ನವದೆಹಲಿ: ಕರ್ನಾಟಕ ರಾಜಕೀಯ ಬಿಕ್ಕಟ್ಟು ರಾಜ್ಯಸಭೆಯಲ್ಲೂ ಪ್ರತಿಧ್ವನಿಸಿದೆ.
ಕರ್ನಾಟಕ ರಾಜಕೀಯ ಬಿಕ್ಕಟ್ಟಿನ ಕುರಿತು ಚರ್ಚಿಸಲು ನಿಯಮ 267ರ ಅಡಿಯಲ್ಲಿ ಅನುಮತಿ ನೀಡಬೇಕು ಎಂದು ಕಾಂಗ್ರೆಸ್ ನಾಯಕರು ಮಂಗಳವಾರ ರಾಜ್ಯಸಭೆಯಲ್ಲಿ ಆಗ್ರಹಿಸಿದ್ದರು.
ಈ ವೇಳೆ ಮಧ್ಯಪ್ರವೆಸಿದ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ, ಕರ್ನಾಟಕದಲ್ಲಿ ಅಸ್ತಿತ್ವದಲ್ಲಿರುವ ಕಾಂಗ್ರೆಸ್-ಜೆಡಿಎಸ್ ಸರ್ಕಾರದ ಮೇಲೆ ಸ್ವಪಕ್ಷೀಯರಿಗೆ ನಂಬಿಕೆ ಇಲ್ಲ. ಅದಕ್ಕಾಗಿ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಜೆಪಿಯಿಂದ ಯಾವುದೇ ಆಪರೇಷನ್ ಕಮಲ ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು.