Home> Karnataka
Advertisement

ಪಾಕಿಸ್ತಾನಕ್ಕೆ ಎಚ್ಚರಿಕೆ ಸಂದೇಶ ರವಾನೆ: ಉಪಮುಖ್ಯಮಂತ್ರಿ

ಭಯೋತ್ಪಾದಕರ ದಾಳಿಯಿಂದ ನಮ್ಮ‌ 40 ಯೋಧರನ್ನು ಕಳೆದುಕೊಂಡಿದ್ದೆವು. ಅದಕ್ಕೆ ಪ್ರತಿಕಾರವಾಗಿ ಕೇಂದ್ರ ಸರ್ಕಾರ ಅತ್ಯಂತ ಸೂಕ್ತ ದಾಳಿ ಮಾಡಿದೆ.

ಪಾಕಿಸ್ತಾನಕ್ಕೆ ಎಚ್ಚರಿಕೆ ಸಂದೇಶ ರವಾನೆ: ಉಪಮುಖ್ಯಮಂತ್ರಿ

ಬೆಂಗಳೂರು: ಪಾಕಿಸ್ತಾನ ಉಗ್ರ ನೆಲೆಗಳ ಮೇಲೆ ಭಾರತೀಯ ಸೇನೆ ದಾಳಿ ಮಾಡಿರುವುದು ಸ್ವಾಗತಾರ್ಹ. ಈ ಮೂಲಕ ಎಚ್ಚರಿಕೆ ಸಂದೇಶವನ್ನು ಪಾಕಿಸ್ತಾನ ಹಾಗೂ ಉಗ್ರರಿಗೆ ರವಾನಿಸಿದಂತಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಹೇಳಿದರು.

ಸದಾಶಿವನಗರ ಕ್ವಾಟ್ರಸ್‌ನಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಪರಮೇಶ್ವರ್, ಭಯೋತ್ಪಾದಕರ ದಾಳಿಯಿಂದ ನಮ್ಮ‌ 40 ಯೋಧರನ್ನು ಕಳೆದುಕೊಂಡಿದ್ದೆವು. ಅದಕ್ಕೆ ಪ್ರತಿಕಾರವಾಗಿ ಕೇಂದ್ರ ಸರ್ಕಾರ ಅತ್ಯಂತ ಸೂಕ್ತ ದಾಳಿ ಮಾಡಿದೆ ಎಂದರು.

ಮುಂದುವರೆದು ಮಾತನಾಡಿದ ಅವರು, ಈ ರೂಪದಲ್ಲಿ ಉಗ್ರರಿಗೆ ಪಾಕಿಸ್ತಾನಕ್ಕೆ ಎಚ್ಚರಿಕೆಯ ಸಂದೇಶ ರವಾನೆಯಾಗಿದೆ. ದಾಳಿಯಿಂದ ಎಷ್ಟು ಉಗ್ರರು ಹತರಾಗಿದ್ದಾರೆ ಎಂಬ ಮಾಹಿತಿ ಇನ್ನಷ್ಟೆ ಸಿಗಬೇಕಿದೆ ಎಂದು ಹೇಳಿದರು.
 

Read More