Home> India
Advertisement

ಮಹಾರಾಷ್ಟ್ರ: ಕಂಕಾವಳಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ನಾರಾಯಣ್ ರಾಣೆ ಪುತ್ರ ನಿತೇಶ್ ಸ್ಪರ್ಧೆ

ಮುಂಬೈನಲ್ಲಿ ನಾರಾಯಣ್ ರಾಣೆ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ನಡುವೆ ಮಂಗಳವಾರ ತಡರಾತ್ರಿ ನಡೆದ ಸಭೆಯಲ್ಲಿ ನಿತೇಶ್ ಅವರನ್ನು ಕಣಕ್ಕಿಳಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಮಹಾರಾಷ್ಟ್ರ: ಕಂಕಾವಳಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ನಾರಾಯಣ್ ರಾಣೆ ಪುತ್ರ ನಿತೇಶ್ ಸ್ಪರ್ಧೆ

ಮುಂಬೈ: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ನಾರಾಯಣ್ ರಾಣೆ ಅವರ ಪುತ್ರ ನಿತೇಶ್ ಅವರು ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಕಂಕಾವಳಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

ಮೂಲಗಳ ಪ್ರಕಾರ, ಬಿಜೆಪಿ ತನ್ನ ಮಿತ್ರ ಶಿವಸೇನೆಯ ತೀವ್ರ ಪ್ರತಿರೋಧದ ನಡುವೆಯೂ ನಿತೇಶ್ ಅವರನ್ನು ಕಂಕವಳಿ ಸ್ಥಾನದಿಂದ ಕಣಕ್ಕಿಳಿಸಲು ನಿರ್ಧರಿಸಿದೆ ಎನ್ನಲಾಗಿದೆ.

ಬಿಜೆಪಿಯ ಸದಸ್ಯತ್ವವನ್ನು ಸಹ ಹೊಂದಿರದ ನಿತೇಶ್ ಅವರಿಗೆ ಎಬಿ ಫಾರ್ಮ್ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಇದು ಅಭ್ಯರ್ಥಿಯನ್ನು ತನ್ನ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಲು ಅಧಿಕಾರ ನೀಡುತ್ತದೆ.

ಮುಂಬೈನಲ್ಲಿ ನಾರಾಯಣ್ ರಾಣೆ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ನಡುವೆ ಮಂಗಳವಾರ ತಡರಾತ್ರಿ ನಡೆದ ಸಭೆಯಲ್ಲಿ ನಿತೇಶ್ ಅವರನ್ನು ಕಣಕ್ಕಿಳಿಸುವ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಬಿಜೆಪಿ ರಾಜ್ಯಸಭಾ ಸಂಸದ ನಾರಾಯಣ್ ರಾಣೆ ಅವರ ಪುತ್ರ ಕೂಡ ಶೀಘ್ರದಲ್ಲೇ ಪಕ್ಷಕ್ಕೆ ಸೇರ್ಪಡೆಯಾಗುವ ಸಾಧ್ಯತೆ ಇದೆ.

ಚುನಾವಣಾ ಆಯೋಗದ ಅಧಿಸೂಚನೆಯಂತೆ ನಾಮಪತ್ರ ಸಲ್ಲಿಸಲು ಅಕ್ಟೋಬರ್ 4 ಕಡೆಯ ದಿನವಾಗಿದ್ದು, ಅಕ್ಟೋಬರ್ 5 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಅಕ್ಟೋಬರ್ 7 ಕಡೆಯ ದಿನವಾಗಿದೆ. ಮಹಾರಾಷ್ಟ್ರದಲ್ಲಿ ವಿಧಾನಸಭಾ ಚುನಾವಣೆ ಅಕ್ಟೋಬರ್ 21 ರಂದು ನಡೆಯಲಿದ್ದು, ಅಕ್ಟೋಬರ್ 24 ರಂದು ಮತ ಎಣಿಕೆ ನಡೆಯಲಿದೆ.
 

Read More