Home> Entertainment
Advertisement

ಇಳಯರಾಜ ಸಂಗೀತ ನಿರ್ದೇಶನದ "ಪ್ರೀತ್ಸು" ಚಿತ್ರದ ಹಾಡುಗಳ ಬಿಡುಗಡೆ

ಇಳಯರಾಜ ಸಂಗೀತ ನಿರ್ದೇಶನದ

ಸಂಗೀತ ಕ್ಷೇತ್ರದ ಮೇರು ಪ್ರತಿಭೆ MAESTRO ಇಳಯರಾಜ ಅವರು ಸಂಗೀತ ನೀಡಿರುವ ಹಾಗೂ ಕೆ.ಗಣೇಶನ್ ನಿರ್ದೇಶಿಸಿರುವ"ಪ್ರೀತ್ಸು" ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು.

ಭಾ.ಮ.ಹರೀಶ್,  ಟೇ.ಶಿ.ವೆಂಕಟೇಶ್ ಹಾಗೂ ರವಿ ವಿಠಲ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

ಇದನ್ನೂ ಓದಿ:  IPL 2022 : ಬುಮ್ರಾ ಮತ್ತು ನಿತೀಶ್ ರಾಣಾ ವಿರುದ್ಧ ಕಠಿಣ ಕ್ರಮ ಕೈಗೊಂಡ ಬಿಸಿಸಿಐ!

ಕಳೆದ ಮೂವತ್ತು ದಶಕಗಳಿಂದ ಕನ್ನಡ ಚಿತ್ರರಂಗಲ್ಲಿದ್ದೀನಿ.ನವಭಾರತ ಸೇರಿದಂತೆ ಕನ್ನಡದಲ್ಲಿ ಸಾಕಷ್ಟು ಚಿತ್ರಗಳನ್ನು ನಿರ್ದೇಶಿಸಿದ್ದೇನೆ. ಈಗ ವಿಭಿನ್ನ ಕಥೆಯುಳ್ಳ "ಪ್ರೀತ್ಸು" ಚಿತ್ರವನ್ನು ನಿರ್ದೇಶನ ಮಾಡಿದ್ದೀನಿ. ನನಗೆ ನಿರ್ಮಾಣದಲ್ಲಿ ಮಲೇಷಿಯಾದ ಗಾನ ವಿನೋದನ್ ಸಾಥ್ ನೀಡಿದ್ದಾರೆ.ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಅವರು ಈ ಚಿತ್ರಕ್ಕೆ ಸಂಗೀತ ನೀಡಿರುವುದು ನಿಜಕ್ಕೂ ಸಂತಸ ತಂದಿದೆ. ನನಗೆ ಇಳಯರಾಜ (Ilayaraja) ಅವರು ಬಹುದಿನಗಳ ಪರಿಚಯ. ಅವರು ಈ ಕಾರ್ಯಕ್ರಮಕ್ಕೆ ಬರಬೇಕಿತ್ತು. ಆದರೆ ವೈದ್ಯರ ಸಲಹೆ ಮೇರೆಗೆ ಕೊನೆಯಲ್ಲಿ ಅವರು ಬರುವುದು ರದ್ದಾಯಿತು. ವಿಡಿಯೋ ಮೂಲಕ ಅವರು ಸಂದೇಶ ಕಳುಹಿಸಿದ್ದಾರೆ. ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದೆ ನೋಡಿ ಹರಸಿ ಎಂದು ನಿರ್ದೇಶಕ ಕೆ.ಗಣೇಶನ್ ಹೇಳಿದರು.

ಇದನ್ನೂ ಓದಿ: Career: ಅಮೃತ್ ಮುನ್ನಡೆ ಯೋಜನೆಯಡಿ ಉಚಿತ ಕೋರ್ಸ್ : ಅರ್ಜಿ ಆಹ್ವಾನ

ಮಲೇಷಿಯಾಗೆ ಬಂದಾಗ ಗಣೇಶನ್ ಈ ಕಥೆ ಹೇಳಿದ್ದರು, ಇಷ್ಟವಾಯಿತು ಹಾಗಾಗಿ ನಿರ್ಮಾಣಕ್ಕೆ ಮುಂದಾದೆವು.ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು.ನಿರ್ಮಾಪಕ ಗಾನ ವಿನೋದನ್.ನಾಯಕ ಸುಭಾಷ್ ಸಹ ತಮ್ಮ ಪಾತ್ರ ಪರಿಚಯ ಮಾಡಿಕೊಂಡು,ಅತಿಥಿಗಳಿಗೆ ಧನ್ಯವಾದ ಅರ್ಪಿಸಿದರು.ಮುಖ್ಯ ಅತಿಥಿಗಳು ಚತ್ರಕ್ಕೆ ಶುಭ ಕೋರಿದರು.ಸುಭಾಷ್ ಅವರಿಗೆ ನಾಯಕಿಯಾಗಿ ನೇಹ ಅಭಿನಯಿಸಿದ್ದಾರೆ.

ಗಣೇಶನ್, ಮನೋಬಲ, ಸ್ವಾಮಿನಾಥ, ಮನೋಹರ್ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.ಎ.ಸಿ.ಮಹೇಂದ್ರನ್ ಛಾಯಾಗ್ರಹಣ, ಸಂಜೀವ ಸಂಕಲನ  ಹಾಗೂ ಜಾನ್ ಪೀಟರ್ ಅವರ ಕಲಾ ನಿರ್ದೇಶನ "ಪ್ರೀತ್ಸು" ಚಿತ್ರಕ್ಕಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Read More