Home> Entertainment
Advertisement

ಹೊಸಬರ 'ಕಂಬ್ಳಿಹುಳ'ಕ್ಕೆ ಸ್ಯಾಂಡಲ್‌ವುಡ್‌ ಸಿನಿ ತಾರೆಯರ ಸಾಥ್

ಸೋಶಿಯಲ್ ಮೀಡಿಯಾದಲ್ಲಿ ಎಲ್ಲೆಲ್ಲೂ ‘ಕಂಬ್ಳಿಹುಳ’ ಸಿನಿಮಾದ್ದೇ ಮಾತು. ಚಿತ್ರ ನೋಡಿದ ಚಿತ್ರ ಪ್ರೇಮಿಗಳು ಸಿನಿಮಾದ ಹೊಸತನವನ್ನು ಒಪ್ಪಿ ಅಪ್ಪಿಕೊಂಡಿದ್ದು ಮಾತ್ರವಲ್ಲದೇ ಹೊಸಬರ ಪ್ರಯತ್ನವಿರುವ ಚಿತ್ರವನ್ನು ಇನ್ನಷ್ಟು ಜನ ನೋಡಬೇಕು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ್ದಾರೆ. ಸಪೋರ್ಟ್ ಕಂಬ್ಳಿಹುಳ, ನಮ್ಮ ಮಣ್ಣಿನ ಸಿನಿಮಾ ಎಂಬ ಹ್ಯಾಶ್ ಟ್ಯಾಗ್ ಬಳಸಿ ಟ್ರೆಂಡ್ ಮಾಡುತ್ತಿದ್ದಾರೆ. ಇದು ಕನ್ನಡ ಸಿನಿ ಪ್ರೇಮಿಗಳು ಹೊಸಬರ ಸಿನಿಮಾಗೆ ನೀಡುತ್ತಿರೋ ಸಪೋರ್ಟ್ ಆದ್ರೆ ಇತ್ತ ಚಂದನವನ ಕೂಡ ಕಂಬ್ಳಿಹುಳ ಸಿನಿಮಾ ತಂಡಕ್ಕೆ ಬೆನ್ನೆಲುಬಾಗಿ ನಿಂತಿದೆ.
 

ಹೊಸಬರ 'ಕಂಬ್ಳಿಹುಳ'ಕ್ಕೆ ಸ್ಯಾಂಡಲ್‌ವುಡ್‌ ಸಿನಿ ತಾರೆಯರ ಸಾಥ್

ಬೆಂಗಳೂರು: ಕಂಟೆಂಟ್ ಒಳಗೊಂಡ, ಹೊಸತನವುಳ್ಳ ಸಿನಿಮಾಗಳು ಯಾವತ್ತೂ ಗೆಲ್ಲುತ್ತೆ, ಸಪೋರ್ಟ್ ಸಿಗುತ್ತೆ ಅನ್ನೋದಕ್ಕೆ ‘ಕಂಬ್ಳಿಹುಳ’ ಸಿನಿಮಾ ಸಾಕ್ಷಿಯಾಗಿದೆ. ಸ್ಯಾಂಡಲ್ ವುಡ್ ಅಂಗಳದಲ್ಲಿ ಕಳೆದೊಂದು ವಾರದಿಂದ ಸಖತ್ ಸುದ್ದಿಯಲ್ಲಿರುವ ಸಿನಿಮಾ ಹೊಸ ಪ್ರತಿಭೆಗಳೇ ಸೇರಿ ಮಾಡಿರುವ ಕಂಬ್ಳಿಹುಳ. ನವೆಂಬರ್ 4ರಂದು ರಾಜ್ಯಾದ್ಯಂತ ತೆರೆಕಂಡ ಈ ಚಿತ್ರ ಪ್ರೇಕ್ಷಕ ಪ್ರಭುಗಳನ್ನು ಮಾತ್ರವಲ್ಲ ಚಂದನವನದ ಸಿನಿ ತಾರೆಯರ ಮನಸೂರೆಗೊಂಡಿದ್ದು ಎಲ್ಲರ ಪ್ರಶಂಸೆಗೆ ಪಾತ್ರವಾಗಿದೆ.  

ಸೋಶಿಯಲ್ ಮೀಡಿಯಾದಲ್ಲಿ ಎಲ್ಲೆಲ್ಲೂ ‘ಕಂಬ್ಳಿಹುಳ’ ಸಿನಿಮಾದ್ದೇ ಮಾತು. ಚಿತ್ರ ನೋಡಿದ ಚಿತ್ರ ಪ್ರೇಮಿಗಳು ಸಿನಿಮಾದ ಹೊಸತನವನ್ನು ಒಪ್ಪಿ ಅಪ್ಪಿಕೊಂಡಿದ್ದು ಮಾತ್ರವಲ್ಲದೇ ಹೊಸಬರ ಪ್ರಯತ್ನವಿರುವ ಚಿತ್ರವನ್ನು ಇನ್ನಷ್ಟು ಜನ ನೋಡಬೇಕು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ್ದಾರೆ. ಸಪೋರ್ಟ್ ಕಂಬ್ಳಿಹುಳ, ನಮ್ಮ ಮಣ್ಣಿನ ಸಿನಿಮಾ ಎಂಬ ಹ್ಯಾಶ್ ಟ್ಯಾಗ್ ಬಳಸಿ ಟ್ರೆಂಡ್ ಮಾಡುತ್ತಿದ್ದಾರೆ. ಇದು ಕನ್ನಡ ಸಿನಿ ಪ್ರೇಮಿಗಳು ಹೊಸಬರ ಸಿನಿಮಾಗೆ ನೀಡುತ್ತಿರೋ ಸಪೋರ್ಟ್ ಆದ್ರೆ ಇತ್ತ ಚಂದನವನ ಕೂಡ ಕಂಬ್ಳಿಹುಳ ಸಿನಿಮಾ ತಂಡಕ್ಕೆ ಬೆನ್ನೆಲುಬಾಗಿ ನಿಂತಿದೆ.

