Home> India
Advertisement

ಪ. ಬಂಗಾಳದ ಮಾಜಿ ಸಿಎಂ ಬುದ್ಧದೇವ್ ಭಟ್ಟಾಚಾರ್ಯ ಆಸ್ಪತ್ರೆಗೆ ದಾಖಲು

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇಬ್ ಭಟ್ಟಾಚಾರ್ಜಿಯವರ ಉಸಿರಾಟದ ಸಂಬಂಧಿತ ಸಮಸ್ಯೆಗಳು ಉಲ್ಬಣಗೊಂಡಿದ್ದರಿಂದ ಅವರನ್ನು ಬುಧವಾರ ಮಧ್ಯಾಹ್ನ ಕೋಲ್ಕತ್ತಾದಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಪ. ಬಂಗಾಳದ ಮಾಜಿ ಸಿಎಂ ಬುದ್ಧದೇವ್ ಭಟ್ಟಾಚಾರ್ಯ ಆಸ್ಪತ್ರೆಗೆ ದಾಖಲು

ನವದೆಹಲಿ: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇಬ್ ಭಟ್ಟಾಚಾರ್ಜಿಯವರ ಉಸಿರಾಟದ ಸಂಬಂಧಿತ ಸಮಸ್ಯೆಗಳು ಉಲ್ಬಣಗೊಂಡಿದ್ದರಿಂದ ಅವರನ್ನು ಬುಧವಾರ ಮಧ್ಯಾಹ್ನ ಕೋಲ್ಕತ್ತಾದಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಈಗ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅವರ ಆರೋಗ್ಯದ ಉಸ್ತುವಾರಿ ವಹಿಸಿಕೊಂಡಿರುವ ವೈದ್ಯರು ಹೇಳಿದ್ದಾರೆ."ನಾವು ಅವರಿಗೆ ಚಿಕಿತ್ಸೆ ನೀಡುತ್ತಿದ್ದೇವೆ. ನಮ್ಮ ಫ್ಲೂ ಕ್ಲಿನಿಕ್‌ನಲ್ಲಿ ಅಗತ್ಯ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ, ಅದರ ನಂತರ ಅವರು ಆಸ್ಪತ್ರೆಗೆ ದಾಖಲಾಗಬೇಕೇ ಎಂದು ನಾವು ನಿರ್ಧರಿಸುತ್ತೇವೆ" ಎಂದು ಖಾಸಗಿ ಆಸ್ಪತ್ರೆಯ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದ ಮಾಜಿ ಸಿಎಂ ಬುದ್ದದೇಬ್ ಭಟ್ಟಾಚಾರ್ಯ ಆಸ್ಪತ್ರೆಗೆ ದಾಖಲು

ಇನ್ನೊಂದೆಡೆಗೆ ಬುದ್ದದೇವ್ ಭಟ್ಟಾಚಾರ್ಯ ಅವರು ಆಸ್ಪತ್ರೆಗೆ ದಾಖಲಾಗಿರುವುದಕ್ಕೆ ಕಳವಳ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜೀ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.

ಬುದ್ಧದೇವ್ ಭಟ್ಟಾಚಾರ್ಯ ಅವರು ಸ್ವಲ್ಪ ಸಮಯದಿಂದ ಉಸಿರಾಟದ ತೊಂದರೆ ಮತ್ತು ವೃದ್ಧಾಪ್ಯ ಸಂಬಂಧಿತ ಕಾಯಿಲೆಗಳಿಂದ ಬಳಲುತ್ತಿದ್ದಾರೆ.ಕಳೆದ ವರ್ಷವೂ ಸಹ, ಉಸಿರಾಟದ ತೊಂದರೆಗಳ ಬಗ್ಗೆ ದೂರು ನೀಡಿದ ನಂತರ ಅವರನ್ನು ಕೋಲ್ಕತ್ತಾದ ಆಸ್ಪತ್ರೆಗೆ ಕರೆದೊಯ್ಯಲಾಯಿತು ಮತ್ತು ಅವರ ರಕ್ತದೊತ್ತಡ ತೀವ್ರವಾಗಿ ಕುಸಿಯಿತು. ವಯಸ್ಸಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಅವರ ಚಿಕಿತ್ಸೆಯು ಮನೆಯಲ್ಲಿಯೇ ಮುಂದುವರೆದಿದೆ.ಇತ್ತೀಚೆಗೆ, ರಾಜ್ಯಪಾಲ ಜಗದೀಪ್ ಧಂಕರ್ ಅವರು ಶ್ರೀ ಭಟ್ಟಾಚಾರ್ಯರನ್ನು ಭೇಟಿ ಮಾಡಿ ಅವರ ಯೋಗಕ್ಷೇಮವನ್ನು ವಿಚಾರಿಸಿದರು.

ಬುದ್ಧದೇಬ್ ಭಟ್ಟಾಚಾರ್ಜಿ ಅವರು 2000 ರಿಂದ ಆರಂಭಗೊಂಡು ಎರಡು ಅವಧಿಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದರು. ಅವರು ಸಿಪಿಐ (ಎಂ) ನ ಪೊಲಿಟ್‌ಬ್ಯುರೊ, ಕೇಂದ್ರ ಸಮಿತಿ ಮತ್ತು ರಾಜ್ಯ ಕಾರ್ಯದರ್ಶಿಯಿಂದ 2018 ರಲ್ಲಿ ಸ್ಥಾನದಿಂದ ಕೆಳಗಿಳಿದಿದ್ದರು.

Read More