Home> India
Advertisement

ರಾಹುಲ್ ಗಾಂಧಿ ನವಯುಗದ 'ರಾವಣ'!; ಪೋಸ್ಟರ್ ಹಂಚಿಕೊಂಡು ಬಿಜೆಪಿ ಟೀಕೆ

ರಾಹುಲ್ ಗಾಂಧಿಯವರನ್ನು ರಾವಣನ ರೀತಿ ಚಿತ್ರಿಸಿ ಟೀಕಿಸಿರುವ ಬಿಜೆಪಿ ವಿರುದ್ಧ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸಿ.ವೇಣುಗೋಪಾಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ರಾಹುಲ್ ಗಾಂಧಿಯವರನ್ನು ಬಿಜೆಪಿ ರಾವಣನಿಗೆ ಹೋಲಿಸಿದ ನಾಚಿಕೆಗೇಡಿನ ಗ್ರಾಫಿಕ್ ಅನ್ನು ಖಂಡಿಸಲು ಯಾವುದೇ ಪದಗಳಿಲ್ಲ'ವೆಂದು ಕಿಡಿಕಾರಿದ್ದಾರೆ.

ರಾಹುಲ್ ಗಾಂಧಿ ನವಯುಗದ 'ರಾವಣ'!; ಪೋಸ್ಟರ್ ಹಂಚಿಕೊಂಡು ಬಿಜೆಪಿ ಟೀಕೆ

ನವದೆಹಲಿ: ಕಾಂಗ್ರೆಸ್ ಯುವನಾಯಕ, ಸಂಸದ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಮತ್ತೊಮ್ಮೆ ಕಿಡಿಕಾರಿದೆ. ಈ ಬಾರಿ ರಾಹುಲ್ ಗಾಂಧಿಯವರನ್ನು ರಾವಣನಿಗೆ ಹೋಲಿಸಿ ಬಿಜೆಪಿ ಕಟುವಾಗಿ ಟೀಕಿಸಿದೆ.

ಗುರುವಾರ ಟ್ವೀಟ್ ಮಾಡಿರುವ ಬಿಜೆಪಿ, ರಾಹುಲ್ ಗಾಂಧಿ ನವಯುಗದ ರಾವಣ ಎಂದು ಟೀಕಿಸಿರುವ ಪೋಸ್ಟರ್ ಹಂಚಿಕೊಂಡಿದೆ. ‘ರಾಹುಲ್ ಗಾಂಧಿಯವರು ರಾಕ್ಷಸರ ರಾಜ ರಾವಣನ 'ನವ ಯುಗದ' ಅವತಾರವೆಂದು ಚಿತ್ರಿಸುವ ಪೋಸ್ಟರ್ ಅನ್ನು ಟ್ವಿಟರ್‍ನಲ್ಲಿ ಹಂಚಿಕೊಂಡಿದೆ. ಇದು ಇದೀಗ ವಿವಾದವನ್ನು ಹುಟ್ಟುಹಾಕಿದೆ. ಟ್ವಿಟರ್‍ನಲ್ಲಿ ಪೋಸ್ಟರ್ ಹಂಚಿಕೊಂಡಿರುವ ಬಿಜೆಪಿ, ‘ನವ ಯುಗದ ರಾವಣ ಇಲ್ಲಿದ್ದಾನೆ. ಅವನು ದುಷ್ಟ, ಧರ್ಮ ವಿರೋಧಿ, ರಾಮ ವಿರೋಧಿ ಮತ್ತು ಅವನ ಗುರಿ ಭಾರತವನ್ನು ನಾಶಮಾಡುವುದು’ ಅಂತಾ ಕಟುವಾಗಿ ಟೀಕಿಸಿದೆ.