fallbacks

 

ಹೌದು, ಚಂದನವನದ ಸಿನಿ ತಾರೆಯರು, ನಿರ್ಮಾಪಕರು, ನಿರ್ದೇಶಕರು ಸಿನಿಮಾ ಬಗ್ಗೆ ಕೇಳಿ ಬರ್ತಿರೋ ಪ್ರಶಂಸೆ ಕಂಡು ಸ್ವತಃ ಸಿನಿಮಾ ನೋಡಿ ಸಿನಿಮಾ ತಂಡಕ್ಕೆ ಸಾಥ್ ನೀಡುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿ ಸಿನಿಮಾ ತಂಡಕ್ಕೆ ಬೆನ್ನುಲುಬಾಗಿ ನಿಂತಿದ್ದಾರೆ. ಸಿನಿಮಾವೊಂದರ ಗೆಲುವಿಗಾಗಿ ಚಿತ್ರರಂಗ ಒಗ್ಗಟ್ಟಾಗಿ ನಿಂತಿರೋದ್ರ ಬಗ್ಗೆ ಎಲ್ಲೆಡೆಯಿಂದ ಮೆಚ್ಚುಗೆ ಮಾತುಗಳು ಕೇಳಿ ಬರ್ತಿದೆ.

ಇದನ್ನೂ ಓದಿ- ಬಾಕ್ಸ್ ಆಫೀಸ್ ನಲ್ಲಿ ಮುಂದುವರೆದ ಕಾಂತಾರ ಅಶ್ವಮೇಧಯಾಗ....!

ನಟ, ನಿರ್ದೇಶಕ ರಿಷಬ್ ಶೆಟ್ಟಿ ‘ಕಂಬ್ಳಿಹುಳ’ ಚಿತ್ರಕ್ಕೆ ಎಲ್ಲೆಡೆಯಿಂದ ಸಾಕಷ್ಟು ಪ್ರಶಂಸೆ ಕೇಳಿ ಬರುತ್ತಿದೆ. ಆದಷ್ಟು ಬೇಗ ಸಿನಿಮಾ ನೋಡುತ್ತೇನೆ ಎಂದು ಪೋಸ್ಟ್ ಹಾಕಿದ್ದು, ಧನಂಜಯ್, ಧನ್ವೀರ್, ರಕ್ಷಿತ್ ಶೆಟ್ಟಿ, ಪ್ರಮೋದ್ ಶೆಟ್ಟಿ, ಚೇತನ್ ಕುಮಾರ್, ನಟಿ ಅದಿತಿ ಪ್ರಭುದೇವ ಕೂಡ ಚಿತ್ರಕ್ಕೆ ಸಪೋರ್ಟ್ ಮಾಡಿ ಪೋಸ್ಟ್ ಹಾಕಿದ್ದು ಆದಷ್ಟು ಬೇಗ ಸಿನಿಮಾ ನೋಡೋದಾಗಿ ತಿಳಿಸಿದ್ದಾರೆ. 

ನಿರ್ದೇಶಕರಾದ  ಸಿಂಪಲ್ ಸುನಿ, ಜಯತೀರ್ಥ, ಯೋಗರಾಜ್ ಭಟ್, ಚಾರ್ಲಿ ಕಿರಣ್ ರಾಜ್, ವಿನಯ್ ರಾಜ್ ಕುಮಾರ್ ಈಗಾಗಲೇ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ. ಹೊಸಬರ ಪ್ರಯತ್ನವನ್ನು ಹಾಡಿ ಹೊಗಳಿದ್ದಾರೆ. ಇನ್ನಷ್ಟು ಜನ ಸಿನಿಮಾ ನೋಡಿ ಪ್ರೋತ್ಸಾಹಿಸುವಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ. ಸಿನಿಮಾ ಬಗ್ಗೆ ಎಲ್ಲರೂ ತೋರಿಸುತ್ತಿರುವ ಪ್ರೀತಿ ಹಾಗೂ ಚಿತ್ರರಂಗದ ಸಹಕಾರ ಕಂಡು ಚಿತ್ರತಂಡ ಸಂತಸಗೊಂಡಿದ್ದು ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ. 

ಇದನ್ನೂ ಓದಿ- Alia Bhatt Baby : ಆಲಿಯಾ ಭಟ್ - ರಣಬೀರ್ ಕಪೂರ್ ಮಗುವಿನ ಫೋಟೋ ವೈರಲ್!?

ನವನ್ ಶ್ರೀನಿವಾಸ್ ನಿರ್ದೇಶನದ ಮೊದಲ ಸಿನಿಮಾ ಇದಾಗಿದ್ದು, ಅಂಜನ್ ನಾಗೇಂದ್ರ ಹಾಗೂ ಅಶ್ವಿತಾ ಆರ್ ಹೆಗ್ಡೆ ನಾಯಕ, ನಾಯಕಿಯಾಗಿ ನಟಿಸಿದ್ದಾರೆ. ಗ್ರೇ ಸ್ಕ್ವೇರ್ ಸ್ಟುಡಿಯೋಸ್ ಬ್ಯಾನರ್ ನಡಿ ನಿರ್ಮಾಣವಾದ ಈ ಚಿತ್ರ ಮಲೆನಾಡು ಭಾಗದಲ್ಲಿ ನಡೆಯುವ ಪ್ರೇಮಕಥೆ ಸುತ್ತ ಹೆಣೆಯಲಾದ ಕಥೆಯನ್ನು ಒಳಗೊಂಡಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Read More