Home> Entertainment
Advertisement

Pushpa The Rule: ಪುಷ್ಪ-2 ನಲ್ಲಿ ಶ್ರೀವಲ್ಲಿ ಸಾಯುತ್ತಾಳಾ? ಮೌನ ಮುರಿದ ನಿರ್ಮಾಪಕರು!

Pushpa The Rule: 'ಪುಷ್ಪ: ದಿ ರೈಸ್' ಚಿತ್ರದ ಮುಂದಿನ ಭಾಗ 'ಪುಷ್ಪ: ದಿ ರೂಲ್' ಚಿತ್ರೀಕರಣ ಆಗಸ್ಟ್‌ನಲ್ಲಿ ಪ್ರಾರಂಭವಾಗಲಿದೆ. ರಶ್ಮಿಕಾ ಮಂದಣ್ಣ ಅವರ ‘ಶ್ರೀವಲ್ಲಿ’ ಪಾತ್ರದ ಸಾವಿನ ಘಟನೆಯನ್ನು ಈ ಚಿತ್ರದಲ್ಲಿ ತೋರಿಸಲಾಗುತ್ತದೆಯೇ ಎಂಬ ಬಗ್ಗೆ ನಿರ್ಮಾಪಕರು ಮಹತ್ವದ ಮಾಹಿತಿಯೊಂದನ್ನು ಬಹಿರಂಗಪಡಿಸಿದ್ದಾರೆ.

Pushpa The Rule: ಪುಷ್ಪ-2 ನಲ್ಲಿ ಶ್ರೀವಲ್ಲಿ ಸಾಯುತ್ತಾಳಾ? ಮೌನ ಮುರಿದ ನಿರ್ಮಾಪಕರು!

Pushpa The Rule: ಸೌತ್ ಚಿತ್ರ 'ಪುಷ್ಪ: ದಿ ರೈಸ್' ಭಾರೀ ಹಿಟ್ ಆಗಿತ್ತು. ಈ ಚಿತ್ರದಲ್ಲಿ ಸೌತ್ ಸೂಪರ್ ಸ್ಟಾರ್ ಅಲ್ಲು ಅರ್ಜುನ್ ಮತ್ತು ನ್ಯಾಷನಲ್‌ ಕ್ರಶ್‌ ರಶ್ಮಿಕಾ ಮಂದಣ್ಣ ಮುಖ್ಯ ಭೂಮಿಕೆಯಲ್ಲಿದ್ದ ನಟಿಸಿದ್ದಾರೆ. ಇದೀಗ ಈ ಚಿತ್ರದ ಎರಡನೇ ಭಾಗ 'ಪುಷ್ಪ: ದಿ ರೂಲ್' ತೆರೆಗೆ ಬರಲಿದೆ. ಇದಕ್ಕಾಗಿ ಚಿತ್ರದ ಶೂಟಿಂಗ್ ಆಗಸ್ಟ್‌ನಲ್ಲಿ ಆರಂಭವಾಗಬಹುದು. ಮೊದಲಿನಂತೆ ಈ ಚಿತ್ರದಲ್ಲೂ ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ: ದಿಗಂತ್ ಹೆಲ್ತ್ ಬುಲೆಟಿನ್ ಬಿಡುಗಡೆ.. ಮಗನ ಆರೋಗ್ಯ ಸ್ಥಿತಿಯ ಬಗ್ಗೆ ತಂದೆ ಹೇಳಿದ್ದೇನು?

