Home> India
Advertisement

ಮಾಜಿ ಕೇಂದ್ರ ಸಚಿವ ಜಸ್ವಂತ್ ಸಿಂಗ್ ನಿಧನ, ಶೋಕ ವ್ಯಕ್ತಪಡಿಸಿದ PM Narendra Modi

ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಸಚಿವರಾಗಿದ್ದ ಜಸ್ವಂತ್ ಸಿಂಗ್ ನಿಧನರಾಗಿದ್ದಾರೆ.  

ಮಾಜಿ ಕೇಂದ್ರ ಸಚಿವ ಜಸ್ವಂತ್ ಸಿಂಗ್ ನಿಧನ, ಶೋಕ ವ್ಯಕ್ತಪಡಿಸಿದ PM Narendra Modi

ನವದೆಹಲಿ: ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಸಚಿವರಾಗಿದ್ದ ಜಸ್ವಂತ್ ಸಿಂಗ್ ನಿಧನರಾಗಿದ್ದಾರೆ.  ದೀರ್ಘಕಾಲದಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು.  ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ.

ಇದನ್ನು ಓದಿ- ಕೇಂದ್ರ ರಾಜ್ಯ ಖಾತೆ ರೈಲ್ವೆ ಸಚಿವ ಸುರೇಶ್ ಅಂಗಡಿ ಇನ್ನಿಲ್ಲ

ಪ್ರಧಾನಿ ನರೇಂದ್ರ ಮೋದಿ ತಮ್ಮ ಟ್ವೀಟ್‌ನಲ್ಲಿ, 'ಜಸ್ವಂತ್ ಸಿಂಗ್ ಜಿ ಮೊದಲು ಸೈನಿಕನಾಗಿ ಮತ್ತು ನಂತರ ರಾಜಕೀಯದೊಂದಿಗಿನ ಸುದೀರ್ಘ ಒಡನಾಟದ ಮೂಲಕ ದೇಶಕ್ಕೆ ಶ್ರದ್ಧೆಯಿಂದ ಸೇವೆ ಸಲ್ಲಿಸಿದ್ದಾರೆ. ಅಟಲ್ ಜಿ ಅವರ ಸರ್ಕಾರದ ಅವಧಿಯಲ್ಲಿ, ಅವರು ಪ್ರಮುಖ ಖಾತೆಗಳನ್ನು ಹೊಂದಿದ್ದರು ಮತ್ತು ಹಣಕಾಸು, ರಕ್ಷಣಾ ಮತ್ತು ವಿದೇಶಾಂಗ ವಿಭಾಗದಲ್ಲಿ ಅವರು ಬಲವಾದ ಛಾಪು ಮೂಡಿಸಿದ್ದರು. ಅವರ ನಿಧನ ತುಂಬಾ ದುಃಖ ತಂದಿದೆ" ಎಂದು ಸಂತಾಪ ಸೂಚಿಸಿದ್ದಾರೆ.

"ಜಸ್ವಂತ್ ಸಿಂಗ್ ಜಿ ಅವರು ರಾಜಕೀಯ ಮತ್ತು ಸಮಾಜದ ವಿಷಯಗಳ ಬಗ್ಗೆ ವಿಶಿಷ್ಟ ದೃಷ್ಟಿಕೋನ ಹೊಂದಿದ್ದರು. ಬಿಜೆಪಿ ಪಕ್ಷ ಬಲವರ್ಧನೆಗೆ ಅವರು ಸಾಕಷ್ಟು ಶ್ರಮಿಸಿದ್ದರು. ಅವರೊಂದಿಗಿನ ನನ್ನ ಸಂಭಾಷಣೆ ಅವಿಸ್ಮರಣೀಯ. ಅವರ ಕುಟುಂಬ ಮತ್ತು ಬೆಂಬಲಿಗರಿಗೆ ದೇವರು ದುಃಖ ಭರಿಸುವ ಶಕ್ತಿ ದಯಪಾಲಿಸಲಿ ಓಂ ಶಾಂತಿ. " ಎಂದು ಪ್ರಧಾನಿ ಹೇಳಿದ್ದಾರೆ.

ಇನ್ನೊಂದೆಡೆ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, "ಹಿರಿಯ ಬಿಜೆಪಿ ಮುಖಂಡ ಮತ್ತು ಮಾಜಿ ಸಚಿವ ಶ್ರೀ ಜಸ್ವಂತ್ ಸಿಂಗ್ ಅವರ ನಿಧನದಿಂದ ಇದು ತುಂಬಾ ದುಃಖಿತವಾಗಿದೆ. ಅವರು ರಕ್ಷಣಾ ಸಚಿವಾಲಯದ ಉಸ್ತುವಾರಿ ಸೇರಿದಂತೆ ಅನೇಕ ಸಾಮರ್ಥ್ಯಗಳಲ್ಲಿ ದೇಶಕ್ಕೆ ಸೇವೆ ಸಲ್ಲಿಸಿದ್ದರು. ಅವರೊಬ್ಬ ಪ್ರಭಾವಿ  ಸಚಿವರು ಮತ್ತು ಸಂಸದರು ಎಂದು ಗುರುತಿಸಿಕೊಂಡಿದ್ದರು. ಜಸ್ವಂತ್ ಸಿಂಗ್ ಜಿ ಅವರ ಬೌದ್ಧಿಕ ಸಾಮರ್ಥ್ಯ ಮತ್ತು ದೇಶಕ್ಕೆ ಮಾಡಿದ ಸೇವೆಯಲ್ಲಿನ ನಾಕ್ಷತ್ರಿಕ ದಾಖಲೆಗಳಿಗಾಗಿ ಅವರನ್ನು ಸ್ಮರಿಸಲಾಗುವುದು. ರಾಜಸ್ಥಾನದಲ್ಲಿ ಬಿಜೆಪಿಯನ್ನು ಬಲಪಡಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ದುಃಖದ ಈ ಸಂದರ್ಭದಲ್ಲಿ ಅವರ ಕುಟುಂಬ ಮತ್ತು ಬೆಂಬಲಿಗರ ಪ್ರತಿ ನನ್ನ ಸಂತಾಪ ಓಂ  ಶಾಂತಿ." ಎಂದು ಹೇಳಿದ್ದಾರೆ.

Read More