Home> India
Advertisement

ಕೇಂದ್ರ ಸಚಿವ ರಾಮದಾಸ್ ಅಠವಾಳೆ ಕೆನ್ನೆಗೆ ಬಾರಿಸಿದ ಯುವಕ

ವ್ಯಕ್ತಿಯೋರ್ವನು ಕೇಂದ್ರ ಸಚಿವ ರಾಮದಾಸ್ ಅಠವಾಳೆ ಕೆನ್ನೆಗೆ ಬಾರಿಸಿದ ಘಟನೆ ಮಹಾರಾಷ್ಟ್ರದ ಅಂಬರ್ನಾಥ್ ಪಟ್ಟಣದಲ್ಲಿ ನಡೆದಿದೆ.

ಕೇಂದ್ರ ಸಚಿವ ರಾಮದಾಸ್ ಅಠವಾಳೆ ಕೆನ್ನೆಗೆ ಬಾರಿಸಿದ ಯುವಕ

ನವದೆಹಲಿ: ವ್ಯಕ್ತಿಯೋರ್ವನು ಕೇಂದ್ರ ಸಚಿವ ರಾಮದಾಸ್ ಅಠವಾಳೆ ಕೆನ್ನೆಗೆ ಬಾರಿಸಿದ ಘಟನೆ ಮಹಾರಾಷ್ಟ್ರದ ಅಂಬರ್ನಾಥ್ ಪಟ್ಟಣದಲ್ಲಿ ನಡೆದಿದೆ.

ಶನಿವಾರದಂದು ತಡರಾತ್ರಿ ಈ ಘಟನೆ ಜರುಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಾರ್ಯಕ್ರಮವೊಂದನ್ನು ಮುಗಿಸಿ ಬರುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ವ್ಯಕ್ತಿಯೊಬ್ಬ ಅವರತ್ತ ತೆರಳಿ ಅವರ ಕೆನ್ನೆ ಹೊಡೆದಿದ್ದಾನೆ ಎನ್ನಲಾಗಿದೆ.

ಈ ವ್ಯಕ್ತಿಯನ್ನು ಪ್ರವೀಣ್ ಗೋಸಾವಿ  ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾದ ಕಾರ್ಯಕರ್ತ ಎಂದು ಗುರುತಿಸಲಾಗಿದೆ. ಆದರೆ ಇದರ ಘಟನೆ ಹಿಂದಿನ ಉದ್ದೇಶ ಇನ್ನು ತಿಳಿದುಬಂದಿಲ್ಲ.ಪೊಲೀಸರು ಈಗಾಗಲೇ ಪ್ರಕರಣ ದಾಖಲಿಸಿಕೊಂಡು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.ಈ ಘಟನೆಯ ವಿಚಾರವಾಗಿ ತನಿಖೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.

Read More