ಪಿಂಕ್‌ವಿಲ್ಲಾ ಜೊತೆಗಿನ ಸಂದರ್ಶನದಲ್ಲಿ ಚಿತ್ರದ ನಿರ್ಮಾಪಕ ವೈ.ರವಿಶಂಕರ್‌, 'ಪುಷ್ಪ-1' ಚಿತ್ರವನ್ನು ಸುಮಾರು 195 ಕೋಟಿ ರೂಪಾಯಿಗಳಲ್ಲಿ ನಿರ್ಮಿಸಲಾಗಿದೆ ಎಂದು ತಿಳಿಸಿದ್ದಾರೆ. ಇದೇ ವೇಳೆ 400 ಕೋಟಿ ರೂ.ಗೆ ‘ಪುಷ್ಪ: ದಿ ರೂಲ್’ ಮಾಡುವ ಯೋಜನೆ ಇದೆ. ಚಿತ್ರದ ಸ್ಪೆಷಲ್ ಎಫೆಕ್ಟ್, ಪ್ರಚಾರ, ಸೆಟ್ ವಿನ್ಯಾಸಕ್ಕೆ ಈ ಬಜೆಟ್ ನಲ್ಲಿ ವಿಶೇಷ ಗಮನ ನೀಡಲಾಗುವುದು. ಚಿತ್ರದ ಶೂಟಿಂಗ್‌ಗೆ ಸಿದ್ಧತೆಗಳು ಭರದಿಂದ ಸಾಗಿವೆ. ಆಗಸ್ಟ್‌ನಲ್ಲಿ ಸಿನಿಮಾ ನಿರ್ಮಾಣ ಆರಂಭವಾಗಬಹುದು ಎಂದಿದ್ದಾರೆ.

'ಪುಷ್ಪಾ-2' ಚಿತ್ರದಲ್ಲಿ ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಿದ್ದಾರೆ. ಈ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಅವರ ‘ಶ್ರೀವಲ್ಲಿ’ ಪಾತ್ರ ಸಾಯುತ್ತದೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಇದು ಸತ್ಯಕ್ಕೆ ದೂರಾ ಎಂದಿದ್ದಾರೆ. ಈ ಬಗ್ಗೆ ಹಲವೆಡೆ ವದಂತಿಗಳು ಹರಿದಾಡುತ್ತಿವೆ. ಆದರೆ ಅದರಲ್ಲಿ ಯಾವುದೇ ಸತ್ಯಾಂಶವಿಲ್ಲ. ಈ ಚಿತ್ರದಲ್ಲೂ 'ಶ್ರೀವಲ್ಲಿ' ಉಳಿದುಕೊಂಡು ಪ್ರೇಕ್ಷಕರನ್ನು ರಂಜಿಸಲಿದ್ದಾರೆ ಎಂದು ರವಿಶಂಕರ್ ಹೇಳಿದ್ದಾರೆ. 

ಇದನ್ನೂ ಓದಿ: Naga Chaitanya: ವಿಚ್ಛೇದನದ ಬಳಿಕ ಈ ನಟಿಯ ಜತೆ ನಾಗ ಚೈತನ್ಯ ಡೇಟಿಂಗ್!?

ಕಳೆದ ವರ್ಷ ಡಿಸೆಂಬರ್ 17 ರಂದು 'ಪುಷ್ಪ: ದಿ ರೈಸ್' ಚಿತ್ರ ಬಿಡುಗಡೆಯಾಯಿತು. ತಮಿಳು, ತೆಲುಗು, ಹಿಂದಿ, ಮಲಯಾಳಂ ಮತ್ತು ಕನ್ನಡ ಭಾಷೆಗಳಲ್ಲಿ ಚಿತ್ರ ಬಿಡುಗಡೆಯಾಯಿತು. ಈ ಸಿನಿಮಾದಲ್ಲಿ ಅಲ್ಲು ಅರ್ಜುನ್ 'ಪುಷ್ಪರಾಜ್' ಮತ್ತು ರಶ್ಮಿಕಾ ಮಂದಣ್ಣ 'ಶ್ರೀವಲ್ಲಿ' ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರ ಪ್ರೇಕ್ಷಕರಿಂದ ಅಪಾರ ಪ್ರೀತಿ ಗಳಿಸಿದೆ. ಚಿತ್ರದ ಹಿಂದಿ ಅವತರಣಿಕೆ ಬರೋಬ್ಬರಿ 110 ಕೋಟಿ ಗಳಿಸಿದೆ. ಅಂದಿನಿಂದ ಪ್ರೇಕ್ಷಕರು ಅದರ ಮುಂದಿನ ಭಾಗಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Read More