ಲಕ್ನೋ: ಯೋಗಿ ಸರ್ಕಾರ(Yogi government) ಭ್ರಷ್ಟಾಚಾರ (Corruption)ದ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ. ಭ್ರಷ್ಟಾಚಾರ ಮತ್ತು ಕೆಲಸದಲ್ಲಿ ನಿರ್ಲಕ್ಷ್ಯ ವಹಿಸಿದ್ದಕ್ಕಾಗಿ ರಾಜ್ಯ ಸರ್ಕಾರ ಪ್ರಾಂತೀಯ ಪೊಲೀಸ್ ಸೇವೆ (PPS) ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಂಡಿರುವ ಯೋಗಿ ಸರ್ಕಾರ 7 ಪಿಪಿಎಸ್ ಅಧಿಕಾರಿಗಳನ್ನು ಬಲವಂತವಾಗಿ ನಿವೃತ್ತಿ(Forced Retirement) ಹೊಂದುವಂತೆ ಮಾಡಿದೆ.
ಈ ಅಧಿಕಾರಿಗಳ ವಿರುದ್ಧ ಕ್ರಮ:
ಮಾಹಿತಿಯ ಪ್ರಕಾರ, ಏಳು ಅಧಿಕಾರಿಗಳನ್ನು ಹೊರತುಪಡಿಸಿ, ಯೋಗಿ ಸರ್ಕಾರವು ಇತರ ಅಧಿಕಾರಿಗಳ ಮೇಲೆ ಕಣ್ಣಿಟ್ಟಿದೆ. ಎರಡು ಡಜನ್ಗೂ ಹೆಚ್ಚು ಅಧಿಕಾರಿಗಳ ಫೈಲ್ ಸಿಎಂ ಯೋಗಿ ಆದಿತ್ಯನಾಥ್ಗೆ ತಲುಪಿದೆ ಎಂದು ಹೇಳಲಾಗುತ್ತಿದೆ. ನಿರ್ಲಕ್ಷ್ಯ ಮತ್ತು ಅನುಚಿತವಾಗಿ ವರ್ತಿಸುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಿದೆ.
ಜುಲೈನಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕೆಲಸದಲ್ಲಿ ನಿರ್ಲಕ್ಷ್ಯ ವಹಿಸುವ ನೌಕರರು ಮತ್ತು ಅಧಿಕಾರಿಗಳನ್ನು ಕೇಂದ್ರದ ಮೋದಿ ಸರ್ಕಾರದ ಮಾರ್ಗದಲ್ಲೇ ನಿವೃತ್ತಿ ಮಾಡುವುದಾಗಿ ಘೋಷಿಸಿದರು.