Home> India
Advertisement

ಗೋಡ್ಸೆ ಗಾಂಧೀಜಿಯನ್ನು ಕೊಂದ, ಆದರೆ ಆಧುನಿಕ ಗೋಡ್ಸೆಗಳು ಭಾರತವನ್ನು ನಿತ್ಯ ಕೊಲ್ಲುತ್ತಿದ್ದಾರೆ: ಓವೈಸಿ

ಎಐಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಒವೈಸಿ, ಗಾಂಧಿಯನ್ನು ಕೊಂದ ಗೋಡ್ಸೆಯಂತಹ ಇಂದಿನ ಹಂತಕರು ಭಾರತವನ್ನೇ ಕೊಲ್ಲುತ್ತಿದ್ದಾರೆ ಎಂದು ಹೇಳಿದ್ದಾರೆ. 

ಗೋಡ್ಸೆ ಗಾಂಧೀಜಿಯನ್ನು ಕೊಂದ, ಆದರೆ ಆಧುನಿಕ ಗೋಡ್ಸೆಗಳು ಭಾರತವನ್ನು ನಿತ್ಯ ಕೊಲ್ಲುತ್ತಿದ್ದಾರೆ: ಓವೈಸಿ

ಔರಂಗಾಬಾದ್: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ಮೇಲೆ ಮತ್ತೊಮ್ಮೆ ದಾಳಿ ನಡೆಸಿರುವ ಎಐಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಒವೈಸಿ, ಗಾಂಧಿಯನ್ನು ಕೊಂದ ಗೋಡ್ಸೆಯಂತಹ ಇಂದಿನ ಹಂತಕರು ಭಾರತವನ್ನೇ ಕೊಲ್ಲುತ್ತಿದ್ದಾರೆ ಎಂದು ಹೇಳಿದ್ದಾರೆ. 

ಅಕ್ಟೋಬರ್ 21 ರಂದು ಮಹಾರಾಷ್ಟ್ರದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಬುಧವಾರ ಮಾತನಾಡಿದ ಅವರು, ದೇಶದ ಪ್ರಧಾನಿ ಮೋದಿ ಅವರು ಗೋಡ್ಸೆಯನ್ನು ತಮ್ಮ ನಾಯಕ ಎಂದು ಪರಿಗಣಿಸುತ್ತಾರೆ. ಗಾಂಧೀಜಿ ಬಗ್ಗೆ ಮಾತನಾಡುತ್ತಾರೆಯೇ ಹೊರತು ಮನಸ್ಸಿನಲ್ಲಿ ನಾಥೂರಾಮ್ ಗೋಡ್ಸೆಯಂತಹ ಆಲೋಚನೆಗಳೇ ತುಂಬಿವೆ. ಬಿಜೆಪಿ ಗಾಂಧೀಜಿ ಹೆಸರಿನಲ್ಲಿ ದೇಶವನ್ನೇ ಮರಳುಮಾಡುತ್ತಿದೆ" ಎಂದು ವಾಗ್ದಾಳಿ ನಡೆಸಿದರು. 

ಇದೇ ವೇಳೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದ ಓವೈಸಿ, ಮೋದಿ ಹಾಗೂ ಗೃಹ ಸಚಿವರು ಭಾರತದಲ್ಲೆಡೆ ಎನ್ಆರ್'ಸಿ ಮಾಡುತ್ತೇವೆಂದು ಹೇಳುತ್ತಿದ್ದಾರೆ. ಭಾರತದಲ್ಲಿ ಸಂವಿಧಾನವಿದೆ ಎಂಬುದನ್ನು ಅವರು ಮರೆತಿದ್ದಾರೆ ಎಂದು ಹೇಳಿದ್ದಾರೆ. 

Read More