Home> Karnataka
Advertisement

ಟ್ರ್ಯಾಕ್ಟರ್‌ಗೆ ಬಸ್‌ ಡಿಕ್ಕಿ; ಇಬ್ಬರು ಸಾವು, 30ಕ್ಕೂ ಅಧಿಕ ಮಂದಿಗೆ ಗಾಯ

ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಬಸವನ ದುರ್ಗಾ ಕೆರೆ ಹೂಳೆತ್ತುವ ಕೆಲಸಕ್ಕೆ ಎಂದಿನಂತೆ ಟ್ರ್ಯಾಕ್ಟರ್ ನಲ್ಲಿ ಕುಳಿ ಕಾರ್ಮಿಕರು ತೆರಳುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. 
 

ಟ್ರ್ಯಾಕ್ಟರ್‌ಗೆ ಬಸ್‌ ಡಿಕ್ಕಿ; ಇಬ್ಬರು ಸಾವು, 30ಕ್ಕೂ ಅಧಿಕ ಮಂದಿಗೆ ಗಾಯ

ಬಳ್ಳಾರಿ: ಚಲಿಸುತ್ತಿದ್ದ ಟ್ರ್ಯಾಕ್ಟರ್ ಗೆ ರಾಜ್ಯ ಸಾರಿಗೆ ಸಂಸ್ಥೆ ಬಸ್ಸೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು 30ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಗುರುವಾರ ನಡೆದಿದೆ.

ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಹಾರುವನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಅಪಘಾತ ಸಂಭವಿಸಿದ್ದು, ಚಿಳಕನಹಟ್ಟಿಯ ರೇಣುಕಮ್ಮ(35), ಯರಿಸ್ವಾಮಿ(28) ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಬಸವನ ದುರ್ಗಾ ಕೆರೆ ಹೂಳೆತ್ತುವ ಕೆಲಸಕ್ಕೆ ಎಂದಿನಂತೆ ಟ್ರ್ಯಾಕ್ಟರ್ ನಲ್ಲಿ ಕುಳಿ ಕಾರ್ಮಿಕರು ತೆರಳುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. 

Read More