ಇದನ್ನೂ ಓದಿ: ಭೂಮಿ ತಾಯಿ ಹೋರಾಟ ಸಮಿತಿಯಿಂದ ವಿನೂತನ ಪ್ರತಿಭಟನೆ

ಫಿಲ್ಮಿ ಸ್ಟೈಲ್‍ನಲ್ಲಿ ಪೋಸ್ಟರ್ ರೂಪಿಸಿರುವ ಬಿಜೆಪಿ, ಚಿತ್ರದ ಟೈಟಲ್‍ಗೆ ‘Ravan, a Congress party production, directed by George Soros’ ಎಂದು ಬರೆದುಕೊಂಡಿದೆ. ಬಿಜೆಪಿಯ ಈ ಪೋಸ್ಟರ್‍ಗೆ ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ರಾಜಕೀಯ, ಟೀಕೆ ಏನೇ ಇರಲಿ, ಆದರೆ ಈ ರೀತಿ ಒಬ್ಬ ವ್ಯಕ್ತಿಯನ್ನು ಟೀಕಿಸುವುದು ಸರಿಯಲ್ಲವೆಂದು ಸೋಷಿಯಲ್ ಮೀಡಿಯಾ ಬಳಕೆದಾರರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ವಿರುದ್ಧ ಕೆ.ಸಿ.ವೇಣುಗೋಪಾಲ್ ಕಿಡಿ: ರಾಹುಲ್ ಗಾಂಧಿಯವರನ್ನು ರಾವಣನ ರೀತಿ ಚಿತ್ರಿಸಿ ಟೀಕಿಸಿರುವ ಬಿಜೆಪಿ ವಿರುದ್ಧ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸಿ.ವೇಣುಗೋಪಾಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ರಾಹುಲ್ ಗಾಂಧಿಯವರನ್ನು ಬಿಜೆಪಿ ರಾವಣನಿಗೆ ಹೋಲಿಸಿದ ನಾಚಿಕೆಗೇಡಿನ ಗ್ರಾಫಿಕ್ ಅನ್ನು ಖಂಡಿಸಲು ಯಾವುದೇ ಪದಗಳಿಲ್ಲ. ಬಿಜೆಪಿಯ ಕೆಟ್ಟ ಉದ್ದೇಶಗಳು ಸ್ಪಷ್ಟವಾಗಿವೆ, ತನ್ನ ಅಜ್ಜಿ ಮತ್ತು ತಂದೆಯನ್ನು ಹತ್ಯೆಗಳಿಂದ ಕಳೆದುಕೊಂಡಿರುವ ಅವನನ್ನು ಅವರು ಕೊಲ್ಲಲು ಬಯಸುತ್ತಾರೆ’ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಸಂಸದ ತೇಜಸ್ವಿ ಸೂರ್ಯ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ

‘ಬಿಜೆಪಿಯವರು ತಮ್ಮ ಕೆಟ್ಟ ರಾಜಕೀಯದಿಂದ ರಾಹುಲ್ ಅವರ SPG ರಕ್ಷಣೆಯನ್ನು ಹಿಂತೆಗೆದುಕೊಂಡರು. ಅವರನ್ನು ಅವರ ಸುರಕ್ಷಿತ ನಿವಾಸದಿಂದ ಹೊರಹಾಕಿದ ನಂತರ, ವಿನಂತಿಸಿದ ಮತ್ತೊಂದು ಮನೆಯನ್ನು ಅವರು ಮಂಜೂರು ಮಾಡಲಿಲ್ಲ. ಇದೆಲ್ಲವೂ ತಮ್ಮ ಉಗ್ರ ಟೀಕಾಕಾರರ ಬಾಯಿ ಮುಚ್ಚಿಸಲು ಬಿಜೆಪಿ ಮಾಡುತ್ತಿರುವ ಯೋಜಿತ ಪಿತೂರಿಯನ್ನು ಸೂಚಿಸುತ್ತದೆ. ಅವರ ದ್ವೇಷ ತುಂಬಿದ ಸಿದ್ಧಾಂತದ ತಿರುಳನ್ನು ಇದು ತಿಳಿಸುತ್ತದೆ’ ಎಂದು ಅವರು ಟೀಕಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 
 

Read More