Home> Karnataka
Advertisement

Akhanda Srinivasa Murthy: 'ಸಿದ್ದರಾಮಯ್ಯ ಜೊತೆ ದಿಲ್ಲಿಗೆ ಹೋಗಿ ಡಿಕೆಶಿ ವಿರುದ್ಧ ದೂರು ನೀಡುತ್ತೇನೆ'

ಹೈಕಮಾಂಡ್ ನಾಯಕರನ್ನ ಭೇಟಿ ಮಾಡಿ ಡಿ ಕೆ ಶಿವಕುಮಾರ್ ವಿರುದ್ಧ ನಾನು ದೂರು ನೀಡುತ್ತೇನೆ ಎಂದು ಪುಲಿಕೇಶಿ ನಗರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಹೇಳಿದರು.

Akhanda Srinivasa Murthy: 'ಸಿದ್ದರಾಮಯ್ಯ ಜೊತೆ ದಿಲ್ಲಿಗೆ ಹೋಗಿ ಡಿಕೆಶಿ ವಿರುದ್ಧ ದೂರು ನೀಡುತ್ತೇನೆ'

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಸಿದ್ದರಾಮಯ್ಯರನ್ನು ಕರೆದುಕೊಂಡು ದಿಲ್ಲಿಗೆ ಹೋಗುತ್ತೇನೆ. ಹೈಕಮಾಂಡ್ ನಾಯಕರನ್ನ ಭೇಟಿ ಮಾಡಿ ಡಿ ಕೆ ಶಿವಕುಮಾರ್ ವಿರುದ್ಧ ನಾನು ದೂರು ನೀಡುತ್ತೇನೆ ಎಂದು ಪುಲಿಕೇಶಿ ನಗರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಹೇಳಿದರು.

ಶಾಸಕರ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಖಂಡ ಶ್ರೀನಿವಾಸ್ ಮೂರ್ತಿ(Akhanda Srinivasa Murthy) ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮೇಲೆ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದರು.

H Vishwanath: 'ಅವಕಾಶ ಸಿಕ್ಕರೆ ಖಂಡಿತಾ 'ಬಿಗ್​ ಬಾಸ್' ಮನೆಗೆ ಹೋಗುತ್ತೇನೆ'

ಪ್ರಸನ್ನ ಕುಮಾರ್ ರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಬೇಡಿ ಎಂದು ಹೇಳಿದ್ದೆ ಆದರೂ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದ್ದಾರೆ. ಒಬ್ಬ ಹಾಲಿ ಶಾಸಕ(MLA) ಇರಬೇಕಾದರೆ ಮತ್ತೊಬ್ಬ ನಾಯಕನನ್ನು ಕರೆದುಕೊಂಡು ಬಂದಿದ್ದಾರೆ. ಇದರಿಂದ ಕ್ಷೇತ್ರದಲ್ಲಿ ಗುಂಪುಗಾರಿಕೆ ಆಗುವುದು ಸಹಜ ಎಂದರು.

Kumar Bangarappa: ಮುನಿಸಿಕೊಂಡಿದ್ದ ಕುಮಾರ್ ಬಂಗಾರಪ್ಪ ಕೊನೆಗೂ ಸಂಧಾನ ಸಕ್ಸಸ್..!

ಡಿಕೆ ಶಿವಕುಮಾರ್(DK Shivakumar) ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಪಕ್ಷದಲ್ಲಿ ಅವರು ನನಗೆ ಬೆಂಬಲ ಕೊಟ್ಟಿಲ್ಲ.ನನ್ನ ಮನಗೆ ಬೆಂಕಿ ಬಿದ್ದಿದೆ, ನನಗೆ ನೋವಾಗಿದೆ. ನನಗೆ ಇದುವರೆಗೂ ನ್ಯಾಯ ಸಿಕ್ಕಿಲ್ಲ ಎಂದ ಅಖಂಡ ಶ್ರೀನಿವಾಸ ಮೂರ್ತಿ, ಪ್ರಸನ್ನ ಕುಮಾರ್ ಅವರು ನನ್ನ ಬಗ್ಗೆ ಅವನು, ಇವನು ಎಂದು ಮಾತಾನಾಡಿದ್ದು ತಪ್ಪು ಎಂದರು.

BS Yediyurappa: 'ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಫಿಕ್ಸ್'

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Read More