Home> India
Advertisement

ಕುಡಿದ ಅಮಲಿನಲ್ಲಿ ಪಾರ್ಶ್ವವಾಯು ಪೀಡಿತ ಮಗನನ್ನು ಹೊಡೆದು ಕೊಂದ ತಂದೆ

Father kills paralysed son: ಹೆತ್ತತಂದೆಯೇ ಪಾರ್ಶ್ವವಾಯು ಪೀಡಿತ ಮಗನನ್ನು ಹೊಡೆದು ಕೊಲೆ ಮಾಡಿದ ಹೃದಯವಿದ್ರಾವಕ ಘಟನೆ ಜರುಗಿದೆ. 

ಕುಡಿದ ಅಮಲಿನಲ್ಲಿ ಪಾರ್ಶ್ವವಾಯು ಪೀಡಿತ ಮಗನನ್ನು ಹೊಡೆದು ಕೊಂದ ತಂದೆ

ನವದೆಹಲಿ: ಹೆತ್ತತಂದೆಯೇ ಪಾರ್ಶ್ವವಾಯು ಪೀಡಿತ ಮಗನನ್ನು ಹೊಡೆದು ಕೊಲೆ (Father kills paralysed son) ಮಾಡಿದ ಹೃದಯವಿದ್ರಾವಕ ಘಟನೆ ಜರುಗಿದೆ. 

ದೆಹಲಿಯ ಭಾರತ್ ನಗರ ಪ್ರದೇಶದಲ್ಲಿ ಪಾರ್ಶ್ವವಾಯು ಪೀಡಿತ ಮಗನನ್ನು ಕೊಲೆ ಮಾಡಿದ ಆರೋಪದ ನಂತರ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ದೆಹಲಿ ಪೊಲೀಸರ (Delhi police) ಪ್ರಕಾರ, ಭಾನುವಾರ ಮಧ್ಯಾಹ್ನ 1.24 ಕ್ಕೆ ದೀಪ್ ಚಂದ್ ಬಂಧು ಆಸ್ಪತ್ರೆಗೆ ಪರಮ್‌ಜೀತ್ ಎಂಬ ರೋಗಿಯನ್ನು ಪ್ರಜ್ಞಾಹೀನ ಸ್ಥಿತಿಯಲ್ಲಿ ಕರೆತಂದಿದ್ದಾರೆ. ವ್ಯಕ್ತಿಯನ್ನು ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ಹೇಳಿದರು. ಮೃತರ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮತ್ತೊಂದು ಆಸ್ಪತ್ರೆಗೆ ರವಾನಿಸಲಾಗಿದೆ.

ಪೊಲೀಸರ ಪ್ರಕಾರ, ಮೃತರ ಸಹೋದರಿ ರೇಖಾ ತಮ್ಮ ಮನೆಗೆ ಬಂದಾಗ ಅವರ ಸಹೋದರ ಪರಮ್‌ಜೀತ್ ಹಾಸಿಗೆಯ ಮೇಲೆ ಮಲಗಿದ್ದರು ಮತ್ತು ಗಾಯಗೊಂಡಿದ್ದರು.

"ತಂದೆ ಕುಡಿದ ಅಮಲಿನಲ್ಲಿ ಬಂದು ಮರದ ಕೋಲಿನಿಂದ ಹೊಡೆದಿದ್ದಾರೆ. ಈ ವೇಳೆ ತೀವ್ರವಾಗಿ ಗಾಯಗೊಂಡ ಪರಮ್‌ಜೀತ್ ಮೃತಪಟ್ಟಿದ್ದಾರೆ. ಪರಮ್‌ಜೀತ್ ಕಳೆದ 14 ವರ್ಷಗಳಿಂದ ಪಾರ್ಶ್ವವಾಯುವಿಗೆ ಒಳಗಾಗಿದ್ದು, ಹಾಸಿಗೆ ಹಿಡಿದಿದ್ದರು" ಎಂದು ರೇಖಾ ಹೇಳಿದ್ದಾರೆ.

ಆರೋಪಿಯನ್ನು ಅಜ್ಮೀರ್ ಸಿಂಗ್ ಎಂದು ಗುರುತಿಸಲಾಗಿದ್ದು, ಅವರನ್ನು ಬಂದಿಸಲಾಗಿದೆ. ಪೊಲೀಸರು ಐಪಿಸಿ ಸೆಕ್ಷನ್ 302 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.  

ಇದನ್ನೂ ಓದಿ: Viral video:ಬೆಂಗಳೂರಿನಲ್ಲಿ ಅಂಗವಿಕಲನಂತೆ ವೇಷ ಧರಿಸಿ ಭಿಕ್ಷಾಟನೆ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ. 

Read More