Home> India
Advertisement

'ದೇಶದಲ್ಲಿ ದ್ವೇಷ ಮತ್ತು ಕೋಪದ ವಾತಾವರಣವನ್ನು ಸೃಷ್ಟಿಸಲಾಗುತ್ತಿದೆ'

 ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ ಅವರು ದ್ವೇಷ ಮತ್ತು ಕೋಪದ ವಾತಾವರಣವನ್ನು ಸೃಷ್ಟಿಸುತ್ತಿದ್ದಾರೆ ಎಂದು ಆರೋಪಿಸಿದರು.

'ದೇಶದಲ್ಲಿ ದ್ವೇಷ ಮತ್ತು ಕೋಪದ ವಾತಾವರಣವನ್ನು ಸೃಷ್ಟಿಸಲಾಗುತ್ತಿದೆ'

ನವದೆಹಲಿ: ಬಿಜೆಪಿಯ ಮಾಜಿ ನಾಯಕಿ ನೂಪುರ್ ಶರ್ಮಾ ಮತ್ತು ದೇಶಾದ್ಯಂತ ಅವರ ಟೀಕೆಗಳ ಪ್ರಭಾವವನ್ನು ಸುಪ್ರೀಂಕೋರ್ಟ್ ಬಹಿರಂಗವಾಗಿ ಟೀಕಿಸಿದ ಕೆಲವೇ ಗಂಟೆಗಳ ನಂತರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ ಅವರು ದ್ವೇಷ ಮತ್ತು ಕೋಪದ ವಾತಾವರಣವನ್ನು ಸೃಷ್ಟಿಸುತ್ತಿದ್ದಾರೆ ಎಂದು ಆರೋಪಿಸಿದರು.

ಇದನ್ನೂ ಓದಿ : ಜುಲೈ 2 ರಂದು ವಿಕ್ರಾಂತ ರೋಣ ಚಿತ್ರದ 'ರಾಜಕುಮಾರಿ' ಲಿರಿಕಲ್ ಸಾಂಗ್ ಬಿಡುಗಡೆ

ಕೇಂದ್ರ ಸರ್ಕಾರ ಮತ್ತು ಬಿಜೆಪಿಯು ಇಡೀ ರಾಷ್ಟ್ರದ ಹಿತಾಸಕ್ತಿಗಳಿಗೆ ವಿರುದ್ಧವಾದ ವಾತಾವರಣವನ್ನು ಭಾರತದಲ್ಲಿ ನಿರ್ಮಿಸಿದೆ ಎಂದು ಹೇಳಿದರು.

ಪ್ರವಾದಿ ಮೊಹಮ್ಮದ್ ವಿರುದ್ಧ ವಿವಾದಾತ್ಮಕ ಹೇಳಿಕೆಗಾಗಿ ಅಮಾನತುಗೊಂಡ ಬಿಜೆಪಿ ನಾಯಕಿ ನೂಪುರ್ ಶರ್ಮಾ ವಿರುದ್ಧ ಸುಪ್ರೀಂಕೋರ್ಟ್ ಟೀಕೆಗಳ ಕುರಿತು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, ದೇಶದ ಪ್ರಸ್ತುತ ಸ್ಥಿತಿಯನ್ನು ನೂಪುರ್ ಶರ್ಮಾ ಸೃಷ್ಟಿಸಿಲ್ಲ, ಆದರೆ ಎನ್‌ಡಿಎ ಸರ್ಕಾರ ಮತ್ತು ಕೇಂದ್ರವು ಸೃಷ್ಟಿಸಿದೆ ಎಂದು ಹೇಳಿದರು.

ಇದನ್ನೂ ಓದಿ : Udaipur Murder Case : ISIS ನ ವಿಡಿಯೋ ನೋಡಿ ಕನ್ಹಯ್ಯಾ ಲಾಲ್ ಕೊಂದ ಪಾಪಿಗಳು!

ಅಂತಹ ವಾತಾವರಣವನ್ನು ಸೃಷ್ಟಿಸುವುದು ಭಾರತ ಮತ್ತು ಅದರ ಜನರ ಹಿತಾಸಕ್ತಿಗೆ ವಿರುದ್ಧವಾಗಿದೆ ಇದು ಸಂಪೂರ್ಣ ತಪ್ಪು ಮತ್ತು ಇದು ದುರಂತಕ್ಕೆ ಕಾರಣವಾಗಲಿದೆ ಎಂದು ಅವರು ಹೇಳಿದರು.

ಟಿವಿ ಚರ್ಚೆಯ ಸಂದರ್ಭದಲ್ಲಿ ಪ್ರವಾದಿ ಮೊಹಮ್ಮದ್ ಕುರಿತಾಗಿ ಮಾಡಿದ ಟೀಕೆಗಳಿಗಾಗಿ ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರನ್ನು ಸುಪ್ರೀಂಕೋರ್ಟ್ ತರಾಟೆಗೆ ತೆಗೆದುಕೊಂಡ ನಂತರ ರಾಹುಲ್ ಗಾಂಧಿ ಅವರ ಹೇಳಿಕೆ ಬಂದಿದೆ.

"ಅವರು ನಿಜವಾಗಿಯೂ ಸಡಿಲವಾದ ನಾಲಿಗೆಯನ್ನು ಹೊಂದಿದ್ದಾರೆ ಮತ್ತು ಟಿವಿಯಲ್ಲಿ ಎಲ್ಲಾ ರೀತಿಯ ಬೇಜವಾಬ್ದಾರಿ ಹೇಳಿಕೆಗಳನ್ನು ನೀಡುವ ಮೂಲಕ ಇಡೀ ದೇಶಕ್ಕೆ ಬೆಂಕಿ ಹಚ್ಚಿದ್ದಾರೆ, ಆದರೂ ಅವರು 10 ವರ್ಷಗಳ ವಕೀಲ ವೃತ್ತಿಯಲ್ಲಿರುವುದಾಗಿ ಹೇಳುತ್ತಾರೆ, ಇದಕ್ಕೆ ಅವರು ಕ್ಷಮೆಯಾಚಿಸಬೇಕು ಎಂದು ಕೋರ್ಟ್ ಹೇಳಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

Read More