತೋಡಿಕೊಂಡಿದ್ದಾರೆ.‌ ಜೊತೆಗೆ ತಮ್ಮ ರಾಜಕೀಯ ಪ್ರವೇಶದ ಬಗ್ಗೆ ನಿರೀಕ್ಷೆಗಳನ್ನು ಹುಸಿ ಗೊಳಿಸುತ್ತಿರುವ ಕಾರಣಕ್ಕೆ ಕ್ಷಮೆ ಕೇಳುತ್ತಿದ್ದೇನೆ ಎಂದು ಕೂಡ ಹೇಳಿದ್ದಾರೆ.
 

#RajinikanthPoliticalEntry : ಪ್ರವೇಶಕ್ಕೂ ಮುನ್ನವೇ ರಾಜಕೀಯಕ್ಕೆ ವಿದಾಯ ಘೋಷಿಸಿದ Rajinikanth

ಚೆನ್ನೈ: ಸೂಪರ್‌ಸ್ಟಾರ್ ರಜನಿಕಾಂತ್ (SuperStar Rajinikanth) ರಾಜಕೀಯ ಪಕ್ಷವನ್ನು ಆರಂಭ ಮಾಡುವ ಮುನ್ನವೇ ವಿದಾಯ ಹೇಳಿದ್ದಾರೆ‌.

ಸೂಪರ್‌ಸ್ಟಾರ್ ರಜನಿಕಾಂತ್ (Superstar Rajinikanth) ಅವರ ರಾಜಕೀಯ ಪ್ರವೇಶದ ಬಗ್ಗೆ ಹಲವು ವರ್ಷಗಳಿಂದ ಚರ್ಚೆಯಾಗುತ್ತಿತ್ತು. ಅವರು ಇದೇ ಡಿಸೆಂಬರ್ 31ರಂದು ತಮ್ಮ‌ ಹೊಸ ಪಕ್ಷದ ರೂಪುರೇಷೆಗಳೇನು? ಒಲವು ನಿಲುವುಗಳೇನು? ಎಂಬುದನ್ನು ಅಧಿಕೃತವಾಗಿ ತಿಳಿಸುವುದಾಗಿ ಹೇಳಿದ್ದರು. ಆದರೆ ಅನಾರೋಗ್ಯ ಪೀಡಿತರಾಗಿರುವುದರಿಂದ ಹೊಸ ಪಕ್ಷದ ಘೋಷಣೆ ಬಗ್ಗೆ ಅನುಮಾನಗಳು ಮೂಡಿದ್ದವು. ಇಂದು ರಜನಿಕಾಂತ್ ಅಧಿಕೃತವಾಗಿ 'ರಾಜಕೀಯ ನಿವೃತ್ತಿ' ಘೋಷಿಸಿದ್ದಾರೆ.

ಇದನ್ನೂ ಓದಿ: ಕಂಡಕ್ಟರ್‌ನಿಂದ ಸೂಪರ್‌ಸ್ಟಾರ್‌ವರೆಗೆ Rajinikanth ಬಗೆಗಿನ ಗೊತ್ತಿರದ ವಿಷಯಗಳಿವು

ಸುದೀರ್ಘವಾದ ಪತ್ರವೊಂದನ್ನು ಬರೆದು ಟ್ವೀಟರ್ (Tiwtter) ನಲ್ಲಿ ಹಂಚಿಕೊಂಡಿರುವ ರಜನಿಕಾಂತ್, ಅನಾರೋಗ್ಯದ ಕಾರಣಕ್ಕೆ ಸಕ್ರೀಯ ರಾಜಕಾರಣ ಮಾಡಲು ಸಾಧ್ಯವಾಗುತ್ತಿಲ್ಲ ಎಂಬ ಅಸಹಾಯಕತೆಯನ್ನು ತೋಡಿಕೊಂಡಿದ್ದಾರೆ.‌ ಜೊತೆಗೆ ತಮ್ಮ ರಾಜಕೀಯ ಪ್ರವೇಶದ ಬಗ್ಗೆ ಅಪಾರ ನಿರೀಕ್ಷೆ ಇತ್ತು. ಆ ನಿರೀಕ್ಷೆಗಳನ್ನು ಹುಸಿ ಗೊಳಿಸುತ್ತಿರುವ ಕಾರಣಕ್ಕೆ ಕ್ಷಮೆ ಕೇಳುತ್ತಿದ್ದೇನೆ ಎಂದು ಕೂಡ ಹೇಳಿದ್ದಾರೆ.

ರಜನಿಕಾಂತ್ ಅವರಿಗೆ ಕೋವಿಡ್ 19  (Covid 19) ನೆಗೆಟಿವ್ ಬಂದಿದ್ದರೂ, ಆಸ್ಪತ್ರೆಯಿಂದ ಕಳೆದ ಭಾನುವಾರ ಬಿಡುಗಡೆಯಾಗಿದ್ದರೂ ವೈದ್ಯರು 'ಒಂದು ವಾರ ವಿಶ್ರಾಂತಿ ಪಡೆಯುವಂತೆ ಸೂಚಿಸಿರುವುದರಿಂದ' ರಜನಿಕಾಂತ್ ಹೊಸ ಪಕ್ಷದ ಬಗ್ಗೆ  ಅಧಿಕೃತ ಘೋಷಣೆ ಮಾಡುತ್ತಾರೋ ಇಲ್ಲವೋ ಎಂಬ ಅನುಮಾನ ‌ಶುರುವಾಗಿತ್ತು.

