Home> India
Advertisement

ಮೋದಿ ನೇತೃತ್ವದ ಭಗೀರಥ ಕಾರ್ಯದಲ್ಲಿ ಯೋಧನಾಗಿ ಕೆಲಸ ಮಾಡುವೆ: ಹಾರ್ದಿಕ್‌ ಪಟೇಲ್‌

Hardik Patel: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ರಾಷ್ಟ್ರ ಸೇವೆಯಲ್ಲಿನ ಬೃಹತ್ ಕಾರ್ಯದಲ್ಲಿ ನಾನು ಸಣ್ಣ ಸೈನಿಕನಾಗಿ ಕೆಲಸ ಮಾಡುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಮೋದಿ ನೇತೃತ್ವದ ಭಗೀರಥ ಕಾರ್ಯದಲ್ಲಿ ಯೋಧನಾಗಿ ಕೆಲಸ ಮಾಡುವೆ: ಹಾರ್ದಿಕ್‌ ಪಟೇಲ್‌

ನವದೆಹಲಿ: ಕಳೆದ ವಾರ ಕಾಂಗ್ರೆಸ್ ತೊರೆದಿದ್ದ ಹಾರ್ದಿಕ್ ಪಟೇಲ್ ಅವರು ಇಂದು ಬೆಳಗ್ಗೆ ಟ್ವೀಟ್ ಮಾಡಿದ್ದು, ನಾನು "ಹೊಸ ಅಧ್ಯಾಯವನ್ನು ಪ್ರಾರಂಭಿಸಲಿದ್ದೇನೆ" ಮತ್ತು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ "ಸಣ್ಣ ಸೈನಿಕ" ಆಗಿ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅತ್ಯುತ್ತಮ ಇಂಜಿನಿಯರ್ ಒಸಾಮಾ ಬಿನ್ ಲಾಡೆನ್ ಎಂದು ಕಚೇರಿಯಲ್ಲಿ ಬರೆದುಕೊಂಡಿದ್ದ ನೌಕರ ಸಸ್ಪೆಂಡ್

ರಾಷ್ಟ್ರಹಿತ, ಪ್ರಾದೇಶಿಕ ಹಿತ, ಜನರ ಹಿತ ಹಾಗೂ ಸಮಾಜದ ಹಿತ ದೃಷ್ಟಿಯಿಂದ ಹೊಸ ಅಧ್ಯಾಯವನ್ನು ಪ್ರಾರಂಭಿಸುತ್ತಿದ್ದೇನೆ. ಭಾರತದ ಯಶಸ್ವಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಚಾಲ್ತಿಯಲ್ಲಿರುವ ರಾಷ್ಟ್ರ ಸೇವೆಯ ಭಗೀರಥ ಕಾರ್ಯದಲ್ಲಿ ಸಣ್ಣ ಯೋಧನಾಗಿ ಕೆಲಸ ನಿರ್ವಹಿಸುತ್ತೇನೆ ಎಂದು ಹಾರ್ದಿಕ್‌ ಪಟೇಲ್‌ ಟ್ವೀಟ್‌ ಮಾಡಿದ್ದಾರೆ.

 

 

ಮೀಸಲಾತಿಗಾಗಿ ಪಾಟಿದಾರ್ ಸಮುದಾಯದ ಆಂದೋಲನದ ನೇತೃತ್ವದ ನಂತರ ರಾಜಕೀಯ ರಂಗಕ್ಕೆ ಬಂದ ಹಾರ್ದಿಕ್ ಪಟೇಲ್, 2019 ರಲ್ಲಿ ಕಾಂಗ್ರೆಸ್ ಸೇರಿದರು. ಕಳೆದ ತಿಂಗಳು ರಾಜೀನಾಮೆ ನೀಡಿದರು.

ಇದನ್ನೂ ಓದಿ: ಬಿಹಾರದಲ್ಲಿ ಜಾತಿ ಆಧಾರಿತ ಎಣಿಕೆಗೆ ಚಾಲನೆ ನೀಡಲು ಮುಂದಾದ ನಿತೀಶ್ ಕುಮಾರ್

ಕಾಂಗ್ರೆಸ್‌ ಪಕ್ಷದ ಗುಜರಾತ್ ಘಟಕದ ಮಾಜಿ ಕಾರ್ಯಾಧ್ಯಕ್ಷ ಹಾಗೂ ಪಾಟೀದಾರ್ ಮೀಸಲಾತಿ ಆಂದೋಲನದ ನಾಯಕ ಹಾರ್ದಿಕ್ ಪಟೇಲ್ ಬಿಜೆಪಿ ಇದೀಗ ಬಿಜೆಪಿ ಸೇರಿದ್ದಾರೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Read More