Home> Karnataka
Advertisement

ಮದುವೆಯಾಗಲು ನಿರಾಕರಿಸಿದ್ದಕ್ಕೆ ಪ್ರಿಯತಮನ ಮೇಲೆ ಬಿಸಿ ನೀರು ಎರಚಿದ ಮಹಿಳೆ..!

Kalburgi : ಅನ್ಯ ಯುವತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವಕನ ಮೇಲೆ ಆತನ ಸ್ನೇಹಿತೆ ಬಿಸಿನೀರು ಎರಚಿ ಗಾಯಗೊಳಿಸಿರುವ ಭೀಕರ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. 
 

ಮದುವೆಯಾಗಲು ನಿರಾಕರಿಸಿದ್ದಕ್ಕೆ ಪ್ರಿಯತಮನ ಮೇಲೆ ಬಿಸಿ ನೀರು ಎರಚಿದ ಮಹಿಳೆ..!

ಗಾಯಗೊಂಡಿರುವ ವಿಜಯ್‌ ಕುಮಾರ್‌ ಎಂಬಾತ ಮೂಲತಃ ಕಲಬುರಗಿಯವನು. ಇವರನ್ನು ಗಾಯಗೊಂಡಿರುವ ಹಿನ್ನಲೆಯಲ್ಲಿ ವಿಕ್ಟೋರಿಯಾ ಆಸ್ಪತ್ರಗೆ ದಾಖಲಿಸಲಾಗಿದ್ದು, ಬಸಿಸನೀರು ಎರಚಿದ ಮಹಿಳೆ ವಿರುದ್ಧ ಚಾಮರಾಜಪೇಟೆ ಪೋಲಿಸ್‌ ಠಾಣೆಯಲ್ಲಿ ಈ ಪ್ರಕರಣಕ್ಕೆ ಸಂಭಂದಿಸಿದಂತೆ ದೂರು ದಾಖಲಾಗಿದೆ.

ಕಲಬುರಗಿಯ ವಿಜಯ್‌ ಕುಮಾರ್‌ ಬಟ್ಟೆ ಮಾರಾಟ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದನು. ಆತನಿಗೆ ತನ್ನದೇ ಜಿಲ್ಲೆಯ ಮಹಿಳೆಯೊಬ್ಬಳು ಪರಿಚಯವಾಗಿದ್ದಳು. ಇಬ್ಬರ ನಡುವೆ ಉತ್ತಮ ಸ್ನೇಹವಿತ್ತು. ಆದರೆ, ಆಕೆಗೆ ವಿವಾಹವಾಗಿತ್ತು. ಆದರೂ ಅವಳು ಈತನನ್ನು ಪ್ರೀತಿಸುತ್ತಿದ್ದಳು ಮತ್ತು ಮದುವೆಯಾಗುವಂತೆ ಒತ್ತಾಯಿಸುತ್ತಿದ್ದಳು ಎಂದು ಮಾದ್ಯಮ ಮೂಲಗಳು ತಿಳಿಸಿವೆ. 

ಇದನ್ನೂ ಓದಿ-ಕೊಪ್ಪಳ ಭೀಕರ ರಸ್ತೆ ಅಪಘಾತ: ಮೃತರ ಕುಟುಂಬಗಳಿಗೆ 2 ಲಕ್ಷ ರೂ ಪರಿಹಾರ ಘೋಷಣೆ 

ಆಕೆಗೆ ಮದುವೆಯಾಗಿರುವ ವಿಚಾರವನ್ನು ತಿಳಿದುಕೊಂಡ ವಿಜಯ್‌, ಆಕೆಯಿಂದ ದೂರವಿದ್ದ, ಅಲ್ಲದೇ ಇತ್ತೀಚೆಗೆ ಬೇರೆ ಯುವತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಎಂದು ಪೋಲಿಸರು ಹೇಳಿದ್ದಾರೆ. ಮೇ 25ರಂದು ಮಹಿಳೆ, ತನ್ನ ಹುಟ್ಟುಹಬ್ಬ ಆಚರಣೆಗೆಂದು ವಿಜಯ್‌ನನ್ನು ತನ್ನ ಕೋಣೆಗೆ ಕರೆಸಿಕೊಂಡಿದ್ದಾಲೆ. ಅದೇ ವೇಳೆ ವಿಜಯ್‌ ಮೇಲೆ ಬಸಿ ನೀರು ಕಾಯಿಸಿ ತಂದು ಎರಚಿ ಪರಾರಿಯಾಗಿದ್ದಾಳೆ. ಮನೆ ಮಾಲೀಕರ ಸಹಾಯದಿಂದ ವಿಯ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಚಾಮರಾಜಪೇಟೆ ಪೋಲಿಸರು ತಿಳಿಸಿದ್ದಾರೆ. 

ಇದನ್ನೂ ಓದಿ-"ಅವರಿಗೆ ಇವರಿಗೆ ಚಾಡಿ ಹೇಳಿಕೊಂಡು ಬದುಕುತ್ತೇನೆ ಎನ್ನುವವರನ್ನು ಮಟ್ಟ ಹಾಕುತ್ತೇನೆ"

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Read More