Home> India
Advertisement

ಬಿಜೆಪಿ ನಾಯಕ ಮನೋಜ್ ತಿವಾರಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

ಉತ್ತರಾಖಂಡದ ಖಾತಿಮಾದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಪಾಲ್ಗೊಂಡು ಹಿಂತಿರುಗುತ್ತಿದ್ದ ಸಂದರ್ಭದಲ್ಲಿ ಮನೋಜ್ ತಿವಾರಿ ಅವರ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದ ಘಟನೆ ನಡೆದಿದೆ. 

ಬಿಜೆಪಿ ನಾಯಕ ಮನೋಜ್ ತಿವಾರಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

ಡೆಹರಾಡೂನ್: ಬಿಜೆಪಿ ನಾಯಕ ಮನೋಜ್ ತಿವಾರಿ ಅವರ ಹೆಲಿಕಾಪ್ಟರ್ ಪ್ರತಿಕೂಲ ಹವಾಮಾನದ ಹಿನ್ನೆಲೆಯಲ್ಲಿ ಉತ್ತರಾಖಂಡದ ಉದ್ಧಂಸಿಂಗ್ ನಗರ ಜಿಲ್ಲೆಯಲ್ಲಿ ಕಿಚ್ಚ ಪ್ರದೇಶದಲ್ಲಿ ಸೋಮವಾರ ತುರ್ತು ಭೂಸ್ಪರ್ಶ ಮಾಡಿದೆ. 

ಮೊದಲ ಹಂತದ ಲೋಕಸಭಾ ಚುನಾವಣೆ ಏಪ್ರಿಲ್ 11 ರಂದು ನಡೆಯಲಿರುವ ಹಿನ್ನೆಲೆಯಲ್ಲಿ ದೆಹಲಿ ಬಿಜೆಪಿ ರಾಜ್ಯ ಅಧ್ಯಕ್ಷ ಹಾಗೂ ಭೋಜ್ಪುರಿ ಗಾಯಕ ಮನೋಜ್ ತಿವಾರಿ, ಉತ್ತರಾಖಂಡದ ಖಾತಿಮಾದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಪಾಲ್ಗೊಂಡು ಹಿಂತಿರುಗುತ್ತಿದ್ದ ಸಂದರ್ಭದಲ್ಲಿ ಅವರ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದ ಘಟನೆ ನಡೆದಿದೆ. ಆದರೆ ಯಾರಿಗೂ ತೊಂದರೆಯಾಗಿಲ್ಲ.

ಬಿಜೆಪಿ ಸ್ಟಾರ್ ಪ್ರಚಾರಕರಾಗಿರುವ ಮನೋಜ್ ತಿವಾರಿ, ಇತ್ತೀಚೆಗೆ ಡಿಎನ್ಎ ಪತ್ರಿಕೆ ನಡೆಸಿದ ಸಂದರ್ಶನದಲ್ಲಿ ಮಾತನಾಡಿ ಇಡೀ ದೇಶದ ಪ್ರಗತಿಗೆ ಉತ್ತರ ಭಾರತದ ರಾಜ್ಯಗಳ ಅಭಿವೃದ್ಧಿ ಬಹಕ ಮುಖ್ಯ ಎಂದಿದ್ದರು. ಸದಾ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಆಮ್ ಆದ್ಮಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸುವ ತಿವಾರಿ, ಉತ್ತರಾಖಂಡದಲ್ಲಿ ಉತ್ತಮ ಜನ ಬೆಂಬಲವನ್ನೂ ಗಳಿಸಿದ್ದಾರೆ.

Read More