Home> India
Advertisement

ಪಶ್ಚಿಮ ಬಂಗಾಳದ ಪೂರ್ವ ಮಿಡ್ನಾಪುರದಲ್ಲಿ ಟಿಎಂಸಿ ಮುಖಂಡನ ಕೊಲೆ

ಸೋಮವಾರ ತಡರಾತ್ರಿ ಮೊಂಡಾಲ್ ಅವರು ತಮ್ಮ ಮಗಳ ಮನೆಯಿಂದ ಹಿಂತಿರುಗುತ್ತಿದ್ದ ಸಮಯದಲ್ಲಿ ದಾಳಿ ನಡೆಸಿದ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದ ಪೂರ್ವ ಮಿಡ್ನಾಪುರದಲ್ಲಿ ಟಿಎಂಸಿ ಮುಖಂಡನ ಕೊಲೆ

ನವದೆಹಲಿ: ಪಶ್ಚಿಮ ಬಂಗಾಳದ ಪೂರ್ವ ಮಿಡ್ನಾಪೋರ್ ಜಿಲ್ಲೆಯಲ್ಲಿ ತೃಣಮೂಲ ಕಾಂಗ್ರೆಸ್ ಮುಖಂಡನನ್ನು ದುಷ್ಕರ್ಮಿಗಳು ಹತ್ಯೆಗೈದಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಮೃತರನ್ನು ಬಚುದೇಬ್ ಮೊಂಡಾಲ್ ಎಂದು ಗುರುತಿಸಲಾಗಿದ್ದು, ಅವರು ಬಚ್ಚಾ ಗ್ರಾಮ ಪಂಚಾಯತ್ ನ ಮಾಜಿ ಪ್ರಧಾನ್ ಆಗಿದ್ದರು ಎನ್ನಲಾಗಿದೆ.

ಸೋಮವಾರ ತಡರಾತ್ರಿ ಮೊಂಡಾಲ್ ಅವರು ತಮ್ಮ ಮಗಳ ಮನೆಯಿಂದ ಹಿಂತಿರುಗುತ್ತಿದ್ದ ಸಮಯದಲ್ಲಿ ದಾಳಿ ನಡೆಸಿದ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸದ್ಯ ಪೊಲೀಸರು ಶವವನ್ನು ವಶಪಡಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ. 
ಪಶ್ಚಿಮ ಬಂಗಾಳದಿಂದ ಕಳೆದ ಒಂದು ವಾರದಲ್ಲಿ ಅನೇಕ ಕೊಲೆ ಪ್ರಕರಣಗಳು ದಾಖಲಾಗಿದ್ದು, ಪೊಲೀಸರು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

ಕಳೆದ ವಾರ ಆರ್‌ಎಸ್‌ಎಸ್ ಕಾರ್ಯಕರ್ತ ಬೊಂಡು ಪ್ರಕಾಶ್ ಪಾಲ್, ಅವರ ಗರ್ಭಿಣಿ ಪತ್ನಿ ಮತ್ತು ಆರು ವರ್ಷದ ಮಗನನ್ನು ದುಷ್ಕರ್ಮಿಗಳು ಮುರ್ಷಿದಾಬಾದ್‌ನಲ್ಲಿ ಕ್ರೂರವಾಗಿ ಹತ್ಯೆ ಮಾಡಿದ್ದರು. 

ಇದೇ ವೇಳೆ, ಕಳೆದ ಮೂರು ತಿಂಗಳಲ್ಲಿ ತಮ್ಮ ಪಕ್ಷದ ಎಂಟು ಸದಸ್ಯರನ್ನು ಹತ್ಯೆ ಮಾಡಲಾಗಿದೆ ಎಂದು ಭಾರತೀಯ ಜನತಾ ಪಕ್ಷದ ಪಶ್ಚಿಮ ಬಂಗಾಳ ಘಟಕ ಹೇಳಿದೆ.
 

Read More