Home> Entertainment
Advertisement

Shivaji Surathkal-2: "IKEA"ದಲ್ಲಿ ಬಿಡುಗಡೆಯಾದ ‘ಶಿವಾಜಿ ಸುರತ್ಕಲ್ 2’ ಟೀಸರ್

2 ವರ್ಷಗಳ ಹಿಂದೆ ಬಿಡುಗಡೆಯಾದ ‘ಶಿವಾಜಿ ಸುರತ್ಕಲ್’ ಚಿತ್ರಕ್ಕೆ ಸಿಕ್ಕ ಪ್ರಶಂಸೆಯೇ ಭಾಗ 2 ಮಾಡಲು ಸ್ಪೂರ್ತಿ ಎಂದು ನಿರ್ದೇಶಕ ಆಕಾಶ್ ಶ್ರೀವತ್ಸ ಹೇಳಿದ್ದಾರೆ.

Shivaji Surathkal-2:

ಬೆಂಗಳೂರು: ಕನ್ನಡ ಚಿತ್ರರಂಗದ ಸ್ಫುರದ್ರೂಪಿ ಹಾಗೂ ಪ್ರತಿಭಾವಂತ ನಟ ರಮೇಶ್ ಅರವಿಂದ್ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ಸಂತಸದ ಸಂದರ್ಭದಲ್ಲಿ ಅವರು ನಾಯಕರಾಗಿ ನಟಿಸಿರುವ ‘ಶಿವಾಜಿ ಸುರತ್ಕಲ್ 2’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ತುಮಕೂರು ರಸ್ತೆಯ ನಾಗಸಂದ್ರದಲ್ಲಿರುವ ಅತೀದೊಡ್ಡ ಮಳಿಗೆ "IKEA"ದಲ್ಲಿ ಅಪಾರ ಅಭಿಮಾನಿಗಳ ಸಮ್ಮುಖದಲ್ಲಿ ಅದ್ದೂರಿಯಾಗಿ ಟೀಸರ್ ಬಿಡುಗಡೆ ಸಮಾರಂಭ ನಡೆಯಿತು.

‘2 ವರ್ಷಗಳ ಹಿಂದೆ ಅಂದರೆ 2020ರಲ್ಲಿ ಬಿಡುಗಡೆಯಾದ ‘ಶಿವಾಜಿ ಸುರತ್ಕಲ್’ ಚಿತ್ರಕ್ಕೆ ಸಿಕ್ಕ ಪ್ರಶಂಸೆಯೇ ಭಾಗ 2 ಮಾಡಲು ಸ್ಪೂರ್ತಿ. ‘ಥಿಯೇಟರ್‍ನಲ್ಲಿ ನಮ್ಮ ಚಿತ್ರ ಚೆನ್ನಾಗಿ ಓಡುತ್ತಿರುವ ಸಂದರ್ಭದಲ್ಲೇ ಕೊರೊನಾ ಲಾಕ್‍ಡೌನ್ ಆಯಿತು. ಆನಂತರದ ವಿಷಯ ಎಲ್ಲರಿಗೂ ಗೊತ್ತೇ ಇದೆ. ಆಮೇಲೆ ರಮೇಶ್ ಅರವಿಂದ್ ಅವರ ಜೊತೆಗೆ ಸಾಕಷ್ಟು ಚರ್ಚೆ ನಡೆಸಿದ ನಂತರ ‘ಶಿವಾಜಿ ಸುರತ್ಕಲ್-2’ ಚಿತ್ರಕ್ಕೆ ಚಾಲನೆ ದೊರೆಯಿತು. 2ನೇ ಭಾಗ ಮಾಡುವುದು ಅಷ್ಟು ಸುಲಭವಾಗಿರಲಿಲ್ಲ’ವೆಂದು ನಿರ್ದೇಶಕ ಆಕಾಶ್ ಶ್ರೀವತ್ಸ ಹೇಳಿದರು.

