Home> Karnataka
Advertisement

ಸಮಯ ಬಂದರೆ ಪಕ್ಷ ಬಿಡಲು ಸಿದ್ಧ; ರೋಷನ್ ಬೇಗ್

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿದ ಕಾಂಗ್ರೆಸ್ ಹಿರಿಯ ನಾಯಕ ಶಾಸಕ ರೋಷನ್ ಬೇಗ್

ಸಮಯ ಬಂದರೆ ಪಕ್ಷ ಬಿಡಲು ಸಿದ್ಧ; ರೋಷನ್ ಬೇಗ್

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ವೈಫಲ್ಯಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರೇ ಸಂಪೂರ್ಣ ಹೊಣೆ ಎಂದು ರಾಜ್ಯ ಕಾಂಗ್ರೆಸ್ ನಾಯಕತ್ವದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಶಿವಾಜಿನಗರದ ಶಾಸಕ ರೋಷನ್ ಬೇಗ್ ಸಮಯ ಬಂದರೆ ಪಕ್ಷ ಬಿಡಲು ಸಿದ್ಧ ಎಂದಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ರೋಷನ್ ಬೇಗ್, ಚುನಾವಣೋತ್ತರ ಸಮೀಕ್ಷೆಗಳನ್ನು ನೋಡಿದರೆ ಬೇಸರವಾಗುತ್ತದೆ. ಈ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಕಡಿಮೆ ಸ್ಥಾನಗಳನ್ನು ಗಳಿಸಿದರೆ ಅದಕ್ಕೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅವರಂತಹ ಬಫೂನ್, ಸಿದ್ದರಾಮಯ್ಯರಂತಹ ಅಹಂಕಾರಿ ಮತ್ತು  ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರೇ ಹೊಣೆ ಎಂದು ವಾಗ್ಧಾಳಿ ನಡೆಸಿದರು.

ಇದೇ ವೇಳೆ ಮುಸ್ಲಿಮರು ಯಾವುದೇ ಪಕ್ಷಕ್ಕೂ ನಿಷ್ಠರಾಗಿರಬೇಕಿಲ್ಲ ಎಂದಿರುವ ಅವರು ಒಂದೊಮ್ಮೆ ಎನ್​ಡಿಎ ಅಧಿಕಾರಕ್ಕೆ ಬಂದರೆ ಹೊಂದಿಕೊಂಡು ಹೋಗಬೇಕಾಗುತ್ತದೆ ಎಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ.

Read More