ಬೆಂಗಳೂರು: ಆಪರೇಷನ್ ಕಮಲಕ್ಕೆ 1 ಸಾವಿರ ಕೋಟಿ ರೂ. ಬಳಕೆಯಾಗಿರುವುದಾಗಿ ಗಂಭೀರ ಆರೋಪ ಮಾಡಿರುವ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಭಾರತೀಯ ಜನತಾ ಪಕ್ಷ(ಬಿಜೆಪಿ) ಅವರಿಗೆ ಇಷ್ಟೊಂದು ಹಣ ಎಲ್ಲಿಂದ ಬಂತು ಎಂದು ಪ್ರಶ್ನಿಸಿದ್ದಾರೆ.
ಇದನ್ನು ಪ್ರಜಾಪ್ರಭುತ್ವ ವ್ಯವಸ್ಥೆ ಎಂದು ಕರೆಯಲು ಸಾಧ್ಯವೇ?
ಸೋಮವಾರ ಬಹುಮತ ಸಾಬೀತು ನೂರಕ್ಕೆ ನೂರು ಸತ್ಯ:
ಸೋಮವಾರವಾದರೂ ಬಹುಮತ ಸಾಬೀತಾಗಲಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ದಿನೇಶ್ ಗುಂಡೂರಾವ್, ಸೋಮವಾರದ ಕಲಾಪದಲ್ಲಿ ನಾವು ಬಹುಮತ ಸಾಬೀತು ಪಡಿಸುವುದು ನೂರಕ್ಕೆ ನೂರು ಸತ್ಯ ಎಂದು ತಿಳಿಸಿದರು.