Home> India
Advertisement

ಆರ್ಥಿಕ ಕುಸಿತ: ಕೇಂದ್ರದ ವಿರುದ್ಧ ಎಡಪಕ್ಷಗಳಿಂದ ರಾಷ್ಟ್ರವ್ಯಾಪಿ ಆಂದೋಲನ

ಸಾರ್ವಜನಿಕ ವಲಯದ ಖಾಸಗೀಕರಣದ ತಡೆ ಮತ್ತು ಕನಿಷ್ಠ ಮಾಸಿಕ ವೃದ್ಧಾಪ್ಯ ಮತ್ತು ವಿಧವಾ ಪಿಂಚಣಿಯನ್ನು 3,000 ರೂ.ಗಳಿಗೆ ಹೆಚ್ಚಿಸುವುದು, ನೌಕರರ ಕನಿಷ್ಠ ವೇತನವನ್ನು ತಿಂಗಳಿಗೆ 21,000 ರೂ. ನಿಗದಿಪಡಿಸುವುದು ಸೇರಿದಂತೆ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಕ್ಟೋಬರ್ 10 ರಿಂದ 16 ರವರೆಗೆ ಪ್ರತಿಭಟನೆ ನಡೆಸಲು ಎಡಪಕ್ಷಗಳು ನಿರ್ಧರಿಸಿವೆ.
 

ಆರ್ಥಿಕ ಕುಸಿತ: ಕೇಂದ್ರದ ವಿರುದ್ಧ ಎಡಪಕ್ಷಗಳಿಂದ ರಾಷ್ಟ್ರವ್ಯಾಪಿ ಆಂದೋಲನ

ನವದೆಹಲಿ: ಪ್ರಸ್ತುತ ಆರ್ಥಿಕ ಕುಸಿತದ ಬಗ್ಗೆ ಎಡ ಪಕ್ಷಗಳು ನರೇಂದ್ರ ಮೋದಿ ಸರ್ಕಾರದ ವಿರುದ್ಧ ಗುರುವಾರದಿಂದ ರಾಷ್ಟ್ರವ್ಯಾಪಿ ಆಂದೋಲನ ನಡೆಸಲಿವೆ.

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರು ಪಕ್ಷದ ಎಲ್ಲಾ ಘಟಕಗಳಿಗೆ ಭಾರತೀಯ ಆರ್ಥಿಕತೆಯ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಎಲ್ಲಾ ಎಡ ಪಕ್ಷಗಳು ದೇಶಾದ್ಯಂತ ಪ್ರತಿಭಟನೆ ನಡೆಸಲು ಸಮಾಜದ ದೊಡ್ಡ ವರ್ಗಗಳನ್ನು ಸಜ್ಜುಗೊಳಿಸಲು ಕರೆ ನೀಡಿದ್ದಾರೆ.

"ದೇಶದಲ್ಲಿ ಆರ್ಥಿಕತೆ ಕುಸಿತವಾಗಿದ್ದು, ಅಕ್ಟೋಬರ್ 10 ರಿಂದ 16ರವರೆಗೆ ಅಖಿಲ ಭಾರತ ಪ್ರತಿಭಟನೆಗಾಗಿ ಎಡಪಕ್ಷಗಳು ನೀಡಿದ ಕರೆಗೆ ಪ್ರತಿಕ್ರಿಯೆಯಾಗಿ ನಮ್ಮ ನಿರ್ದಿಷ್ಟ ಸಮಿತಿಯು ತನ್ನ ದೊಡ್ಡ ಘಟಕಗಳನ್ನು ಒಟ್ಟುಗೂಡಿಸಲು ತನ್ನ ಎಲ್ಲಾ ಘಟಕಗಳಿಗೆ ಕರೆ ನೀಡಿದೆ" ಎಂದು ಯೆಚೂರಿ ಟ್ವೀಟ್ ಮಾಡಿದ್ದಾರೆ.

ಸಾರ್ವಜನಿಕ ವಲಯದ ಖಾಸಗೀಕರಣದ ತಡೆ ಮತ್ತು ಕನಿಷ್ಠ ಮಾಸಿಕ ವೃದ್ಧಾಪ್ಯ ಮತ್ತು ವಿಧವಾ ಪಿಂಚಣಿಯನ್ನು 3,000 ರೂ.ಗಳಿಗೆ ಹೆಚ್ಚಿಸುವುದು, ನೌಕರರ ಕನಿಷ್ಠ ವೇತನವನ್ನು ತಿಂಗಳಿಗೆ 21,000 ರೂ. ನಿಗದಿಪಡಿಸುವುದು ಸೇರಿದಂತೆ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಕ್ಟೋಬರ್ 10 ರಿಂದ 16 ರವರೆಗೆ ಪ್ರತಿಭಟನೆ ನಡೆಸಲು ಎಡಪಕ್ಷಗಳು ನಿರ್ಧರಿಸಿವೆ.

Read More