fallbacks

‘ಈಗ ಮೊದಲಿನ ಹಾಗಲ್ಲ. ಎಲ್ಲರ ಬಳಿ ಮೊಬೈಲ್ ಇರುವುದರಿಂದ ಸಣ್ಣಸಣ್ಣ ವಿಷಯಗಳನ್ನು ಪ್ರೇಕ್ಷಕರು ಗಮನಿಸುತ್ತಿರುತ್ತಾರೆ. ಈ ರೀತಿಯ ತಪ್ಪಾಗಿದೆ ಎಂದು ಆ ತಕ್ಷಣವೇ ಅವರು ತಿಳಿಸುತ್ತಾರೆ. ಇದನೆಲ್ಲಾ ಗಮನಿಸಿ ಚಿತ್ರ ಮಾಡುವ ಜವಾಬ್ದಾರಿ ನಿರ್ದೇಶಕನ ಮೇಲಿರುತ್ತದೆ. ‘ಶಿವಾಜಿ ಸುರತ್ಕಲ್-2’ ಕಥೆ ಸಹ ಚೆನ್ನಾಗಿದ್ದು, ಎಲ್ಲರಿಗೂ ಮೆಚ್ಚುಗೆಯಾಗಲಿದೆ. ರಮೇಶ್ ಅರವಿಂದ್ ಸರ್ ಹುಟ್ಟುಹಬ್ಬಕ್ಕೆ ಈ ಟೀಸರ್ ಬಿಡುಗಡೆ ಮಾಡಿದ್ದೀವಿ. ಇದು ನನ್ನೊಬ್ಬನ ಚಿತ್ರವಲ್ಲ. ತಂಡದ ಚಿತ್ರ’ ಎಂದು ಅವರು ಇದೇ ವೇಳೆ ಖುಷಿ ಹಂಚಿಕೊಂಡರು.

ಇದನ್ನೂ ಓದಿ: Swara Accused Shahrukh: 'ನನ್ನ ಜೀವನವನ್ನೇ ಹಾಳು ಮಾಡಿದ' ಶಾರುಕ್ ವಿರುದ್ಧ ಸ್ವರಾ ಭಾಸ್ಕರ್ ಗಂಭೀರ ಆರೋಪ!

‘ಶಿವಾಜಿ ಸುರತ್ಕಲ್’ಗೆ ಸಿಕ್ಕ ಗೆಲುವಿನಿಂದ ಭಾಗ 2 ಮಾಡಲು ನಿರ್ಧರಿಸಿದೇವು. ಅದರಲ್ಲೂ ರಮೇಶ್ ಅರವಿಂದ್ ಅವರ ಸಹಕಾರ ಅಪಾರ’ ಎಂದ ನಿರ್ಮಾಪಕ ಅನೂಪ್ ಗೌಡ ಇದೇ ವೇಳೆ ನಿರ್ದೇಶಕರು ಸೇರಿ ಎಲ್ಲಾ ತಂತ್ರಜ್ಞರಿಗೆ ಹಾಗೂ ಕಲಾವಿದರಿಗೆ  ಧನ್ಯವಾದ ತಿಳಿಸಿದರು.

‘ನನ್ನ ನಿಮ್ಮ ಸ್ನೇಹಕ್ಕೆ 3 ದಶಕಗಳಾಗಿದೆ. ಈ 30 ವರ್ಷಗಳಲ್ಲಿ ಸಾಕಷ್ಟು ಪಾತ್ರಗಳನ್ನು ಮಾಡಿದ್ದೇನೆ. ಆದರೆ ಒಂದೇ ಪಾತ್ರವನ್ನು 2ನೇ ಬಾರಿ ಮಾಡುತ್ತಿರುವುದು ‘ಶಿವಾಜಿ ಸುರತ್ಕಲ್- 2’ ಚಿತ್ರದಲ್ಲಿ ಮಾತ್ರ. ನನಗೆ ನಿರ್ದೇಶಕ ಆಕಾಶ್ ಶ್ರೀವತ್ಸ 15 ವರ್ಷಗಳಿಂದ ಪರಿಚಯ. ‘ಆಕ್ಸಿಡೆಂಟ್’ ಚಿತ್ರದಲ್ಲಿ ನನ್ನೊಟ್ಟಿಗೆ ಕೆಲಸವನ್ನೂ ಮಾಡಿದ್ದಾರೆ. ಅವರೊಬ್ಬ ಅದ್ಭುತ ನಿರ್ದೇಶಕ ಮತ್ತು ನಮ್ಮದು ಒಳ್ಳೆಯ ತಂಡ. ಈ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ’ ಎಂದು‌ ನಟ ರಮೇಶ್ ಅರವಿಂದ್ ಹೇಳಿದರು.

