Home> Karnataka
Advertisement

ಹುಬ್ಬಳ್ಳಿಯಲ್ಲಿ 10 ಲಕ್ಷ ರೂ. ಮೌಲ್ಯದ 52 ಕೆ.ಜಿ. ಗಾಂಜಾ ವಶ, ಓರ್ವನ ಬಂಧನ

ಬೀದರ್‌ ಜಿಲ್ಲೆಯ ಬಸವಕಲ್ಯಾಣದ ತ್ರಿಪುರನಾಥ ಗ್ರಾಮದ ಕಾರು ಚಾಲಕ ಸಿದ್ಧರಾಮ ಗುಂಡೆ (29) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಹುಬ್ಬಳ್ಳಿಯಲ್ಲಿ 10 ಲಕ್ಷ ರೂ. ಮೌಲ್ಯದ 52 ಕೆ.ಜಿ. ಗಾಂಜಾ ವಶ, ಓರ್ವನ ಬಂಧನ

ಹುಬ್ಬಳ್ಳಿ: ಬೀದರ್‌ನಿಂದ ಕಾರವಾರ ಮತ್ತು ಗೋವಾಕ್ಕೆ ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 10 ಲಕ್ಷ ರೂ. ಮೌಲ್ಯದ 52.5 ಕೆ.ಜಿ. ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಆಯುಕ್ತ ಎಂ.ಎನ್‌.ನಾಗರಾಜ್ ಅವರು, ಬೀದರ್‌ ಜಿಲ್ಲೆಯ ಬಸವಕಲ್ಯಾಣದ ತ್ರಿಪುರನಾಥ ಗ್ರಾಮದ ಕಾರು ಚಾಲಕ ಸಿದ್ಧರಾಮ ಗುಂಡೆ (29) ಎಂಬಾತನನ್ನು ಬಂಧಿಸಲಾಗಿದ್ದು, ಗಾಂಜಾ ಸಮೇತ ಆತನ ಕಾರು ಮತ್ತು ಮೊಬೈಲ್‌ ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಹುಬ್ಬಳ್ಳಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ" ಎಂದು ತಿಳಿಸಿದ್ದಾರೆ.

ಜೂನ್ 9 ರಂದು ಒಡಿಶಾದಲ್ಲಿ ಪ್ರಮುಖ ಮಾದಕ ವಸ್ತು ಕಳ್ಳಸಾಗಣೆ ನಡೆಸುತ್ತಿದ್ದ 34 ಜನರನ್ನು ಬಂಧಿಸಿದ್ದ ಪೊಲೀಸರು ಸುಮಾರು 2 ಕೋಟಿ ರೂ. ಮೌಲ್ಯದ 3,305 ಕೆ.ಜಿ. ಗಾಂಜಾವನ್ನು ವಶಪಡಿಸಿಕೊಂಡಿದ್ದರು. ಈ ಬೆನ್ನಲ್ಲೇ ಹುಬ್ಬಳ್ಳಿಯಲ್ಲಿ ಗಾಂಜಾ ಸಾಗಾಟ ಪ್ರಕರಣ ಬೆಳಕಿಗೆ ಬಂದಿದೆ.

Read More