Home> Karnataka
Advertisement

ಚುನಾವಣೆಯಲ್ಲಿ ಕುಕ್ಕರ್, ಐರನ್ ಬಾಕ್ಸ್ ಹಂಚಿಕೆ: ಚುನಾವಣೆ ಆಯೋಗದ ಕ್ರಮಕ್ಕೆ ಬೊಮ್ಮಾಯಿ ಆಗ್ರಹ

ವಿಧಾನಸಭಾ ಚುನಾವಣೆಯಲ್ಲಿ ಕುಕ್ಕರ್ & ಐರನ್ ಬಾಕ್ಸ್ ಹಂಚಿಕೆ ನಿಜವೇ ಆಗಿದ್ದರೆ ಇದು ಗಂಭೀರ ಪ್ರಕರಣ ಆಗಲಿದೆ. ಇಂತಹ ಸೂಕ್ಷ್ಮ ವಿಚಾರಗಳನ್ನು ಚುನಾವಣಾ ಆಯೋಗ ಗಮನಿಸಬೇಕಾಗುತ್ತದೆ ಅಂತಾ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಚುನಾವಣೆಯಲ್ಲಿ ಕುಕ್ಕರ್, ಐರನ್ ಬಾಕ್ಸ್ ಹಂಚಿಕೆ: ಚುನಾವಣೆ ಆಯೋಗದ ಕ್ರಮಕ್ಕೆ ಬೊಮ್ಮಾಯಿ ಆಗ್ರಹ

ಬೆಂಗಳೂರು: 2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಕ್ಷೇತ್ರದ ಅಭ್ಯರ್ಥಿಯಾಗಿದ್ದ ಸಿದ್ದರಾಮಯ್ಯನವರು ಕುಕ್ಕರ್, ಐರನ್ ಬಾಕ್ಸ್ ಹಂಚಿಕೆ ಮಾಡಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆಂದು ಅವರ ಪುತ್ರ ಡಾ.ಯತೀಂದ್ರ ನೀಡಿರುವ ಹೇಳಿಕೆ ನಿಜವಾಗಿದ್ದರೆ ಚುನಾವಣಾ ಆಯೋಗ  ಗಂಭೀರವಾಗಿ ಪರಿಗಣಿಸಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ‌ ಆಗ್ರಹಿಸಿದ್ದಾರೆ.

ಮಂಗಳವಾರ ಬೆಂಗಳೂರಿನಲ್ಲಿ ಮಾತನಾಡಿದ ಅವರು, ‘ಮತದಾರರಿಗೆ ಕುಕ್ಕರ್, ಐರನ್ ವಾಕ್ಸ್ ಹಂಚಿದ್ದರಿಂದಲೇ ತಮ್ಮ ತಂದೆ ಸಿದ್ದರಾಮಯ್ಯನವರು ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಾಯಿತು ಎಂಬ ಯತಿಂದ್ರರ ಬಹಿರಂಗ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದರು.

ಇದನ್ನೂ ಓದಿ: ಮಂಡ್ಯದಲ್ಲಿ ಭುಗಿಲೆದ್ದ ಕಾವೇರಿ ಹೋರಾಟ

ಡಾ.ಯತೀಂದ್ರ ಅವರು ನೀಡಿರುವ ಹೇಳಿಕೆ ನಿಜವಾಗಿದ್ದರೆ ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಬೇಕು. ಈಗಾಗಲೇ ಸಿಎಂ ಸಿದ್ದರಾಮಯ್ಯರ ವಿರುದ್ಧ ಒಂದು ಚುನಾವಣಾ ತಕರಾರು ಅರ್ಜಿ ಇದೆ. ಯತೀಂದ್ರ ಹೇಳಿದ್ದಕ್ಕೆ ಸಾಕ್ಷ್ಯಾಧಾರ ಇದ್ದರೆ ಆಯೋಗ ಅದನ್ನು ಪರಿಗಣಿಸಬೇಕಾಗುತ್ತದೆ. ಕುಕ್ಕರ್, ಐರನ್ ಬಾಕ್ಸ್ ಹಂಚಿಕೆ ನಿಜವೇ ಆಗಿದ್ದರೆ ಇದು ಗಂಭೀರ ಪ್ರಕರಣ ಆಗಲಿದೆ. ಇಂತಹ ಸೂಕ್ಷ್ಮ ವಿಚಾರಗಳನ್ನು ಚುನಾವಣಾ ಆಯೋಗ ಗಮನಿಸಬೇಕಾಗುತ್ತದೆ ಅಂತಾ ಬೊಮ್ಮಾಯಿ ಹೇಳಿದ್ದಾರೆ.

ಡಾ.ಯತೀಂದ್ರ ಏನು ಹೇಳಿದ್ದರು..?

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಮಡಿವಾಳ ಸಮುದಾಯ ಭವನದ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದ ಡಾ.ಯತೀಂದ್ರ, ‘ವಿಧಾನಸಭಾ ಚುನಾವಣಾ ಸಮಯದಲ್ಲಿ ವರುಣಾ ಕ್ಷೇತ್ರದ ಮಡಿವಾಳ ಸಮುದಾಯದ ಮತದಾರರಿಗೆ ಸಮುದಾಯದ ರಾಜ್ಯಾಧ್ಯಕ್ಷ ನಂಜಪ್ಪನವರು ಕುಕ್ಕರ್ ಮತ್ತು ಐರನ್ ಬಾಕ್ಸ್ ವಿತರಿಸಲು ಸಿದ್ಧಪಡಿಸಿಕೊಂಡಿದ್ದರು. ಆದರೆ ಕಾರಣಾಂತರಗಳಿಂದ 2-3 ಬಾರಿ ಅದನ್ನು ಮುಂದೂಡಲಾಗಿತ್ತು. ನಂತರ ತಂದೆಯವರಿಂದ ದಿನಾಂಕ ಪಡೆದು ಅವರ ಕೈಯಿಂದಲೇ ಕುಕ್ಕರ್ ಹಾಗೂ ಐರನ್ ಬಾಕ್ಸ್ ಕೊಡಿಸಿದರು’ ಅಂತಾ ಹೇಳಿಕೆ ನೀಡಿದ್ದರು ಎಂದು ಹೇಳಲಾಗಿದೆ.

ಇದನ್ನೂ ಓದಿ: ತಮಿಳುನಾಡಿಗೆ ನೀರು ಹರಿಸಲು ಪ್ರಾಧಿಕಾರ ಆದೇಶ

ಡಾ.ಯತೀಂದ್ರ ಅವರು ನೀಡಿರುವ ಹೇಳಿಕೆ ವಿಚಾರವಾಗಿ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಈ ಬಗ್ಗೆ ಚುನಾವಣಾ ಆಯೋಗ ಕ್ರಮಕೈಗೊಳ್ಳಬೇಕು ಅಂತಾ ವಿಪಕ್ಷಗಳ ಮುಖಂಡರು ಒತ್ತಾಯಿಸಿದ್ದಾರೆ. ಆದರೆ ತಮ್ಮ ಹೇಳಿಕೆ ಬಗ್ಗೆ ಯತೀಂದ್ರ ಸಿದ್ದರಾಮಯ್ಯನವರು ಇದುವರೆಗೂ ಯಾವುದೇ ಸ್ಪಷ್ಟನೆ ನೀಡಿಲ್ಲ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 
 

Read More