ಇದನ್ನೂ ಓದಿ: Superstar Rajinikanth: 'ಥಲೈವಾ' ಆರೋಗ್ಯ ಹೇಗಿದೆ? ಆಸ್ಪತ್ರೆಯ ಹೆಲ್ತ್ ಬುಲೆಟಿನ್‌ನಲ್ಲಿ ಏನಿದೆ?

ಮುಂದಿನ ವರ್ಷ ಮಾರ್ಚ್ ಅಥವಾ ಏಪ್ರಿಲ್‌ ತಿಂಗಳಲ್ಲಿ ತಮಿಳುನಾಡು ‌ವಿಧಾನಸಭೆ ಚುನಾವಣೆ (Tamil Nadu Assembly Election) ನಡೆಯಲಿದ್ದು‌ ಈಗಾಗಲೇ ರಾಜಕೀಯ ಚಟುವಟಿಕೆಗಳು ಗರಿ ಗೆದರಿವೆ.‌ ಎಂ.ಕೆ.‌ ಸ್ಟಾಲಿನ್ (MK Stalin) ನೇತೃತ್ವದ ದ್ರಾವಿಡ ಮುನ್ನೇತ್ರ ಕಳಗಂ (DMK) ಹಾಗೂ ಕಮಲ್ ಹಾಸನ್ (Kamala Haasan) ಅವರ 'ಮಕ್ಕಲ್ ನೀಧಿ ಮಾಯಂ' (Makkal Nidhi Maiam) ಪಕ್ಷ ಪ್ರಚಾರ ಆರಂಭಿಸಿವೆ. ಆಡಳಿತಾರೂಢ ಎಐಎಡಿಎಂಕೆ (AIADMK) ಕೂಡ ನಿಧಾನವಾಗಿ ಚುನಾವಣಾ ಅಖಾಡಕ್ಕಿಳಿಯುತ್ತಿದೆ. ಈ ನಡುವೆ ರಜನಿಕಾಂತ್ ಅವರ ಹೊಸ ಪಕ್ಷದ ಬಗ್ಗೆ ಕುತೂಹಲ ಮೂಡಿತ್ತು.

'ಸನ್ ಪಿಕ್ಚರ್ಸ್' ನಿರ್ಮಾಣದ 'ಅಣ್ಣಾತೆ' ಎಂಬ ತಮಿಳು ಚಿತ್ರದ ಚಿತ್ರೀಕರಣಕ್ಕಾಗಿ ರಜನಿಕಾಂತ್ ಡಿಸೆಂಬರ್ 13 ರಿಂದ ಹೈದರಾಬಾದ್‌ನಲ್ಲಿ ಬೀಡುಬಿಟ್ಟಿದ್ದರು.‌ ಡಿಸೆಂಬರ್‌ 25ರಂದು ಅವರ ರಕ್ತದ ಒತ್ತಡದಲ್ಲಿ ವ್ಯತ್ಯಯವಾಗಿ ಚಿತ್ರೀಕರಣದ ವೇಳೆ ರಜನಿಕಾಂತ್ ಅಸ್ವಸ್ಥಗೊಂಡಿದ್ದರು. ಬಳಿಕ ಅವರನ್ನು ಹೈದರಾಬಾದಿನ ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ದಿನಗಳ ಚಿಕಿತ್ಸೆಯ ಬಳಿಕ ಡಿಸೆಂಬರ್ 27ರಂದು ಡಿಸ್ಚಾರ್ಜ್ ಮಾಡಲಾಗಿತ್ತು.

ರಜನಿಕಾಂತ್ ರಕ್ತದೊತ್ತಡದಲ್ಲಿ ಸ್ಥಿರತೆ ಕಂಡುಬಂದಿದೆ.‌ ಅವರ ಆರೋಗ್ಯ ಸುಧಾರಿಸಿದೆ ಎಂದು ಅಪೊಲೊ ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಿತ್ತು. ಇದೇ ವೇಳೆ ವೈದ್ಯರು ಒಂದು ವಾರ ಸಂಪೂರ್ಣ ವಿಶ್ರಾಂತಿ ಪಡೆಯಲು, ರಕ್ತದೊತ್ತಡದ ಮೇಲೆ ನಿಗಾವಹಿಸಲು, ದೈಹಿಕ ಶ್ರಮ ವಹಿಸದಿರಲು ಹಾಗೂ ಯಾವುದೇ ರೀತಿಯ ಒತ್ತಡಕ್ಕೆ ಒಳಗಾಗದಿರಲು ರಜನಿಕಾಂತ್ ಅವರಿಗೆ ಸಲಹೆ ನೀಡಿದ್ದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಆಪ್ ಡೌನ್ ಲೋಡ್ ಮಾಡಿ
Android Link - https://bit.ly/3hDyh4G
iOS Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಕ್ಕೆ ಸಬ್ ಸ್ಕ್ರೈಬ್ ಮಾಡಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Read More