ಔರಂಗಾಬಾದ್: ರೈಲ್ವೆ ಟ್ರ್ಯಾಕ್ನಲ್ಲಿ ಮಲಗಿದ್ದವರ 19 ಕಾರ್ಮಿಕರ ಮೇಲೆ ಗೂಡ್ಸ್ ರೈಲು ಹರಿದ ಪರಿಣಾಮ 14 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಇಂದು ಮುಂಜಾನೆ ಮಹಾರಾಷ್ಟ್ರ (Maharashtra) ದ ಔರಂಗಾಬಾದ್ನಲ್ಲಿ ನಡೆದಿದೆ. ಮೂವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇಬ್ಬರು ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಈ ಘಟನೆ ಬೆಳಗಿನ ಜಾವ 5 ಗಂಟೆ ಸುಮಾರಿಗೆ ಸಂಭವಿಸಿದೆ ಎಂದು ಹೇಳಲಾಗಿದ್ದು ಕೆಲಸವಿಲ್ಲದ ಕಾರಣ ಮತ್ತು ದೇಶಾದ್ಯಂತ ಲಾಕ್ಡೌನ್(Lockdown) ಜಾರಿಯಲ್ಲಿರುವುದರಿಂದ ಕಾರ್ಮಿಕರೆಲ್ಲರೂ ರೈಲಿನ ಟ್ರ್ಯಾಕ್ ಹಿಡಿದು ಕಾಲ್ನಡಿಗೆಯಲ್ಲಿ ತಮ್ಮ ತಮ್ಮ ಪ್ರದೇಶಗಳಿಗೆ ಮರಳುತ್ತಿದ್ದರು. ರಾತ್ರಿ ಆಯಾಸಗೊಂಡಿದ್ದ ಕಾರಣ ಟ್ರ್ಯಾಕ್ ಮೇಲೆಯೇ ಮಲಗಿದ್ದರು ಎನ್ನಲಾಗಿದೆ.