ನವದೆಹಲಿ: ಸೋಮವಾರ ದೆಹಲಿಯಲ್ಲಿ ಮಹಾರಾಷ್ಟ್ರದ ನಾಯಕ ರಾಜ್ ಠಾಕ್ರೆ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ, ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ ಮೈತ್ರಿ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಮಹಾರಾಷ್ಟ್ರದಲ್ಲಿ ಈಗಾಗಲೇ ಕಾಂಗ್ರೆಸ್ ಪಕ್ಷವು ಎನ್ಸಿಪಿಯೊಂದಿಗೆ ಮೈತ್ರಿಯನ್ನು ಹೊಂದಿದೆ. ಆದರೆ ಠಾಕ್ರೆಯವರ ಉತ್ತರ ಭಾರತದವರ ವಲಸೆ ವಿರೋಧಿ ನೀತಿಯಿಂದಾಗಿ ಅಧಿಕೃತವಾಗಿ ಮೈತ್ರಿ ಮಾಡಿಕೊಳ್ಳಲು ಆಸಕ್ತಿ ತೋರುತ್ತಿಲ್ಲ ಎಂದು ಸ್ಪಷ್ಟಪಡಿಸಿದೆ. ವಿಶೇಷವೆಂದರೆ ರಾಜ್ ಠಾಕ್ರೆ ಅವರು ಎರಡನೇ ಬಾರಿಗೆ ಸೋನಿಯಾ ಗಾಂಧಿಯವರನ್ನು ಭೇಟಿ ಮಾಡುತ್ತಿದ್ದಾರೆ. ಇದಕ್ಕೂ ಮೊದಲು ಅವರು ತಮ್ಮ ಮಗನ ಮದುವೆ ಆಹ್ವಾನ ನೀಡಿದ್ದರು. ಆದರೆ ಅವರಿಗೆ ಭಾಗವಹಿಸಲು ಸಾಧ್ಯವಾಗಿರಲಿಲ್ಲ.