Home> India
Advertisement

ಅಯೋಧ್ಯೆ ವಿವಾದ: ಪ್ರತಿ ದಿನ 'ಸುಪ್ರೀಂ' ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ - ಸುನ್ನಿ ವಕ್ಫ್ ಮಂಡಳಿ

ಅಯೋಧ್ಯೆಯಲ್ಲಿರುವ ರಾಮ ಜನ್ಮಭೂಮಿ-ಬಾಬರಿ ಮಸೀದಿ ಭೂ ವಿವಾದ ಪ್ರಕರಣದಲ್ಲಿ ಪ್ರತಿದಿನವೂ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ ಎಂದು ಸುನ್ನಿ ವಕ್ಫ್ ಮಂಡಳಿ ಶುಕ್ರವಾರದಂದು ಸುಪ್ರೀಂಕೋರ್ಟ್‌ಗೆ ತಿಳಿಸಿದೆ. ಈ ವಿಷಯವನ್ನು ಈ ರೀತಿ ತ್ವರಿತಗೊಳಿಸಬಾರದು ಎಂದು ಸುನ್ನಿ ವಕ್ಫ್ ಮಂಡಳಿ ಮನವಿ ಮಾಡಿಕೊಂಡಿದೆ.

ಅಯೋಧ್ಯೆ ವಿವಾದ: ಪ್ರತಿ ದಿನ 'ಸುಪ್ರೀಂ' ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ - ಸುನ್ನಿ ವಕ್ಫ್ ಮಂಡಳಿ

ನವದೆಹಲಿ: ಅಯೋಧ್ಯೆಯಲ್ಲಿರುವ ರಾಮ ಜನ್ಮಭೂಮಿ-ಬಾಬರಿ ಮಸೀದಿ ಭೂ ವಿವಾದ ಪ್ರಕರಣದಲ್ಲಿ ಪ್ರತಿದಿನವೂ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ ಎಂದು ಸುನ್ನಿ ವಕ್ಫ್ ಮಂಡಳಿ ಶುಕ್ರವಾರದಂದು ಸುಪ್ರೀಂಕೋರ್ಟ್‌ಗೆ ತಿಳಿಸಿದೆ. ಈ ವಿಷಯವನ್ನು ಈ ರೀತಿ ತ್ವರಿತಗೊಳಿಸಬಾರದು ಎಂದು ಸುನ್ನಿ ವಕ್ಫ್ ಮಂಡಳಿ ಮನವಿ ಮಾಡಿಕೊಂಡಿದೆ.

ಸುನ್ನಿ ವಕ್ಫ್ ಮಂಡಳಿ ಪರವಾಗಿ ವಾದಿಸಿದ ಹಿರಿಯ ವಕೀಲ ರಾಜೀವ್ ಧವನ್ ' ವಾರದ ಎಲ್ಲಾ ದಿನಗಳಲ್ಲಿ ವಿಚಾರಣೆ ನಡೆಸಿದರೆ ನ್ಯಾಯಾಲಯಕ್ಕೆ ಸಹಾಯ ಮಾಡಲು ಸಾಧ್ಯವಿಲ್ಲ. ಇದು ಮೊದಲ ಮೇಲ್ಮನವಿ ಮತ್ತು ವಿಚಾರಣೆಯನ್ನು ತ್ವರಿತವಾಗಿ ನಡೆಸಲು ಸಾಧ್ಯವಿಲ್ಲ ಎಂದು ಹೇಳಿದರು. ವಿಚಾರಣೆಯ ನಾಲ್ಕನೇ ದಿನದಂದು ನ್ಯಾಯಾಲಯಕ್ಕೆ ಹಾಜರಾದ ಧವನ್ ಅವರು ವಾದಗಳಿಗೆ ಪ್ರತಿದಿನ ದಾಖಲೆಗಳನ್ನು ಸಿದ್ಧಪಡಿಸುವ ಅಗತ್ಯವಿದೆ, ಐದು ದಿನಗಳ ವಿಚಾರಣೆಯ ಸ್ವರೂಪದಲ್ಲಿ ಅದನ್ನು ಮಾಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು. 

ಆಗಸ್ಟ್ 6 ರಂದು ಅಯೋಧ್ಯೆ ಭೂ ವಿವಾದ ಪ್ರಕರಣದ ವಿಚಾರಣೆಯನ್ನು ಸುಪ್ರೀಂಕೋರ್ಟ್ ನಿರ್ಧರಿಸಿದ್ದರಿಂದ ವಿವಿಧ ಸಂಧಾನಕಾರರ ನಡುವೆ ಯಾವುದೇ ಇತ್ಯರ್ಥ ಕಂಡುಕೊಳ್ಳಲು ಸಂಧಾನ ಸಮಿತಿ ವಿಫಲವಾಗಿದೆ. ರಂಜನ್ ಧವನ್ ಮಾಡಿದ ಮನವಿಗೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಪೀಠ ಅವರು ತಮ್ಮ ಮನವಿಯನ್ನು ಆಲಿಸಿದೆ ಮತ್ತು ಏನು ಮಾಡಬೇಕೆಂಬುದನ್ನು ಅವರು ಪರಿಗಣಿಸುವುದಾಗಿ ಹೇಳಿದರು. ನ್ಯಾಯಮೂರ್ತಿಗಳಾದ ಎಸ್‌ಎ ಬೊಬ್ಡೆ, ಡಿವೈ ಚಂದ್ರಚೂಡ್, ಅಶೋಕ್ ಭೂಷಣ್ ಮತ್ತು ಎಸ್ ಅಬ್ದುಲ್ ನಜೀರ್ ಅವರು ನ್ಯಾಯಪೀಠದಲ್ಲಿದ್ದರು. 

Read More