Home> India
Advertisement

ಭಾರತದ ಸಂವಿಧಾನ ಇಷ್ಟವಿಲ್ಲ ಎಂದರೆ ದೇಶ ಬಿಟ್ಟು ಹೋಗಿ: ರಾಮದಾಸ್ ಅಥಾವಾಲೆ

ಭಾರತೀಯ ಸಂವಿಧಾನವು ವಿಶ್ವದಲ್ಲೇ ಅತ್ಯುತ್ತಮವಾದುದು. ಸಂವಿಧಾನ ಇಷ್ಟ ಇಲ್ಲ ಎನ್ನುವವರು ದೇಶ ಬಿಟ್ಟು ಹೋಗಬಹುದು ಎಂದು ಹೇಳಿದ್ದಾರೆ.

ಭಾರತದ ಸಂವಿಧಾನ ಇಷ್ಟವಿಲ್ಲ ಎಂದರೆ ದೇಶ ಬಿಟ್ಟು ಹೋಗಿ: ರಾಮದಾಸ್ ಅಥಾವಾಲೆ

ನಾಗ್ಪುರ: ಭಾರತದ ಸಂವಿಧಾನವನ್ನು ಇಷ್ಟಪಡದವರಿಗೆ ದೇಶದಲ್ಲಿ ವಾಸಿಸುವ ಹಕ್ಕಿಲ್ಲ ಎಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ಮುಖ್ಯಸ್ಥ ಹಾಗೂ ಕೇಂದ್ರ ಸಚಿವ ರಾಮದಾಸ್ ಅಥಾವಾಲೆ ಹೇಳಿದ್ದಾರೆ.

ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ 62ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತೀಯ ಸಂವಿಧಾನವು ವಿಶ್ವದಲ್ಲೇ ಅತ್ಯುತ್ತಮವಾದುದು. ಸಂವಿಧಾನ ಇಷ್ಟ ಇಲ್ಲ ಎನ್ನುವವರು ದೇಶ ಬಿಟ್ಟು ಹೋಗಬಹುದು ಎಂದು ಹೇಳಿದ್ದಾರೆ.

ಮುಂದುವರೆದು ಮಾತನಾಡಿದ ಅವರು, ಡಾ.ಬಿ.ಆರ್.ಅಂಬೇಡ್ಕರ್ ಅವರ ನೇತೃತ್ವದಲ್ಲಿ ರಚನೆಯಾದ ಸಂವಿಧಾನವನ್ನು ವಿಶ್ವದಲ್ಲೇ ಅತ್ಯುತ್ತಮ ಸಂವಿಧಾನ ಎಂದು ಪರಿಗಣಿಸಲಾಗಿದೆ. ಹೀಗಿರುವಾಗ ದೇಶದ ಸಂವಿಧಾನ ಒಪ್ಪದವರಿಗೆ ಇಲ್ಲಿ ವಾಸಿಸಲು ಯಾವುದೇ ಹಕ್ಕಿಲ್ಲ ಎಂದಿದ್ದಾರೆ.
 

Read More