Home> Karnataka
Advertisement

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಾಜೀನಾಮೆ

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ತಮ್ಮ ಐಎಎಸ್ ಸೇವೆಗೆ ಶುಕ್ರವಾರ ರಾಜೀನಾಮೆ ಸಲ್ಲಿಸಿದ್ದಾರೆ.
 

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಾಜೀನಾಮೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ತಮ್ಮ ಐಎಎಸ್ ಸೇವೆಗೆ ಶುಕ್ರವಾರ ರಾಜೀನಾಮೆ ಸಲ್ಲಿಸಿದ್ದಾರೆ.

"ನಮ್ಮ ವೈವಿಧ್ಯಮಯ ಪ್ರಜಾಪ್ರಭುತ್ವದ ಮೂಲಭೂತ ರಚನೆಗಳ ಜೊತೆ ಹಿಂದೆಂದೂ ಕಂಡಿರದಂತೆ ಅಭೂತಪೂರ್ವ ರೀತಿಯಲ್ಲಿ ರಾಜಿ ಮಾಡಿಕೊಳ್ಳುತ್ತಿರುವಾಗ ಸರ್ಕಾರದಲ್ಲಿ ನಾಗರಿಕ ಸೇವಕರಾಗಿ ಮುಂದುವರಿಯುವುದು ನನಗೆ ಅನೈತಿಕ ಎಂದು ಭಾವಿಸಿದ್ದರಿಂದ ನಾನು ಈ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ" ಎಂದು ಶಶಿಕಾಂತ್ ಸೆಂಥಿಲ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ತಮಿಳುನಾಡು ಮೂಲದವರಾದ ಸಸಿಕಾಂತ್ ಅವರು, "ಮುಂಬರುವ ದಿನಗಳಲ್ಲಿ ನಮ್ಮ ರಾಷ್ಟ್ರದ ಮೂಲ ಚೌಕಟ್ಟುಗಳು ಅತ್ಯಂತ ಕಷ್ಟಕರವಾದ ಸವಾಲುಗಳನ್ನು ಎದುರಿಸಲಿದೆ. ಹೀಗಾಗಿ ನಾನು ನನ್ನ ಐಎಎಸ್‌ ಸೇವೆಯಿಂದ ಹೊರಬರಲು ನಿರ್ಧರಿಸಿದ್ದು, ಎಲ್ಲರಿಗೂ ಒಳಿತು ಮಾಡಲು ಬಯಸಿದ್ದೇನೆ" ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅಷ್ಟೇ ಅಲ್ಲದೆ, ತಮ್ಮ ರಾಜೀನಾಮೆ ಸಂಪೂರ್ಣವಾಗಿ ವೈಯಕ್ತಿಕವಾದುದು ಮತ್ತು ಇದರಲ್ಲಿ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಯ ಪ್ರಭಾವವಿಲ್ಲ ಎಂದು ಸೆಂಥಿಲ್ ತಿಳಿಸಿದ್ದಾರೆ.

Read More