Home> Karnataka
Advertisement

Siddaramaiah : ಹಿಜಾಬ್ ವಿವಾದ ಆಗಲು ಬಿಜೆಪಿಯೇ ಕಾರಣ : ಸಿದ್ದರಾಮಯ್ಯ

ಹಿಜಾಬ್ ವಿವಾದ ಆಗಲು ಬಿಜೆಪಿಯೇ ಕಾರಣ. ಮುಸ್ಲಿಂ ಹೆಣ್ಣು ಮಕ್ಕಳು ಒಂದು ದುಪ್ಪಟ್ಟ ತಲೆ ಹಾಕಿ ಕೊಳ್ಳುತ್ತೇನೆ ಎಂದರೆ ಅದರಲ್ಲಿ ತಪ್ಪೇನಿದೆ? ಹಿಂದೂ ಹೆಣ್ಣು ಮಕ್ಕಳು ತಲೆ ಮೇಲೆ ಬಟ್ಟೆ ಹಾಕಿ ಕೊಳ್ಳಲ್ವಾ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. 

Siddaramaiah : ಹಿಜಾಬ್ ವಿವಾದ ಆಗಲು ಬಿಜೆಪಿಯೇ ಕಾರಣ : ಸಿದ್ದರಾಮಯ್ಯ

ಮೈಸೂರು : ಹಿಜಾಬ್ ವಿವಾದ ಆಗಲು ಬಿಜೆಪಿಯೇ ಕಾರಣ. ಮುಸ್ಲಿಂ ಹೆಣ್ಣು ಮಕ್ಕಳು ಒಂದು ದುಪ್ಪಟ್ಟ ತಲೆ ಹಾಕಿ ಕೊಳ್ಳುತ್ತೇನೆ ಎಂದರೆ ಅದರಲ್ಲಿ ತಪ್ಪೇನಿದೆ? ಹಿಂದೂ ಹೆಣ್ಣು ಮಕ್ಕಳು ತಲೆ ಮೇಲೆ ಬಟ್ಟೆ ಹಾಕಿ ಕೊಳ್ಳಲ್ವಾ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. 

ಈ ಕುರಿತು ಸಿದ್ದರಾಮನ ಹುಂಡಿಯಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿ ನೀಡಿದ ಸಿದ್ದರಾಮಯ್ಯ(Siddaramaiah), ಸ್ವಾಮೀಜಿಗಳು ತಲೆ ಮೇಲೆ ಬಟ್ಟೆ ಹಾಕುತ್ತಾರೆ. ಅದನ್ನು ನೀವು ಪ್ರಶ್ನೆ ಮಾಡುತ್ತೀರಾ? ಇಂತಹ ವಿವಾದ ಸೃಷ್ಟಿಸಿ ಅದನ್ನು ಅರಗಿಸಿ ಕೊಳ್ಳುತ್ತೇವೆ ಎಂದು ಬಿಜೆಪಿ ಅಂದು ಕೊಂಡಿದೆ. ಆದರೆ, ಜನ ಬುದ್ದಿವಂತರು. ಜನರಿಗೆ ಬಿಜೆಪಿಯ ತಂತ್ರ ಅರ್ಥವಾಗಿದೆ. ಸಂಘ ಪರಿವಾರದವರು ಅಲ್ಪ ಸಂಖ್ಯಾತರ ಕೊಲೆ ಮಾಡಿದರೆ ಅವರಿಗೆ ಕಡಿಮೆ ಪರಿಹಾರ ಹಣ ಕೊಡುತ್ತಾರೆ. ಮುಸ್ಲಿಂರು ಹಿಂದೂವಿ‌ನ ಕೊಲೆ ಮಾಡಿದರೆ ಜಾಸ್ತಿ ಪರಿಹಾರ ಕೊಡುತ್ತಾರೆ. ಇಂತಹ ತಾರತಮ್ಯ ಯಾಕೆ? ಇಂತಹ ವರ್ತನೆಯಿಂದ ಮತ ಕ್ರೂಢೀಕರಣ ಆಗುತ್ತೆ ಎಂಬ ಬಿಜೆಪಿ ಲೆಕ್ಕ ಉಲ್ಟಾ ಆಗುತ್ತೆ ನೋಡಿ ಎಂದು ಗುಡುಗಿದ್ದಾರೆ.

ಇದನ್ನೂ ಓದಿ : Siddaramaiah : 'ಮುಂದಿನ ಚುನಾವಣೆಯೇ ಕೊನೆ, ಮತ್ತೆ ಚುನಾವಣಾ ರಾಜಕಾರಣ ಮಾಡಲ್ಲ'

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Read More