ನಟಿ ರಾಧಿಕಾ ನಾರಾಯಣ್ ಮಾತನಾಡಿ, ‘ನಾನು ಶಿವಾಜಿ ಸುರತ್ಕಲ್ ಚಿತ್ರದಲ್ಲಿ ರಮೇಶ್ ಸರ್ ಪತ್ನಿ ಪಾತ್ರದಲ್ಲಿ ಅಭಿನಯಿಸಿದ್ದೇನೆ. ಹಾಗಾಗಿ ನಿರ್ದೇಶಕ ಆಕಾಶ್ ಶ್ರೀವತ್ಸ ಅವರಿಗೆ ಭಾಗ 2, 3 ಹೀಗೆ ಮಾಡುತ್ತಿರಿ ಎಂದು ಸಲಹೆ ನೀಡಿದ್ದೆನೆ’ ಅಂತಾ ಹೇಳಿದರು.   

ಇದನ್ನೂ ಓದಿ: ತೆರೆಮೇಲೆ ‘ಮತ್ತೆ ಮಾಯಾಮೃಗ’: ಸಿರಿ ಕನ್ನಡದಲ್ಲಿ ಬರಲಿದೆ ಟಿ.ಎನ್.ಸೀತಾರಾಮ್ ಧಾರಾವಾಹಿ

‘ನನಗೆ ಕೊರೊನಾ ನಂತರ ಇದು ಮೊದಲ ಪತ್ರಿಕಾಗೋಷ್ಠಿ. ರಮೇಶ್ ಸರ್ ಜೊತೆ ಅಭಿನಯ ಮಾಡುವುದು ನನ್ನ ಬಹು ದಿನಗಳ ಕನಸು. ಅದು ಈಗ ಈಡೇರಿದೆ. ಚಿತ್ರದಲ್ಲಿ ಪೊಲೀಸ್ ಅಧಿಕಾರಿಯಾಗಿ ಅಭಿನಯಿಸಿದ್ದೇನೆ’ ಅಂತಾ ನಟಿ ಮೇಘನಾ ಗಾಂವ್ಕರ್ ಹೇಳಿದರು. ಇದೇ ಸಂದರ್ಭದಲ್ಲಿ ಚಿತ್ರತಂಡದಿಂದ ರಮೇಶ್ ಅರವಿಂದ್ ಅವರ ಹುಟ್ಟುಹಬ್ಬದ ಆಚರಣೆ ಸಹ ನಡೆಯಿತು.

ಅಂಜನಾದ್ರಿ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ರೇಖಾ ಕೆ.ಎನ್ ಹಾಗೂ ಅನೂಪ್ ಗೌಡ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಜ್ಯೂಡಾ ಸ್ಯಾಂಡಿ ಸಂಗೀತ ನೀಡಿದ್ದಾರೆ. ದರ್ಶನ್ - ಗುರುಪ್ರಸಾದ್ ಛಾಯಾಗ್ರಹಣ ಹಾಗೂ ಆಕಾಶ್ ಶ್ರೀವತ್ಸ ಸಂಕಲನ ಈ ಚಿತ್ರಕ್ಕಿದೆ. ರಮೇಶ್ ಅರವಿಂದ್, ರಾಧಿಕಾ ನಾರಾಯಣ್, ಮೇಘನಾ ಗಾಂವ್ಕರ್, ನಾಜರ್, ಆರಾಧ್ಯ, ರಮೇಶ್ ಭಟ್, ಶ್ರೀನಿವಾಸ್ ಪ್ರಭು, ಶೋಭ್ ರಾಜ್, ವಿದ್ಯಾಮೂರ್ತಿ, ವೀಣಾ ಸುಂದರ್, ರಘು ರಮಣಕೊಪ್ಪ, ಮಧುರ ಗೌಡ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Read More