Home> Karnataka
Advertisement

ಮೌಢ್ಯಕ್ಕೆ ಸೆಡ್ಡು: ಮತ್ತೆ ಗಡಿಜಿಲ್ಲೆಗೆ ಭೇಟಿ ನೀಡಲಿದ್ದಾರೆ ಸಿಎಂ ಸಿದ್ದರಾಮಯ್ಯ

ಈ ಹಿಂದೆ ಮುಖ್ಯಮಂತ್ರಿಗಳಾದವರು ಚಾಮರಾಜನಗರಕ್ಕೆ ಭೇಟಿ ನೀಡಲು ಹಿಂದೇಟು ಹಾಕಿದರೇ ಸಿದ್ದರಾಮಯ್ಯ ಮಾತ್ರ ಮೌಢ್ಯಕ್ಕೆ ಸೊಪ್ಪು ಹಾಕದೇ ಗಡಿಜಿಲ್ಲೆಗೆ ಬುಧವಾರದಂದು ಭೇಟಿ ಕೊಡಲಿದ್ದಾರೆ.
 

ಮೌಢ್ಯಕ್ಕೆ ಸೆಡ್ಡು: ಮತ್ತೆ ಗಡಿಜಿಲ್ಲೆಗೆ ಭೇಟಿ ನೀಡಲಿದ್ದಾರೆ ಸಿಎಂ ಸಿದ್ದರಾಮಯ್ಯ

ಚಾಮರಾಜನಗರ: ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದಾಗ ಮೌಢ್ಯಕ್ಕೆ ಸೆಡ್ಡು ಹೊಡೆದು ಗಡಿಜಿಲ್ಲೆ ಚಾಮರಾಜನಗರಕ್ಕೆ ಭೇಟಿ ನೀಡಿದ್ದ ಸಿಎಂ ಸಿದ್ದರಾಮಯ್ಯ (CM Siddaramaiah), ಇದೀಗ ಎರಡನೇ ಅವಧಿಗೆ ಮುಖ್ಯಮಂತ್ರಿಯಾದ ಬಳಿಕ ನಾಲ್ಕನೇ ಬಾರಿಗೆ ಚಾಮರಾಜನಗರ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. 

ಸಿಎಂ ಆದ ಮೂರು ತಿಂಗಳಿಗೇ ಚಾಮರಾಜನಗರಕ್ಕೆ ಭೇಟಿ ಕೊಟ್ಟು ಕೆಡಿಪಿ ಸಭೆ ನಡೆಸಿದ್ದ ಸಿದ್ದರಾಮಯ್ಯ ಬಳಿಕ ಎರಡನೇ ಬಾರಿ ಭೇಟಿ ಕೊಟ್ಟು  ಚಾಮರಾಜನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಗ್ಯಾರಂಟಿ ಫಲಾನುಭವಿಗಳ ಸಮಾವೇಶ ನಡೆಸಿದರು.

ತದನಂತರ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ (Chamarajanagar Lok Sabha Constituency) ನಾಮಪತ್ರ ಸಲ್ಲಿಕೆ ವೇಳೆ ಚಾಮರಾಜನಗರದಲ್ಲಿ ರೋಡ್ ಶೋ ನಡೆಸಿ ಮತದಾರರ ಮನ ಗೆದ್ದಿದ್ದರು. ಈಗ ನಾಲ್ಕನೇ ಬಾರಿ ಚಾಮರಾಜನಗರ ಭೇಟಿ ಕೊಡುತ್ತಿದ್ದಾರೆ. 

ಕೃತಜ್ಞತಾ ಸಭೆ: 
ಜುಲೈ 10 ಕ್ಕೆ ಸಿಎಂ ಸಿದ್ದರಾಮಯ್ಯ (CM Siddaramaiah) ಜಿಲ್ಲಾ ಪ್ರವಾಸ ಕೈಗೊಂಡಿದ್ದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಮತದಾರರಿಗೆ ಕೃತಜ್ಞತಾ ಸಲ್ಲಿಕೆ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. 

ಇದನ್ನೂ ಓದಿ- ಇವರನ್ನೇ ಸಿಎಂ ಮಾಡಿ ಅಂತಾ ಹೇಳೋದು ಮಠಾಧೀಶರ ಕೆಲಸವಲ್ಲ: ಜಯಮೃತ್ಯುಂಜಯ ಸ್ವಾಮೀಜಿ

ಜು.10 ಬೆಳಗ್ಗೆ 11.10 ಕ್ಕೇ ಚಾಮರಾಜನಗರಕ್ಕೆ (Chamarajanagar) ಸಿಎಂ ಆಗಮಿಸಲಿದ್ದು, ಗೃಹಸಚಿವ ಡಾ. ಜಿ. ಪರಮೇಶ್ವರ್. ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್, ಎಚ್.ಸಿ. ಮಹದೇವಪ್ಪ, ಸತೀಶ್ ಜಾರಕಿಹೊಳಿ , ಜಮೀರ್ ಅಹಮದ್ ಹಾಗೂ ಸಂಸದ ಸುನಿಲ್ ಬೋಸ್ ಕಾರ್ಯಕ್ರಮದಲ್ಲಿ ಉಪಸ್ಥಿತಿ ಇರಲಿದ್ದಾರೆ. 

ಕೃತಜ್ಞತಾ ಸಭೆಯಲ್ಲಿ ಮೂವತ್ತು ಸಾವಿರಕ್ಕೂ ಹೆಚ್ಚಿನ ಜನ ಸೇರುವ ನಿರೀಕ್ಷೆ ಇದ್ದು ಕಾರ್ಯಕ್ರಮ ಮುಗಿಸಿ ಮದ್ಯಾಹ್ನ 3.30 ಕ್ಕೆ ಸಿಎಂ ವಾಪಸ್ಸಾಗಲಿದ್ದಾರೆ. 

ಸಿಎಂ ಲೋಕಸಭಾ ಕ್ಷೇತ್ರ: 
ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ಕ್ಷೇತ್ರವೂ (Varuna Constituency) ಕೂಡ ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡಲಿದೆ. 

ಇದನ್ನೂ ಓದಿ- ಮುಡಾ ನಿವೇಶನ ಹಂಚಿಕೆ ಪ್ರಕರಣ, ತನಿಖಾ ವರದಿ ಬಂದ ನಂತರ ತೀರ್ಮಾನ : ಸಿಎಂ

ಮೊದಲ ಅವಧಿಯಲ್ಲಿ 15 ಕ್ಕೂ ಹೆಚ್ಚು ಬಾರಿ ಭೇಟಿ: 
ಮೊದಲ ಬಾರಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ವೇಳೆ ಚಾಮರಾಜನಗರ ಜಿಲ್ಲಾಕೇಂದ್ರಕ್ಕೆ 15 ಕ್ಕೂ ಅಧಿಕ ಬಾರಿ ಭೇಟಿ ಕೊಟ್ಟು 5 ವರ್ಷ ಸುಭದ್ರವಾಗಿ ಆಡಳಿತ ನಡೆಸಿ ಚಾಮರಾಜನಗರಕ್ಕೆ ಅಂಟಿದ್ದ ಮೌಢ್ಯ ಅಳಿಸಿದ್ದರು. ಭೇಟಿ ನೀಡುವ ಜೊತೆಗೆ, ಸಾವಿರಾರು ಕೋಟಿ ಅನುದಾನವನ್ನೂ ಗಡಿಜಿಲ್ಲೆಗೆ ಹರಿಸಿದ್ದರು‌.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Read More